ಹೈದರಾಬಾದ್: ರಸ್ತೆ ಅಪಘಾತ ಪ್ರಕರಣಗಳ ಸಂಖ್ಯೆಯಲ್ಲಿ ತೆಲಂಗಾಣ ರಾಜ್ಯವೂ ಕುಖ್ಯಾತಿ ಪಾತ್ರವಾಗಿದೆ. ಮದ್ಯಪಾನ ಮತ್ತು ವೇಗದ ಚಾಲನೆಯಿಂದ ಹೆಚ್ಚು ಅಪಘಾತಗಳು ಸಂಭವಿಸುತ್ತಿರುವುದಾಗಿ ಇತ್ತೀಚಿನ ಅಂಕಿ-ಅಂಶಗಳು ಹೇಳುತ್ತಿವೆ. ಸಾಕಷ್ಟು ಕಠಿಣ ಕ್ರಮಗಳನ್ನು ತೆಗೆದುಕೊಂಡರು ಕೂಡ ಅಪಘಾತಗಳ ಸಂಖ್ಯೆ ಇಳಿಯುತ್ತಿಲ್ಲ.
2021ರಲ್ಲಿ ತೆಲಂಗಾಣದಾದ್ಯಂತ 6690 ಮಂದಿ ಅಪಘಾತಕ್ಕೆ ಬಲಿಯಾಗಿದ್ದಾರೆ.
ಅಪಘಾತದ ಪ್ರಕರಣದಲ್ಲಿ ತೆಲಂಗಾಣ ಚೀನಾ, ಜಪಾನ್ ಮತ್ತು ಜರ್ಮನಿಯನ್ನು ಮೀರಿಸಿದೆ ಎಂದು ಸುಪ್ರಿಂಕೋರ್ಟ್ ಮಾಜಿ ನ್ಯಾಯಮೂರ್ತಿ ಹಾಗೂ ರಸ್ತ ಸುರಕ್ಷತಾ ಸಮಿತಿಯ ಮುಖ್ಯಸ್ಥರಾದ ಅಭಯ್ ಮನೋಹರ್ ಸಪ್ರೆ ಅವರು ಹೇಳಿದ್ದಾರೆ.
ಶನಿವಾರ ಶಮ್ಶಬಾದ್ನ ಹೋಟೆಲ್ನಲ್ಲಿ ನಡೆದ ರಸ್ತೆ ಅಪಘಾತಗಳು ಮತ್ತು ಸುರಕ್ಷತಾ ಮಾನದಂಡಗಳ ಪರಿಶೀಲನಾ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮನೋಹರ್ ಸಪ್ರೆ ಅವರು ಮಾತನಾಡಿದರು.
ಶೇ. 91ರಷ್ಟು ಅಪಘಾತಗಳು ವೇಗದ ಚಾಲನೆಯಿಂದಲೇ ಸಂಭವಿಸುತ್ತಿವೆ. ಹೀಗಾಗಿ ವಾಹನ ಸವಾರರು ಶೇ. 100ರಷ್ಟು ಹೆಲ್ಮೆಟ್ ಮತ್ತು ಸೀಟ್ ಬೆಲ್ಟನ್ನು ಧರಿಸಬೇಕು. ಅಲ್ಲದೆ, ಸರ್ಕಾರ ಅಪಘಾತದ ಕೇಂದ್ರಗಳನ್ನು ಪತ್ತೆ ಹಚ್ಚಿ ಸುರಕ್ಷತಾ ಮಾನದಂಡಗಳನ್ನು ಹೆಚ್ಚಿಸಬೇಕು. ಅಪಘಾತಗಳನ್ನು ತಡೆಯಲು ಉತ್ತಮ ಮಾನದಂಡಗಳನ್ನು ರಚಿಸಬೇಕಿದೆ ಎಂದು ಮನೋಹರ್ ಸಪ್ರೆ ಹೇಳಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: