ಚುನಾವಣಾ ಪ್ರಚಾರ ಮತ್ತು ಶೇ.40ರಷ್ಟು ಲೂಟಿಗಷ್ಟೆ ಬಿಜೆಪಿ ಪ್ರಾಮುಖ್ಯತೆ ಕಾಂಗ್ರಸ್‌ ಟೀಕೆ!

ಬೆಂಗಳೂರು: ರಾಜ್ಯದಲ್ಲಿ ಕಾಡ್ಗಿಚ್ಚು ವ್ಯಾಪಿಸುತ್ತಿದ್ದರೂ ಅದರತ್ತ ಗಮನ ಹರಿಸದೇ ಆಡಳಿತಾರೂಢ ಬಿಜೆಪಿ ಸರ್ಕಾರ ಚುನಾವಣಾ ಪ್ರಚಾರ ಮತ್ತು ಶೇ.40ರಷ್ಟು ಲೂಟಿಗಷ್ಟೆ ಪ್ರಾಮುಖ್ಯತೆ ನೀಡುತ್ತಿದೆ ಎಂದು ಕಾಂಗ್ರೆಸ್ ಟೀಕಿಸಿದೆ.
ರಾಜ್ಯದ ಹಲವೆಡೆ ದಿನದಿನಕ್ಕೂ ಕಾಡ್ಗಿಚ್ಚು ವ್ಯಾಪಿಸುತ್ತಿದೆ.

ಬೆಂಕಿ ನಂದಿಸಲು ಶ್ರಮಿಸುತ್ತಿರುವ ಅರಣ್ಯ ಇಲಾಖೆ ಸಿಬ್ಬಂದಿ ಶಸ್ತ್ರವಿಲ್ಲದೆ ಯುದ್ಧ ಮಾಡುವ ದುಃಸ್ಥಿತಿ ಬಂದೊದಗಿದೆ. ಅಪಾರ ಪ್ರಮಾಣದ ಅರಣ್ಯ ಸಂಪತ್ತು, ಪ್ರಾಣಿ ಪಕ್ಷಿಗಳು ಹಾಗೂ ಕಾಡಂಚಿನ ಜನರ ಅರಣ್ಯ ರೋಧನ ಸರ್ಕಾರಕ್ಕೆ ಕೇಳಿಸುತ್ತಿಲ್ಲ ಎಂದು ಪ್ರಶ್ನಿಸಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಶೇ.40ರಷ್ಟು ಕಮಿಷನ್ ಲೂಟಿಯೇ ಮುಖ್ಯವಾಗಿದೆಯೇ ? ಆಡಳಿತ ನಡೆಸುವುದನ್ನು ಬಿಟ್ಟು ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿರುವುದೇಕೆ ಎಂದು ಕಾಂಗ್ರೆಸ್ ಕಿಡಿಕಾರಿದೆ.
ಬೆಂಕಿ ನಂದಿಸಲು ಹೆಲಿಕಾಪ್ಟರ್ ಬಳಸುವ ಬಗ್ಗೆ ಕ್ರಮ ಕೈಗೊಳ್ಳಬೇಕು. ಹೆಲಿಕಾಫ್ಟರ್ ಪಡೆಯಲು ಕೇಂದ್ರ ಸರ್ಕಾರದ ನೆರವು ಪಡೆಯಬೇಕು. ಇದಕ್ಕಾಗಿ ಮುಖ್ಯಮಂತ್ರೆ ಮತ್ತೆ ದೆಹಲಿಗೆ ಹೋಗಬೇಕಿಲ್ಲ, ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೇ ಇಲ್ಲಿಗೇ ಬರುತ್ತಿದ್ದಾರೆ. ಅವರೊಂದಿಗೆ ಮಾತನಾಡಿ ಬೆಂಕಿ ನಂದಿಸಲು ಹೆಲಕಾಫ್ಟರ್ ಸೌಲಭ್ಯವನ್ನು ಪಡೆದುಕೊಳ್ಳಿ ಎಂದು ಕಾಂಗ್ರೆಸ್ ಸಲಹೆ ನೀಡಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕಾಂಗ್ರೆಸ್‌ಗೆ ವಿ. ಸೋಮಣ್ಣ ಸೇರುವುದು ಬೇಡವೇ ಬೇಡ ವೀರಶೈವ ಲಿಂಗಾಯತ ಮುಖಂಡರ ಒತ್ತಾಯ!

Thu Mar 9 , 2023
ಬೆಂಗಳೂರು: ವವಿಧ ಪಕ್ಷಗಳಿಂದ ಸಾಗಿಬಂದು ಇದೀಗ ಬಿಜೆಪಿಯಲ್ಲಿರುವ ಸಚಿವ ವಿ. ಸೋಮಣ್ಣ ಕಾಂಗ್ರೆಸ್‌ ಸೇರುತ್ತಾರೆಯೋ ಇಲ್ಲವೊ ಎಂಬ ಚರ್ಚೆ ನಡೆದಿರುವಾಗಲೆ, ಅವರು ಕಾಂಗ್ರೆಸ್‌ ಸೇರ್ಪಡೆಯಾಗಲು ಕಾಂಗ್ರೆಸ್‌ನ ವೀರಶೈವ ಲಿಂಗಾಯತ ಮುಖಂಡರು ವಿರೋಧಿಸಿದ್ದಾರೆ. ಯಾವುದೇ ಕಾರಣಕ್ಕೂ ಸೋಮಣ್ಣರನ್ನ ಸೇರಿಸಿಕೊಳ್ಳಬಾರದೆಂದು ಒತ್ತಾಯ ಮಾಡಿದ್ದಾರೆ. ಎಐಸಿಸಿ ನಾಯಕರ ಮುಂದೆಯೂ ವಿರೋಧ ವ್ಯಕ್ತಪಡಿಸಲಾಗಿದ್ದು, ಎಂತಹ ಸಂದರ್ಭದಲ್ಲೂ ನಾವು ಕಾಂಗ್ರೆಸ್ ತೊರೆದಿಲ್ಲ. ಅಧಿಕಾರದ ದಾಹದಿಂದ ಕಾಂಗ್ರೆಸ್ ತೊರೆದಿಲ್ಲ. ಈಗ ತಮ್ಮ ಸ್ವಾರ್ಥಕ್ಕಾಗಿ ಪಕ್ಷಕ್ಕೆ ಸೇರಲು ಸೋಮಣ್ಣ ಮುಂದಾಗಿದ್ದಾರೆ. […]

Advertisement

Wordpress Social Share Plugin powered by Ultimatelysocial