SANDALWOOD:ದುನಿಯಾ ವಿಜಯ್, ಸಾಧು ಕೋಕಿಲ, ಉಮಾಶ್ರೀ ವಿರುದ್ಧ ಪ್ರಕರಣ ದಾಖಲು;

ದುನಿಯಾ ವಿಜಯ್, ಸಾಧು ಕೋಕಿಲ, ಉಮಾಶ್ರೀ ವಿರುದ್ಧ ಪ್ರಕರಣ ದಾಖಲು

ನಟ ದುನಿಯಾ ವಿಜಯ್, ಸಾಧು ಕೋಕಿಲ, ನಟಿ, ರಾಜಕಾರಣಿ ಉಮಾಶ್ರೀ ಹಾಗೂ ಜಯಮಾಲಾ ವಿರುದ್ಧ ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೇಲ್ಕಂಡ ಈ ಮೂವರು ನಟರು ಕಾಂಗ್ರೆಸ್ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆ ಉದ್ಘಾಟನೆಯಲ್ಲಿ ಭಾಗಿಯಾಗಿದ್ದರು.

ಕೋವಿಡ್ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ಕಾರ್ಯಕ್ರಮದಲ್ಲಿ ಹಾಜರಿದ್ದ ಹಲವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಅದರಲ್ಲಿ ದುನಿಯಾ ವಿಜಯ್, ಸಾಧು ಕೋಕಿಲ, ಉಮಾಶ್ರೀ ಹಾಗೂ ನಟಿ ಜಯಮಾಲಾ ವಿರುದ್ಧವೂ ಪ್ರಕರಣ ದಾಖಲಾಗಿದೆ.

ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಒಟ್ಟು 31 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಅದರಲ್ಲಿ ಉಮಾಶ್ರೀ ಅವರನ್ನು ಆರೋಪಿ ನಂಬರ್ 8. ಸಾಧುಕೋಕಿಲ ಎ 27 , ಸಾ.ರಾ.ಗೋವಿಂದು ಎ 28 , ಜಯಮಾಲ ಎ29 , ದುನಿಯಾ ವಿಜಯ್ ಎ30 ಆಗಿದ್ದಾರೆ.

ಪ್ರಕರಣ ಕುರಿತಾಗಿ ಎಫ್‌ಐಆರ್ ದಾಖಲಾಗಿದ್ದು ಮೊದಲ ಆರೋಪಿ ಡಿ.ಕೆ.ಶಿವಕುಮಾರ್ ಹಾಗೂ ಎರಡನೇ ಆರೋಪಿ ಸಿದ್ದರಾಮಯ್ಯ ಆಗಿದ್ದಾರೆ.

ರಾಜ್ಯದಲ್ಲಿ ಕೋವಿಡ್ ಹೆಚ್ಚಳ ಆಗುತ್ತಿದ್ದು, ಸರ್ಕಾರವು ವೀಕೆಂಡ್ ಕರ್ಪ್ಯೂ ಹಾಗೂ ನೈಟ್ ಕರ್ಪ್ಯೂ ಹೇರಿದೆ. ಹಾಗಿದ್ದರೂ ಕಾಂಗ್ರೆಸ್ ಪಕ್ಷವು ಇತರ ಕೆಲವು ಸಂಘಟನೆಗಳೊಟ್ಟಿಗೆ ಸೇರಿ ಮೇಕೆದಾಟು ಯೋಜನೆ ಅನುಷ್ಟಾನಕ್ಕೆ ಒತ್ತಾಯಿಸಿ ಪಾದಯಾತ್ರೆ ಮಾಡುತ್ತಿದ್ದು, ಸರ್ಕಾರವು ಈ ಪಾದಯಾತ್ರೆಗೆ ವಿರೋಧ ವ್ಯಕ್ತಪಡಿಸಿದೆ. ರಾಮನಗರ ಜಿಲ್ಲಾಧಿಕಾರಿಗಳು ಈಗಾಗಲೇ ತಿಳಿವಳಿಕೆ ಪತ್ರವನ್ನು ನೀಡಿದ್ದರಾದರೂ ಡಿ.ಕೆ.ಶಿವಕುಮಾರ್ ಅವರು ಯಾವುದೇ ಕಾರಣಕ್ಕೂ ನಾವು ಪಾದಯಾತ್ರೆ ನಿಲ್ಲಿಸುವುದಿಲ್ಲ ಎಂದಿದ್ದಾರೆ.

