ಬೆಳ್ಳಂ ಬೆಳ್ಳಗೆ ದೀಡಿರ್ ಪ್ರತಿಭಟನೆ ನಡೆಸಿದರು!

ಹನೂರು : ಸಮರ್ಪಕ ಕೆ ಎಸ್ ಆರ್ ಟಿ ಸಿ ಬಸ್ ವ್ಯವಸ್ಥೆ ಇಲ್ಲದ ಪರಿಣಾಮ ಶಾಲಾ ಕಾಲೇಜು ವಿದ್ಯಾರ್ಥಿಗಳು ಇಂದು ಬೆಳ್ಳಂ ಬೆಳ್ಳಗೆ ದೀಡಿರ್ ಪ್ರತಿಭಟನೆ ನಡೆಸಿದರು.ಶುಕ್ರವಾರ ಜಾತ್ರಾ ಮಹೋತ್ಸವದ ಪ್ರಯುಕ್ತ ಮಲೆ ಮಾದೇಶ್ವರ ಬೆಟ್ಟಕ್ಕೆ ನೂರಾರು ಹೆಚ್ಚುವರಿ ಬಸ್ ಗಳನ್ನು ಬಿಡಲಾಗಿತ್ತು. ಆದರೆ ಈ ವಿಶೇಷ ಬಸ್ ಗಳಲ್ಲಿ, ಪಾಸ್ ಇರುವ ಮಕ್ಕಳನ್ನು ಕರೆದುಕೊಂಡು ಹೋಗದ ಹಿನ್ನೆಲೆ ಸಾವಿರಾರು ವಿದ್ಯಾರ್ಥಿಗಳು ಹನೂರು ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಎಲ್ಲಾ ಕೆಎಸ್ಆರ್ ಟಿಸಿ ಬಸ್ ಗಳನ್ನು ತಡೆದು ಪ್ರತಿಭಟನೆ ನಡೆಸಿದರು.ವಿದ್ಯಾರ್ಥಿಗಳ ಆಕ್ರೋಶ : ವಿಶೇಷ ಜಾತ್ರ ಹಬ್ಬ ಹರಿದಿನ ಸಂದರ್ಭದಲ್ಲಿ ನಮಗೆ ಶಾಲಾ-ಕಾಲೇಜುಗಳಿಗೆ ಹೋಗಲು ತೊಂದರೆಯಾಗುತ್ತಿದೆ ಈ ಬಗ್ಗೆ ಹಲವಾರು ಬಾರಿ ಡಿಪೋ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದ್ದರು ಯಾವುದೇ ಪ್ರಯೋಜನವಾಗಿಲ್ಲ. ಕಾಲೇಜಿನಲ್ಲಿ 10 ನಿಮಿಷ ತಡವಾಗಿ ಹೋದರು ಸಹ ನಮ್ಮನ್ನು ಕಾಲೇಜಿಗೆ ಸೇರಿಸಿಕೊಳ್ಳುವುದಿಲ್ಲ, ಇದರಿಂದ ನಮಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಕುರಟ್ಟಿ ಹೊಸೂರು ಗ್ರಾಮದ ನವ್ಯಶ್ರೀ ಮಾತನಾಡಿ ಕೆಎಸ್ಆರ್ಟಿಸಿ ಬಸ್ ನ ನಿರ್ವಾಹಕರು ಹಾಗೂ ಚಾಲಕರು ವಿದ್ಯಾರ್ಥಿಗಳ ಜೊತೆ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದಾರೆ. ನಾವು ಮೊದಲೇ ಹಣ ಪಾವತಿ ಮಾಡಿ ಬಸ್ ಪಾಸ್ ಪಡೆದಿದ್ದರು ಸಹ ಯಾವುದೇ ಪ್ರಯೋಜನವಾಗುತ್ತಿಲ್ಲ ಸಾರಿಗೆ ಇಲಾಖೆ ಅಧಿಕಾರಿಗಳು ಸರಿಯಾಗಿ ಸ್ಪಂದಿಸದೆ ಇರುವುದರಿಂದ ನಮ್ಮ ಶಿಕ್ಷಣಕ್ಕೆ ತೊಂದರೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de….

 

 

 

 

 

 

Please follow and like us:

Leave a Reply

Your email address will not be published. Required fields are marked *

Next Post

ಶೀಘ್ರವೇ ನೆಟ್‌ಫ್ಲಿಕ್ಸ್ ಪಾಸ್‌ವರ್ಡ್ ಶೇರಿಂಗ್ ಕಾನೂನುಬಾಹಿರವಾಗಲಿದೆ.

Sat Dec 24 , 2022
    ನೆಟ್‌ಫ್ಲಿಕ್ಸ್, ಪ್ರೈಮ್, ಹಾಟ್‌ಸ್ಟಾರ್, ವೂಟ್ ಯಾವುದೇ ಆನ್‌ಲೈನ್ ಸ್ಟ್ರೀಮಿಂಗ್ ಆಪ್‌ಗಳಲಾಗಲಿ, ಒಮ್ಮೆ ನಾವು ಲಾಗಿನ್ ಆದರೆ ನಮ್ಮ ಕುಟುಂಬಸ್ಥರೊಗೆ ಅಥವಾ ಸ್ನೇಹಿತರಿಗೆ ಅದರ ಪಾಸ್‌ವರ್ಡ್ ನೀಡುವುದು ಅಭ್ಯಾಸವಾಗಿದೆ. ಇನ್ನೂ ಕೆಲವು ಸ್ನೇಹಿತರು ಹಣವನ್ನು ಶೇರಿಂಗ್ ಮಾಡಿಕೊಂಡು ನೆಟ್‌ಫ್ಲಿಕ್ಸ್ ಪಾಸ್‌ವರ್ಡ್ ಅನ್ನು ಕೂಡಾ ಶೇರಿಂಗ್ ಮಾಡುತ್ತಾರೆ.ಆದರೆ ಈ ಒಂದು ದೇಶದಲ್ಲಿ ಶೀಘ್ರವೇ ನೆಟ್‌ಫ್ಲಿಕ್ಸ್ ಪಾಸ್‌ವರ್ಡ್ ಶೇರಿಂಗ್ ಕಾನೂನುಬಾಹಿರವಾಗಲಿದೆ.ಇಂಟಾಲ್ಯಾಕ್ಚುವಲ್ ಪ್ರಾಪರ್ಟಿ ಆಫೀಸ್ (ಐಪಿಒ) ಪ್ರಕಾರ ನೆಟ್‌ಫ್ಲಿಕ್ಸ್ ಪಾಸ್‌ವರ್ಡ್ ಅನ್ನು ಕುಟುಂಬ […]

Advertisement

Wordpress Social Share Plugin powered by Ultimatelysocial