ಇದು ಭರವಸೆಗಳ ಸರ್ಕಾರ, ಬಿರಿಪೋರ್ಟ್ ಸರ್ಕಾರ.
ರಾಜ್ಯದಲ್ಲಿ ಸಾಕಷ್ಟು ಭ್ರಷ್ಟಾಚಾರ ಹಾಗೂ ಹಗರಣಗಳ ಬಗ್ಗೆ ಇನ್ನೂ ಉತ್ತರ ಸಿಕ್ಕಿಲ್ಲ.
ಪಿಎಸ್ಐ ನೇಮಕಾತಿ, ಲೋಕೋಪಯೋಗಿ ಇಲಾಖೆ ಪ್ರತಿಯೊಂದು ಕಾಮಗಾರಿಯಲ್ಲಿ ಕಮಿಷನ್ ಈ ಪ್ರಶ್ನೆ ಮಾಡಿದ ಕೆಂಪಣ್ಣ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ.
ಈ ಎಲ್ಲ ಪ್ರಶ್ನೆಗಳಿಗೆ ಮೋದಿಯವರು ಉತ್ತರ ಕೊಡಲಿ.
ಹುಬ್ಬಳ್ಳಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ.
ಚುನಾವಣೆ ಬಂದಿದೆ ಎಂದು ಮೋದಿಯವರು ರಾಜ್ಯಕ್ಕೆ ಮೇಲಿಂದ ಮೇಲೆ ಬರ್ತಿದ್ದಾರೆ.
ರಾಜ್ಯದಲ್ಲಿ ಸಾಕಷ್ಟು ಸಮಸ್ಯೆಗಳು ತಾಂಡವಾಡುತ್ತಿವೆ.
ಲಂಬಾಣಿ ಜನಕ್ಕೆ ಹಕ್ಕುಪತ್ರ ನೀಡಲು ಮೋದಿ ಬಂದಿದ್ದಾರೆ, ಇದರಲ್ಲಿ ಏನೂ ವಿಶೇಷವಿಲ್ಲ.
ಮೋದಿಯವರಿಗೆ ಈಗ ಏಕಾಏಕಿ ಅಲ್ಪಸಂಖ್ಯಾತರ ಮೇಲೆ ಪ್ರೀತಿ ಬಂದಿದೆ.
ಚುನಾವಣೆಗಾಗಿ ಅಲ್ಪಸಂಖ್ಯಾತರನ್ನ ಓಲೈಕೆ ಮಾಡಲಾಗುತ್ತಿದೆ.
ಅಲ್ಪಸಂಖ್ಯಾತರ ಮೇಲೆ ಎಷ್ಟು ಕಾಳಜಿ ಇದೆ ಎಂಬುದು ನಮಗೆ ಗೊತ್ತು.
ರೈತರಿಗೆ ಹಣ ಏಕೆ ಡಬಲ್, ಆಗಲಿಲ್ಲ, ಗ್ಯಾಸ್ ಬೆಲೆ ಇಳಿಕೆ ಆಗಿಲ್ಲ.
https://play.google.com/store/apps/details?id=com.speed.newskannada