ಮುಂಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆ-2023ರ ಪೂರ್ವ ಸಿದ್ಧತೆಯ ಸಂಬಂಧ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರ ನೇತೃತ್ವದಲ್ಲಿ ಸಭೆ ನಡೆಯಿತು.
ಸೂಕ್ಷ್ಮ ಪ್ರದೇಶಗಳನ್ನು ಮ್ಯಾಪಿಂಗ್ ಮಾಡುವ ಸಲುವಾಗಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಸಹಾಯಕ ಚುನಾವಣಾಧಿಕಾರಿ ಹಾಗೂ ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಿ ಅದರ ಪಟ್ಟಿಯನ್ನು ಸಲ್ಲಿಸಲು ಅಪರ ಜಿಲ್ಲಾ ಚುನಾವಣಾ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಸಲುವಾಗಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪಾಲಿಕೆ ಹಾಗೂ ಪೊಲೀಸ್ ಇಲಾಖೆ ವತಿಯಿಂದ ತೆಗೆದಿಕೊಳ್ಳಬೇಕಿರುವ ಕ್ರಮಗಳು, ಸೂಕ್ಷ್ಮ ವಿಧಾನ ಸಭಾ ಕ್ಷೇತ್ರಗಳು ಹಾಗೂ ಸೂಕ್ಷ್ಮ ಮತಗಟ್ಟೆಗಳ ಬಗ್ಗೆ ಚರ್ಚಿಸಲಾಯಿತು.
ಸಭೆಯಲ್ಲಿ ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಉಜ್ವಲ್ ಕುಮಾರ್ ಘೋಷ್, ಅಪರ ಜಿಲ್ಲಾ ಚುನಾವಣಾಧಿಕಾರಿಗಳಾದ ದಯಾನಂದ್(ಬೆಂಗಳೂರು ನಗರ), ಡಾ. ಹರೀಶ್ ಕುಮಾರ್(ಕೇಂದ್ರ), ವೆಂಕಟಾ ಚಲಪತಿ(ಉತ್ತರ), ಜಗದೀಶ್ ನಾಯ್ಕ್(ದಕ್ಷಿಣ), ಜಂಟಿ ಪೊಲೀಸ್ ಆಯುಕ್ತರಾದ ಶರಣಪ್ಪ, ಉಪ ಪೊಲೀಸ್ ಆಯುಕ್ತರು ಹಾಗೂ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು. ಉಪಸ್ಥಿತರಿದ್ದರು.
https://play.google.com/store/apps/details?id=com.speed.newskannada