ELECTION UPDATES : ಚುನಾವಣೆ ಗೆದ್ದ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ

ಚುನಾವಣೆ ಗೆದ್ದ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ

ಸ್ಯಾಂಡಲ್‌ವುಡ್‌ನ ಜನಪ್ರಿಯ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಎದುರಿಸಿದ ಮೊದಲ ಚುನಾವಣೆಯಲ್ಲಿಯೇ ಗೆಲುವು ಸಾಧಿಸಿದ್ದಾರೆ.

ಉಮಾಪತಿ ಶ್ರೀನಿವಾಸ್ ಗೌಡ ಅವರು ಒಕ್ಕಲಿಗರ ಚುನಾವಣೆಗೆ ಸ್ಪರ್ಧಿಸಿದ್ದರು. ನಿನ್ನೆಯಷ್ಟೆ ಚುನಾವಣೆ ಫಲಿತಾಂಶ ಬಂದಿದ್ದು ಭರ್ಜರಿ ಜಯಗಳಿಸಿದ್ದಾರೆ.

ವೈದ್ಯ ಆಂಜಿನಪ್ಪ ಅವರ ಸಿಂಡಿಕೇಟ್ ಮೂಲಕ ನಿರ್ದೇಶಕ ಸ್ಥಾನಕ್ಕೆ ಉಮಾಪತಿ ಶ್ರೀನಿವಾಸ್ ಗೌಡ ಸ್ಪರ್ಧೆ ಮಾಡಿದ್ದರು. ಉಮಾಪತಿ ಅವರಿಗೆ 44709 ಮತಗಳ ಲಭಿಸಿ ಗೆಲುವು ಸಾಧಿಸಿ ಒಕ್ಕಲಿಗರ ಸಂಘಕ್ಕೆ ನಿರ್ದೇಶಕರಾಗಿ ಆಯ್ಕೆ ಆಗಿದ್ದಾರೆ. ಐದು ವರ್ಷಗಳ ಕಾಲ ರಾಜ್ಯ ಒಕ್ಕಲಿಗ ಸಂಘದ ನಿರ್ದೇಶಕರಾಗಿ ಉಮಾಪತಿ ಶ್ರೀನಿವಾಸ್ ಗೌಡ ಕಾರ್ಯನಿರ್ವಹಿಸಲಿದ್ದಾರೆ.

ಮಹಾತ್ವಾಕಾಂಕ್ಷಿ ಉದ್ಯಮಿಯಾಗಿರುವ ಉಮಾಪತಿ ಶ್ರೀನಿವಾಸ್ ಗೌಡ, ಒಕ್ಕಲಿಗರ ಸಂಘ ಚುನಾವಣೆ ಮೂಲಕ ರಾಜಕೀಯ ಪ್ರವೇಶದ ಸುಳಿವು ನೀಡಿದ್ದಾರೆ. ಈ ಹಿಂದೆ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಆಗಿದ್ದರು ಉಮಾಪತಿ ಶ್ರೀನಿವಾಸ್ ಗೌಡ ಆದರೆ ಅವರಿಗೆ ಟಿಕೆಟ್ ಧಕ್ಕಿರಲಿಲ್ಲ. ಆದರೆ ಈಗ ಒಕ್ಕಲಿಗರ ಸಂಘದ ಚುನಾವಣೆ ಮೂಲಕ ಚುನಾವಣೆ ಎದುರಿಸಿ ಸುಲಭವಾಗಿ ಜಯ ಸಾಧಿಸಿದ್ದಾರೆ.

ಚುನಾವಣೆ ಪ್ರಚಾರದ ಸಮಯದಲ್ಲಿ ಭರವಸೆ ನೀಡಿದ್ದ ಉಮಾಪತಿ, ”ನನಗೆ ಹಾಗೂ ನಮ್ಮ ತಂಡಕ್ಕೆ ಮತ ಹಾಕಲು ಸಾಕಷ್ಟು ಕಾರಣಗಳನ್ನು ನಾವು ನೀಡಿದ್ದೇನೆ. ನಾನು ಸಹ ವೈಯಕ್ತಿಕವಾಗಿ ನನ್ನ ಹಣದಿಂದ ಏನು ಮಾಡಬಲ್ಲೆ ಎಂಬುದನ್ನಷ್ಟೆ ಆಶ್ವಾಸನೆಯಾಗಿ ನೀಡುತ್ತಿದ್ದೇನೆ. ಸಂಘದ ಹಣದಲ್ಲಿ ಏನು ಮಾಡುತ್ತೇನೆ ಎಂಬ ಭರವಸೆಯನ್ನು ನಾನು ನೀಡಿಲ್ಲ. ನಾನು ಗೆದ್ದರೆ 12 ಹೋಬಳಿಗಳಲ್ಲಿ ನನ್ನ ಸ್ವಂತ ಹಣದಲ್ಲಿ ಜನಾರ್ಧನ ಆಸ್ಪತ್ರೆಗಳನ್ನು ನಿರ್ಮಿಸುತ್ತೇನೆ. ಸಂಘದ ಹಣಕ್ಕೆ ನಾನೊಬ್ಬನೇ ವಾರಸುದಾರನಲ್ಲ, ಗೆದ್ದ ಮೇಲೆ ಎಲ್ಲ ಒಟ್ಟಿಗೆ ಸೇರಿ ತೀರ್ಮಾನ ಮಾಡಬೇಕಾದ ವಿಷಯವದು, ಹಾಗಾಗಿ ನಾನು ನನ್ನ ಹಣದಲ್ಲಿ ಏನು ಮಾಡಬಲ್ಲೆ ಎಂಬುದನ್ನಷ್ಟೆ ಹೇಳುತ್ತಿದ್ದೇನೆ” ಎಂದಿದ್ದರು. ನೀಡಿದ ಭರವಸೆಗಳನ್ನು ಉಮಾಪತಿ ಈಡೇರಿಸುತ್ತಾರೆಯೇ ಕಾದು ನೋಡಬೇಕಿದೆ.