ಮೇಕೆದಾಟು ಪಾದಯಾತ್ರೆಗೆ ಚಲನಚಿತ್ರ ವಾಣಿಜ್ಯ ಮಂಡಳಿ ಪೂರ್ಣ ಬೆಂಬಲ ನೀಡಿದೆ. ಜೊತೆಗೆ ಹಲವು ನಟರು ವೈಯಕ್ತಿಕವಾಗಿ ಬೆಂಬಲ ವ್ಯಕ್ತಪಡಿಸಿದ್ದಾರೆ ಹಾಗೂ ಹಲವರು ಪಾದಯಾತ್ರೆಯಲ್ಲಿ ಖುದ್ದಾಗಿ ಪಾಲ್ಗೊಂಡಿದ್ದಾರೆ.

ನಟ ಶಿವರಾಜ್ ಕುಮಾರ್ ಸಹ ಪಾದಯಾತ್ರೆಗೆ ಬೆಂಬಲ ನೀಡಿದ್ದಾರೆ ಎನ್ನಲಾಗಿದೆ. ಪಾದಯಾತ್ರೆ ಉದ್ಘಾಟನೆ ಸಮಾರಂಭದಲ್ಲಿ ಶಿವಣ್ಣ ಭಾಗಿಯಾಗಲಿದ್ದರು ಆದರೆ ಜನ ಹೆಚ್ಚಾದ ಕಾರಣ ಕನಕಪುರದ ವೆರಗೆ ಬಂದಿದ್ದ ಶಿವರಾಜ್ ಕುಮಾರ್ ಅಲ್ಲಿಂದ ವಾಪಸ್ಸಾದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

SANDALWOOD:ದರ್ಶನ್,ಸುದೀಪ್,ಯಶ್ ಒಂದಾಗೋದ್ಯಾವಾಗ?

Tue Jan 11 , 2022
ಕನ್ನಡ ಚಿತ್ರ ರಂಗದಲ್ಲಿ ಸ್ಟಾರ್‌ ನಟರು ಅಂತ ಬಂದಾಗ ಬೆರಳೆಣಿಕೆಯಷ್ಟು ಮಂದಿ ಮಾತ್ರ ಇದ್ದಾರೆ. ಹೀಗಿರೋವಾಗ ನಮ್ಮ ಹೀರೋಗಳ ನಡುವೆ ಸಾಕಷ್ಟು ಹೊಂದಾಣಿಕೆ ಇರುವುದು ಅನುಮಾನವೇನಲ್ಲ. ಆದರೆ ಹೊಂದಾಣಿಕೆ ಅಥವಾ ಎಲ್ಲರೂ ಒಂದೇ ಎನ್ನುದಕ್ಕಿಂದ ಹೆಚ್ಚಾಗಿ ಸ್ಟಾರ್‌ ವಾರ್ ಸದಾ ಸದ್ದು ಮಾಡುತ್ತದೆ. ಕನ್ನಡ ಚಿತ್ರರಂಗದಲ್ಲಿ ಸ್ಟಾರ್‌ವಾರ್ ಕಣ್ಣಿಗೆ ಕಂಡರು, ಕಾಣದಂತೆ ಇದೆಯಾ ಎನ್ನುವ ಅನುಮಾನ ಮೂಡಿದೆ. ಸ್ಟಾರ್‌ವಾರ್‌ ಬಗ್ಗೆ ಈಗ ಮಾತನಾಡಲು ಕಾರಣ ನಟ ರಾಕಿಂಗ್ ಸ್ಟಾರ್‌ ಯಶ್. […]

Advertisement

Wordpress Social Share Plugin powered by Ultimatelysocial