ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮನೆಗೆ ೨೦೦ ಯುನಿಟ್ವರೆಗೆ ಉಚಿತ ವಿದ್ಯುತ್ ನೀಡುವ ಯೋಜನೆಗೆ ನಾವು ಬದ್ಧ. ಬಿಜೆಪಿಯವರಿಗೆ ಈ ಬಗ್ಗೆ ಅನುಮಾನವಿದ್ದರೆ ಬಹಿರಂಗ ಚರ್ಚೆಗೆ ಬರಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸವಾಲು ಹಾಕಿದ್ದಾರೆ.
ಬಾಗಲಕೋಟೆಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯುತ್ ಉತ್ಪಾದನೆ ಹೆಚ್ಚಾಗಿದೆ. ವಿದ್ಯುತ್ ಸೋರಿಕೆಯನ್ನು ತಡೆಗಟ್ಟಿ ಹೇಗೆ ವಿದ್ಯುತ್ನ್ನು ನೀಡಬಹುದು ಎಂಬುದನ್ನು ತೋರಿಸುತ್ತೇನೆ. ನಾನು ಇಂಧನ ಸಚಿವನಾಗಿದ್ದಾಗ ಮಾಡಿದ್ದ ಕೆಲಸಕ್ಕೆ ಪ್ರಧಾನಿ ಮೋದಿಯವರೇ ಪ್ರಶಂಸನಾ ಪತ್ರ ನೀಡಿದ್ದಾರೆ ಎಂದರು.ಬಿಜೆಪಿಯವರು ಅಧಿಕಾರಕ್ಕೆ ಬಂದರೆ ೧೦ ಗಂಟೆ ಥ್ರೀ ಪೇಸ್ ವಿದ್ಯುತ್ ನೀಡುವುದಾಗಿ ಹೇಳಿದ್ದರು. ಅದನ್ನು ಈಡೇರಿಸಿಲ್ಲ. ರಾಜ್ಯ ಬಿಜೆಪಿ ನಾಯಕರಿಗೆ ಮತ ಕೇಳಲು ಮುಖ ಇಲ್ಲ, ಹಾಗಾಗಿ, ಮೋದಿ ಅವರನ್ನು ಕರೆ ತರುತ್ತಿದ್ದಾರೆ ಎಂದು ಹರಿಹಾಯ್ದರು.ಮನೆ ಬೆಳಗಲು ಉಚಿತ ೨೦೦ ಯುನಿಟ್ ವಿದ್ಯುತ್ ನೀಡುತ್ತೇವೆ. ಹಾಗೆಯೇ ಮನೆಯ ಯಜಮಾನಿಗೆ ಮಾಸಿಕ ೨ ಸಾವಿರ ನೀಡುವುದು ನಮ್ಮ ಬದ್ಧತೆ, ಜನರಿಗೆ ಏನೆಲ್ಲ ಸಹಾಯ ಮಾಡಲು ಸಾಧ್ಯವೋ ಅದನ್ನು ಮಾಡುತ್ತೇವೆ ಎಂದರು.ವಿಧಾನ ಪರಿಷತ್ನ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್ ವಿರುದ್ಧ ಸಚಿವರಾದ ಬಿ.ಸಿ. ಪಾಟೀಲ್ ಮತ್ತು ಮುನಿರತ್ನ ಮಾಡಿರುವ ಟೀಕೆ ಸರಿಯಲ್ಲ. ಈ ರೀತಿ ಪದ ಬಳಸಬಾರದು ಎಂದರು.
https://play.google.com/store/apps/details?id=com.speed.newskannada