ರಾಜ್ಯದಲ್ಲಿ 2023 ರ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಅಖಾಡವನ್ನು ನಾಯಕ ಅಮಿತ್ ಶಾ ಮಾರ್ಗದರ್ಶನದಲ್ಲಿ ಸಜ್ಜುಗೊಳಿಸುತ್ತಿದೆ. ಸಕಲ ರೀತಿಯಲ್ಲಿ ಕಾರ್ಯಕರ್ತರ ಪಡೆ ಸಿದ್ಧವಾಗುತ್ತಿದೆ. ಚುನಾವಣೆಗೆ ತಳಮಟ್ಟದ ಕಾರ್ಯಕರ್ತರನ್ನು ಗಟ್ಟಿಗೊಳಿಸಲು ಬಿಜೆಪಿ ಪ್ಲಾನ್ ಮಾಡಿದೆ.ಈ ಹಿನ್ನೆಲೆಯಲ್ಲಿ ಇಂದು (ಶನಿವಾರ) ಮಧ್ಯಾಹ್ನ 2.30 ಕ್ಕೆ ಅರಮನೆ ಮೈದಾನದಲ್ಲಿ ಬಿಜೆಪಿಯ ಮೆಗಾ ಸಂಕಲ್ಪ ಸಮಾವೇಶ ನಡೆಯಲಿದೆ.ಬೂತ್ ಮಟ್ಟದ ನಾಯಕರ ಜೊತೆ ಬಿಜೆಪಿ ವರಿಷ್ಠ ಅಮಿತ್ ಶಾ ಸಭೆ ನಡೆಸಲಿದ್ದಾರೆ. ಬೂತ್ ವಿಜಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.ಕಾರ್ಯಕ್ರಮದಲ್ಲಿ ಕಮಲಪಡೆಯ ಘಟಾನುಘಟಿಗಳು ಭಾಗಿಯಾಗಲಿದ್ದಾರೆ. ಬೂತ್ ಮಟ್ಟದ ಅಧ್ಯಕ್ಷರು,ಪೇಜ್ ಪ್ರಮುಖರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.ಜನವರಿ 2 ರಿಂದ 12 ರವರೆಗೆ ಬೂತ್ ವಿಜಯ ಕಾರ್ಯಕ್ರಮ ನಡೆಯಲಿದೆ. ಬಿಜೆಪಿಯ ರಾಜಕೀಯ ವಿಭಾಗೀಯ ಘಟಕಗಳು, 39 ಜಿಲ್ಲೆಗಳ ಘಟಕಗಳು, 312 ಮಂಡಳಗಳು,11,540 ಶಕ್ತಿ ಕೇಂದ್ರಗಳು, 58,186 ಮತಗಟ್ಟೆಯಲ್ಲಿ ಬೂತ್ ವಿಜಯ ಕಾರ್ಯಕ್ರಮ ನಡೆಯಲಿದೆ. ರಾಜ್ಯದ 50 ಲಕ್ಷ ಮನೆಗಳಲ್ಲಿ ಬಿಜೆಪಿ ಧ್ವಜ ಹಾರಿಸುವ ಉದ್ದೇಶ ಇದೆ. ಕಾರ್ಯಕ್ರಮದಲ್ಲಿ ಕಾರ್ಯಕರ್ತರಿಗೆ ಚುನಾವಣಾ ಸಂದೇಶವನ್ನು ಅಮಿತ್ ಶಾ ನೀಡಲಿದ್ದಾರೆ. ಸ್ಥಳೀಯ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಬಿಜೆಪಿ ಕಾರ್ಯಕರ್ತರಿಗೆ ಟಾಸ್ಕ್ ಕೊಡಲಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada