ಬಾಲಯ್ಯನ ಎದುರು ತೊಡೆ ತಟ್ಟಲಿರುವ ಸ್ಯಾಂಡಲ್​ವುಡ್​ `ಸಲಗ’: ವಿಲನ್​ ಲುಕ್​ ರಿವೀಲ್​!

Duniya Vijay: ಬಾಲಯ್ಯನ ಎದುರು ತೊಡೆ ತಟ್ಟಲಿರುವ ಸ್ಯಾಂಡಲ್​ವುಡ್​ `ಸಲಗ': ವಿಲನ್​ ಲುಕ್​ ರಿವೀಲ್​!
ದುನಿಯಾ ವಿಜಯ್(Duniya Vijay)​.. ದುನಿಯಾ ಮೂಲಕ ನಾಯಕನಟನಾಗಿ ಎಂಟ್ರಿಯಾಗಿದ್ದರು. ಇತ್ತೀಚೆಗೆ ಬಿಡುಗಡೆಯಾದ ‘ಸಲಗ'(Salaga) ಸಿನಿಮಾ ಮೂಲಕ ನಿರ್ದೇಶಕರಾಗಿ ಬಡ್ತಿ ಪಡೆದವರು. ಸಲಗ ಸಿನಿಮಾದಲ್ಲಿ ನಟನೆ ಜೊತೆ ನಿರ್ದೇಶಕ(Director) ಜವಾಬ್ದಾರಿ ಹೊತ್ತು ದುನಿಯಾ ವಿಜಯ್​ ಸಕ್ಸಸ್​ ಆಗಿದ್ದಾರೆ.
ಸ್ಯಾಂಡಲ್​ವುಡ್​(Sandalwood)ನಲ್ಲಿ ಕರಿಚಿರತೆ ಸಾಮರ್ಥ್ಯ ಏನು ಎಂಬುದನ್ನು ಸಲಗ ಸಿನಿಮಾ ಮೂಲಕ ತೋರಿಸಿಕೊಟ್ಟಿದ್ದಾರೆ. ಸಲಗ ಬಳಿಕ ದುನಿಯಾ ವಿಜಯ್‌ಗೆ ಮತ್ತೊಂದು ಅದೃಷ್ಟದ ಬಾಗಿಲು ತೆರೆದಿದೆ. ದುನಿಯಾ ವಿಜಯ್‌ ತೆಲುಗಿ(Telugu)ಗೆ ಎಂಟ್ರಿ ಕೊಡ್ತಿದ್ದಾರೆ. ಈ ವಿಚಾರ ಹಲವು ದಿನಗಳಿಂದ ಹರಿದಾಡುತ್ತಿದೆ. ದುನಿಯಾ ವಿಜಯ್ ಸೈಡ್ ಆರ್ಟಿಸ್ಟ್​, ಜೂನಿಯರ್ ಆರ್ಟಿಸ್ಟ್​, ಫೈಟರ್​ ಆಗಿ ಸ್ಯಾಂಡಲ್​ವುಡ್​ನಲ್ಲಿ ನೆಲೆ ಕಂಡುಕೊಳ್ಳಲು ಹೋರಾಟ ನಡೆಸಿದವರು. ಟೈಗರ್​ ಪ್ರಭಾಕರ್​ರಂತೆ ಮಾಸ್(Mass)​ ಸಿನಿಮಾಗಳಿಗೆ ದುನಿಯಾ ವಿಜಯ್ ಟ್ರೇಡ್​ ಮಾರ್ಕ್ ಆದವರು. ಸಲಗ ಸಿನಿಮಾ ಮೂಲಕ ಸ್ಯಾಂಡಲ್​ವುಡ್​ನಲ್ಲಿ ಸೆಕಂಡ್​ ಇನ್ನಿಂಗ್ಸ್​ ಆರಂಭಿಸಿದ್ದಾರೆ. ಇದೀಗ ಹೊಸ ವಿಚಾರ ಏನಪ್ಪ ಅಂದರೆ, ದುನಿಯಾ ವಿಜಯ್​ ಟಾಲಿವುಡ್(Tollywood)​ ಅಖಂಡ(Akhanda)ನ ವಿರುದ್ಧ ತೊಡೆ ತಟ್ಟಲಿದ್ದಾರೆ.

ಬಾಲಯ್ಯನ ಎದುರು ದುನಿಯಾ ವಿಜಯ್​!
ಸಲಗ ಚಿತ್ರದ ಬಳಿಕ ತೆಲುಗು ಚಿತ್ರರಂಗದ ಕಡೆ ವಿಜಯ್ ಹೆಜ್ಜೆ ಇಟ್ಟಿದ್ದಾರೆ. ತೆಲುಗಿನ ಸ್ಟಾರ್ ನಟ ನಂದಮೂರಿ ಬಾಲಕೃಷ್ಣ ಅವರ ಮುಂದಿನ ಚಿತ್ರದಲ್ಲಿ ನಟ ದುನಿಯಾ ವಿಜಯ್ ಅಭಿನಯಿಸುತ್ತಿದ್ದಾರೆ. ಈ ಚಿತ್ರಕ್ಕೆ ಕ್ರ್ಯಾಕ್ ಡೈರೆಕ್ಟರ್ ಗೋಪಿ ಚಂದ್ ಮಾಲಿನೇನಿ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ದುನಿಯಾ ವಿಜಯ್​ ಯಾವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಾರೆ? ಯಾವ ಲುಕ್​ನಲ್ಲಿ ಕಾಣಿಸಿಕೊಳ್ಳುತ್ತಾರೆ ಎನ್ನುವ ಬಗ್ಗೆ ಸಾಕಷ್ಟು ಕುತೂಹಲಗಳು ಹುಟ್ಟಿಕೊಂಡಿದೆ. ಅದಕ್ಕೆಲ್ಲಾ ಈಗ ಉತ್ತರ ಸಿಕ್ಕಿದೆ. ದುನಿಯಾ ವಿಜಯ್​ ಅವರ ಮುಂದಿನ ಟಾಲಿವುಡ್ ಸಿನಿಮಾದ ಲುಕ್​ ರಿವೀಲ್​ ಆಗಿದೆ. ಕರಿಚಿರತೆ ನ್ಯೂ ಲುಕ್​ ಕಂಡು ಫ್ಯಾನ್ಸ್​ ಫುಲ್​ ಥ್ರಿಲ್​ ಆಗಿದ್ದಾರೆ.

