ಉಚಿತ ವಿದ್ಯುತ್ ಯೋಜನೆ ಚರ್ಚೆಗೆ ಸಿದ್ಧ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮನೆಗೆ ೨೦೦ ಯುನಿಟ್‌ವರೆಗೆ ಉಚಿತ ವಿದ್ಯುತ್ ನೀಡುವ ಯೋಜನೆಗೆ ನಾವು ಬದ್ಧ. ಬಿಜೆಪಿಯವರಿಗೆ ಈ ಬಗ್ಗೆ ಅನುಮಾನವಿದ್ದರೆ ಬಹಿರಂಗ ಚರ್ಚೆಗೆ ಬರಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸವಾಲು ಹಾಕಿದ್ದಾರೆ.
ಬಾಗಲಕೋಟೆಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯುತ್ ಉತ್ಪಾದನೆ ಹೆಚ್ಚಾಗಿದೆ. ವಿದ್ಯುತ್ ಸೋರಿಕೆಯನ್ನು ತಡೆಗಟ್ಟಿ ಹೇಗೆ ವಿದ್ಯುತ್‌ನ್ನು ನೀಡಬಹುದು ಎಂಬುದನ್ನು ತೋರಿಸುತ್ತೇನೆ. ನಾನು ಇಂಧನ ಸಚಿವನಾಗಿದ್ದಾಗ ಮಾಡಿದ್ದ ಕೆಲಸಕ್ಕೆ ಪ್ರಧಾನಿ ಮೋದಿಯವರೇ ಪ್ರಶಂಸನಾ ಪತ್ರ ನೀಡಿದ್ದಾರೆ ಎಂದರು.ಬಿಜೆಪಿಯವರು ಅಧಿಕಾರಕ್ಕೆ ಬಂದರೆ ೧೦ ಗಂಟೆ ಥ್ರೀ ಪೇಸ್ ವಿದ್ಯುತ್ ನೀಡುವುದಾಗಿ ಹೇಳಿದ್ದರು. ಅದನ್ನು ಈಡೇರಿಸಿಲ್ಲ. ರಾಜ್ಯ ಬಿಜೆಪಿ ನಾಯಕರಿಗೆ ಮತ ಕೇಳಲು ಮುಖ ಇಲ್ಲ, ಹಾಗಾಗಿ, ಮೋದಿ ಅವರನ್ನು ಕರೆ ತರುತ್ತಿದ್ದಾರೆ ಎಂದು ಹರಿಹಾಯ್ದರು.ಮನೆ ಬೆಳಗಲು ಉಚಿತ ೨೦೦ ಯುನಿಟ್ ವಿದ್ಯುತ್ ನೀಡುತ್ತೇವೆ. ಹಾಗೆಯೇ ಮನೆಯ ಯಜಮಾನಿಗೆ ಮಾಸಿಕ ೨ ಸಾವಿರ ನೀಡುವುದು ನಮ್ಮ ಬದ್ಧತೆ, ಜನರಿಗೆ ಏನೆಲ್ಲ ಸಹಾಯ ಮಾಡಲು ಸಾಧ್ಯವೋ ಅದನ್ನು ಮಾಡುತ್ತೇವೆ ಎಂದರು.ವಿಧಾನ ಪರಿಷತ್‌ನ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ವಿರುದ್ಧ ಸಚಿವರಾದ ಬಿ.ಸಿ. ಪಾಟೀಲ್ ಮತ್ತು ಮುನಿರತ್ನ ಮಾಡಿರುವ ಟೀಕೆ ಸರಿಯಲ್ಲ. ಈ ರೀತಿ ಪದ ಬಳಸಬಾರದು ಎಂದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಐಸಿಸಿ ಅಂಡರ್ 19 ಮಹಿಳಾ ಟಿ20 ವಿಶ್ವಕಪ್‌ನ ಚೊಚ್ಚಲ ಆವೃತ್ತಿಯಲ್ಲಿ ಭಾರತ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ.

Mon Jan 30 , 2023
ಐಸಿಸಿ ಅಂಡರ್ 19 ಮಹಿಳಾ ಟಿ20 ವಿಶ್ವಕಪ್‌ನ ಚೊಚ್ಚಲ ಆವೃತ್ತಿಯಲ್ಲಿ ಭಾರತ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಭಾರತದ ಕಿರಿಯ ಆಟಗಾರ್ತಿಯರ ಈ ಸಾಧನೆಗೆ ಪ್ರಶಂಸೆಯ ಸುರಿಮಳೆಯೇ ಹರಿದುಬಂದಿದೆ. ಇಂಗ್ಲೆಂಡ್ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಶಫಾಲಿ ವರ್ಮ ನೇತೃತ್ವದ ಭಾರತ ತಂಡ ಎಲ್ಲಾ ವಿಭಾಗದಲ್ಲಿಯೂ ಅದ್ಭುತ ಪ್ರದರ್ಶನ ನೀಡುವ ಮೂಲಕ 7 ವಿಕೆಟ್‌ಗಳ ಅಂತದ ಭಾರೀ ಗೆಲುವು ಸಾಧಿಸಿ ಚಾಂಪಿಯನ್ ಪಟ್ಟಕ್ಕೇರಿದೆ. ಈ ಸಾಧನೆಯ ಬಗ್ಗೆ ಭಾರತದ ಮಹಿಳಾ […]

Advertisement

Wordpress Social Share Plugin powered by Ultimatelysocial