ಒಕ್ಕಲಿಗರ ಸಂಘದ ಚುನಾವಣೆ ಸಮಯದಲ್ಲಿ ಮಾಧ್ಯಮದೊಟ್ಟಿಗೆ ಮಾತನಾಡುತ್ತಾ, ‘ವಿಧಾನಸೌಧದ ರಾಜಕೀಯಕ್ಕೆ ಬರುವಿರಾ? ಎಂಬ ಪ್ರಶ್ನೆಗೆ ಉತ್ತರಿಸಿದ್ದ ಉಮಾಪತಿ, ”ಖಂಡಿತವಾಗಿಯೂ ರಾಜಕೀಯಕ್ಕೆ ಪ್ರವೇಶ ಮಾಡುತ್ತೇನೆ. ನನಗೆ ನಾನು ಬೇಲಿ ಏಕೆ ಹಾಕಿಕೊಳ್ಳಲಿ. ರಾಜಕೀಯದಲ್ಲಿ ನನಗೆ ಆಸಕ್ತಿ ಇದೆ, ನಾನು ರಾಜಕೀಯ ಮಾಡುತ್ತೇನೆ, ಸಿನಿಮಾದಲ್ಲಿ ಯಶಸ್ಸು ಸಿಕ್ಕಂತೆ ರಾಜಕೀಯದಲ್ಲಿಯೂ ಯಶಸ್ವಿಯಾಗುತ್ತೇನೆ” ಎಂದಿದ್ದರು. ಇದೀಗ ಒಂದು ಚುನಾವಣೆ ಗೆದ್ದಿರುವ ಉಮಾಪತಿ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಯೋಜನೆಯಲ್ಲಿದ್ದಂತಿದೆ.

Please follow and like us:

Leave a Reply

Your email address will not be published. Required fields are marked *

Next Post

ಹಿರಿಯ ನಟರೊಬ್ಬರು ತಮ್ಮ ಮಗಳಿಂದಲೇ ಕಿರುಕುಳ ಅನುಭವಿಸಿದ್ದಾರೆ : ದೂರು ನೀಡಿದ ಹಿರಿಯ ನಟ

Thu Dec 16 , 2021
ಕನ್ನಡದ ಸುಮಾರು 300 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಹಿರಿಯ ನಟರೊಬ್ಬರು ತಮ್ಮ ಮಗಳಿಂದಲೇ ಕಿರುಕುಳ ಅನುಭವಿಸಿದ್ದಾರೆ. ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿರುವ ನಟ ಅಶ್ವತ್ಥನಾರಾಯಣ್ ತಮ್ಮ ಮಕ್ಕಳೊಂದಿಗೆ ವಾಸವಿದ್ದರು. ಆದರೆ ಮಕ್ಕಳಾದ ಉದಯ್ ಹಾಗೂ ಮಗಳು ವಸುಂಧರಾ ಕಳೆದ ಕೆಲವು ದಿನಗಳಿಂದ ಸರಿಯಾಗಿ ಊಟ ನೀಡದೆ, ನೀರು ನೀಡದೆ ಕಿರುಕುಳ ಕೊಟ್ಟಿದ್ದಾರೆ ಅಲ್ಲದೆ ವಿವಿಧ ಮಾತ್ರೆಗಳು, ಚುಚ್ಚುಮದ್ದುಗಳನ್ನು ನೀಡಿ ಕೊಲ್ಲಲು ಯತ್ನಿಸಿದ್ದಾರೆ ಎಂದು ಅಶ್ವತ್ಥ್ ನಾರಾಯಣ್ ಅವರು ಬಸವೇಶ್ವರ […]

Advertisement

Wordpress Social Share Plugin powered by Ultimatelysocial