ಇಂದು ರಾಜ್ಯ ಸರ್ಕಾರಿ ನೌಕರರ ಸಂಘದ ತುರ್ತು ಸಭೆ!

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮಂಡಿಸಿದ ಬಜೆಟ್ ನಲ್ಲಿ ಏಳನೇ ವೇತನ ಆಯೋಗ ಜಾರಿ ಕುರಿತಂತೆ ಯಾವುದೇ ಘೋಷಣೆ ಮಾಡದಿರುವುದು ಹಾಗೂ ಪಿಂಚಣಿ ಯೋಜನೆ ಕುರಿತು ನಿರ್ಧಾರ ಹೊರಬೀಳದಿರುವುದು ಸರ್ಕಾರಿ ನೌಕರರಲ್ಲಿ ನಿರಾಸೆ ಮೂಡಿಸಿದೆ.

ಚುನಾವಣಾ ವರ್ಷವಾಗಿರುವ ಕಾರಣ ನೌಕರರ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಬಹುದು ಎಂಬ ಆಶಾ ಭಾವನೆ ಇತ್ತಾದರೂ ಬಜೆಟ್ ಮಂಡನೆ ಬಳಿಕ ಇದು ಹುಸಿಯಾಗಿದೆ.

ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘ ಇಂದು ತುರ್ತು ಸಭೆ ಕರೆದಿದೆ.

ಈ ಸಭೆಯಲ್ಲಿ ಮುಂದಿನ ಹೋರಾಟದ ಬಗ್ಗೆ ರೂಪುರೇಷೆ ನಿರ್ಧರಿಸಲಾಗುತ್ತದೆ ಎಂದು ಹೇಳಲಾಗಿದ್ದು, ಜೊತೆಗೆ ನೂತನ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಂತೆ ಹೋರಾಟ ನಡೆಸುತ್ತಿರುವ ಎನ್‌ಪಿಎಸ್ ನೌಕರರ ಜೊತೆ ಕೈಜೋಡಿಸುವ ಸಾಧ್ಯತೆ ಇದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮೂರು ತಿಂಗಳಲ್ಲಿ ಎಲ್ಲರಿಗೂ ಆಯುಷ್ಮಾನ್ ಕಾರ್ಡ್!

Tue Feb 21 , 2023
ಬೆಂಗಳೂರು: ಮುಂದಿನ ಮೂರು ತಿಂಗಳೊಳಗೆ ನೋಂದಾಯಿತ ಎಲ್ಲರಿಗೂ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ವಿತರಿಸುವುದಾಗಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಕೆ. ಹರೀಶ್ ಕುಮಾರ್, ಯು.ಬಿ. ವೆಂಕಟೇಶ್ ಅವರು ಪ್ರತ್ಯೇಕವಾಗಿ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಕಳೆದ ಮೂರು ವರ್ಷಗಳಲ್ಲಿ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ 39.48 ಕೋಟಿ ಜನರಿಗೆ ಚಿಕಿತ್ಸೆ ನೀಡಲಾಗಿದೆ. 3000 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ ಎಂದು […]

Advertisement

Wordpress Social Share Plugin powered by Ultimatelysocial