ಬಿಳಿ ಗಡ್ಡ, ಮೀಸೆ ಬಿಟ್ಟ ‘ಸಲಗ’!
ನಟ ದುನಿಯಾ ವಿಜಯ್‌ ಅವರು ಇತ್ತೀಚೆಗೆ ಬಡವ ರಾಸ್ಕಲ್ ಚಿತ್ರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ವಿಜಯ್‌ ವಿಭಿನ್ನ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಸದ್ಯ ದುನಿಯಾ ವಿಜಯ್‌ ಲುಕ್‌ ಸಿಕ್ಕಾಪಟ್ಟೆ ಬದಲಾಗಿದೆ. ದುನಿಯಾ ವಿಜಯ್‌ ಉದ್ದನೆಯ ಬಿಳಿ ಗಡ್ಡ, ಮೀಸೆ ಬಿಟ್ಟಿದ್ದಾರೆ. ಈ ಲುಕ್‌ ಅವರು ತೆಲುಗು ಚಿತ್ರಕ್ಕಾಗಿ ಮಾಡಿಕೊಂಡಿರುವುದು ಎಂದು ಎನ್ನಲಾಗಿದೆ. ಈ ಹಿಂದೆ ಮಾಸ್ತಿಗುಡಿ ಚಿತ್ರದಲ್ಲಿ ವಯಸ್ಸಾದವರ ಪಾತ್ರಕ್ಕಾಗಿ ದುನಿಯಾ ವಿಜಯ್​ ಬಿಳಿ ಗಡ್ಡ ಮೀಸಿ ಬಿಟ್ಟಿದ್ದರು. ಆದರೆ ಬಾರಿ ಸಖತ್​ ಸ್ಟೈಲಿಶ್​ ಆಗಿ ಕಾಣಿಸಿದ್ದಾರೆ. ಇದು ಪಕ್ಕಾ ಆ ಪಾತ್ರಕ್ಕೆ ದುನಿಯಾ ವಿಜಯ್​ ಹೀಗೆ ರೆಡಿಯಾಗುತ್ತಿದ್ದಾರೆ ಎಂದು ಫ್ಯಾನ್ಸ್​ ಮಾತನಾಡಿಕೊಳ್ಳುತ್ತಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಕ್ರೈಸ್ತರ ಮೇಲೆ ದಾಳಿ: 'ಎರಡೂ ಕಡೆಯಿಂದಲೂ ತಪ್ಪಾಗಿದೆ' ಎಂದ ಸಚಿವ ಆರಗ ಜ್ಞಾನೇಂದ್ರ

Fri Dec 24 , 2021
ಬೆಳಗಾವಿ, ಡಿಸೆಂಬರ್‌ 24: “ಕರ್ನಾಟಕದಲ್ಲಿ ಕ್ರೈಸ್ತರ ಮೇಲಿನ ಸರಣಿ ದಾಳಿಗೆ ಭಾಗಶಃ ಅವರ ತಪ್ಪುಗಳು ಕೂಡಾ ಕಾರಣ,” ಎಂದು ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಎನ್‌ಡಿಟಿವಿಗೆ ಪ್ರತಿಕ್ರಿಯೆ ನೀಡುತ್ತಾ ಹೇಳಿದ್ದಾರೆ. “ಎರಡೂ ಕಡೆಯಿಂದಲೂ ತಪ್ಪು ನಡೆದಿದೆ,” ಎಂದಿದ್ದಾರೆ. ಕ್ರಿಸ್‌ಮಸ್‌ಗೆ ಎರಡು ದಿನಗಳ ಮೊದಲು, ವ್ಯಾಪಕ ಪ್ರತಿಭಟನೆಗಳ ನಡುವೆ ರಾಜ್ಯವು ವಿವಾದಾತ್ಮಕ ಮತಾಂತರ ವಿರೋಧಿ ಮಸೂದೆಯನ್ನು ಅಂಗೀಕಾರ ಮಾಡಿದೆ. ಈ ಬೆನ್ನಲ್ಲೇ ಕರ್ನಾಟಕದಲ್ಲಿ ಕ್ರೈಸ್ತರ ಮೇಲೆ ಹೆಚ್ಚಾದ ದಾಳಿಯ ಬಗ್ಗೆ […]

Advertisement

Wordpress Social Share Plugin powered by Ultimatelysocial