ಗೋವಾದಲ್ಲಿ ಸಿದ್ದರಾಮಯ್ಯ ಚಿಕ್ಕಣ್ಣ ಭೇಟಿ;

ಸಿನಿಮಾ ಹಾಗೂ ರಾಜಕಾರಣ ಜೊತೆ-ಜೊತೆಯಾಗಿ ಸಾಗುತ್ತಿರುವ ರಂಗಗಳು. ನಟರು ರಾಜಕಾರಣಿಗಳಾಗುವುದು, ರಾಜಕಾರಣಿಗಳು ಸಿನಿಮಾ ನಿರ್ಮಾಪಕರು, ನಟರಾಗುವುದು ಬಹುಕಾಲದಿಂದ ನಡದೇ ಇದೆ.

ಕರ್ನಾಟಕದಲ್ಲಿಯೂ ಈ ಪದ್ಧತಿ ಹಲವು ವರ್ಷಗಳಿಂದ ಚಾಲ್ತಿಯಲ್ಲಿದೆ. ಕನ್ನಡ ಚಿತ್ರರಂಗದಲ್ಲಿ ನಟ-ನಟಿಯರಾಗಿ ಮೆರೆದ ಹಲವರು ರಾಜಕೀಯದಲ್ಲಿ ಉನ್ನತ ಸ್ಥಾನಕ್ಕೇರಿದ್ದಾರೆ.

ಈಗಲೂ ಹಲವು ನಟ-ನಟಿಯರು ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ.

ಕೆಲವು ದಿನಗಳ ಹಿಂದಷ್ಟೆ ಎನ್ ನಾರಾಯಣ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಕಾಂಗ್ರೆಸ್ ಪಕ್ಷ ಸೇರುವ ಇಚ್ಛೆ ವ್ಯಕ್ತಪಡಿಸಿದರು. ಇದೀಗ ಕನ್ನಡ ಚಿತ್ರರಂಗದ ಜನಪ್ರಿಯ ಹಾಸ್ಯನಟ ಅಚಾನಕ್ಕಾಗಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ.

ಪಂಚ ರಾಜ್ಯಗಳ ಚುನಾವಣೆ ಇರುವ ಕಾರಣ ಸಿದ್ದರಾಮಯ್ಯ ಅವರು ಗೋವಾಕ್ಕೆ ಭೇಟಿ ನೀಡಿದ್ದರು. ಈ ಸಮಯ ಗೋವಾದಲ್ಲಿಯೇ ನಟ ಚಿಕ್ಕಣ್ಣ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ. ಕೆಲ ಕಾಲ ಮಾತುಕತೆ ನಡೆಸಿದ್ದಾರೆ.

ಗೋವಾದಲ್ಲಿ ಸಿದ್ದರಾಮಯ್ಯರ ಭೇಟಿಯಾದ ಚಿಕ್ಕಣ್ಣನಟ ಚಿಕ್ಕಣ್ಣ ಸಿನಿಮಾ ಒಂದರ ಚಿತ್ರೀಕರಣಕ್ಕಾಗಿ ಗೋವಾಕ್ಕೆ ತೆರಳಿದ್ದರು. ಅಲ್ಲಿಯೇ ಸಿದ್ದರಾಮಯ್ಯ ಅವರನ್ನು ಕಂಡು ಚಿಕ್ಕಣ್ಣ ಮಾತನಾಡಿಸಿದ್ದಾರೆ. ಚಿಕ್ಕಣ್ಣ ಅವರು ತಮ್ಮನ್ನು ಗೋವಾದಲ್ಲಿ ಭೇಟಿಯಾಗಿರುವ ಮಾಹಿತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಸಿದ್ದರಾಮಯ್ಯ, ”ಗೋವಾದಲ್ಲಿ ಆಕಸ್ಮಿಕವಾಗಿ ಭೇಟಿಯಾದ ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯನಟ ಚಿಕ್ಕಣ್ಣನವರೊಂದಿಗೆ ಒಂದಷ್ಟು ಹೊತ್ತು ಆತ್ಮೀಯ ಮಾತಕತೆ” ಎಂದು ಬರೆದುಕೊಂಡಿದ್ದಾರೆ. ಆದರೆ ಗೋವಾದಲ್ಲಿ ಎಲ್ಲಿ ಅವರಿಬ್ಬರೂ ಭೇಟಿಯಾಗಿದ್ದರು ಎಂಬ ಬಗ್ಗೆ ಮಾಹಿತಿ ನೀಡಿಲ್ಲ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪ್ರವೀಣ್ ಕುಮಾರ್ ನಿಧನ: ಮಾಜಿ ಏಷ್ಯನ್ ಗೇಮ್ಸ್ ಪದಕ ವಿಜೇತ ಪ್ರವೀಣ್ ಕುಮಾರ್ ಸೋಬ್ತಿ ನಿಧನಕ್ಕೆ ಎಎಫ್‌ಐ ಸಂತಾಪ

Tue Feb 8 , 2022
  ಪ್ರವೀಣ್ ಕುಮಾರ್ ನಿಧನ: ಮಾಜಿ ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ಪ್ರವೀಣ್ ಅವರ ನಿಧನಕ್ಕೆ ಅಥ್ಲೆಟಿಕ್ಸ್ ಫೆಡರೇಶನ್ ಆಫ್ ಇಂಡಿಯಾ (ಎಎಫ್‌ಐ) ಮಂಗಳವಾರ ತೀವ್ರ ಆಘಾತ ವ್ಯಕ್ತಪಡಿಸಿದೆ. ಕುಮಾರ್ ಸೋಬ್ತಿ ಅವರು ಇಲ್ಲಿ ಹೃದಯಾಘಾತದಿಂದ ನಿಧನರಾದರು. “ಮಹಾಭಾರತ” ಟಿವಿ ಧಾರಾವಾಹಿಯಲ್ಲಿ ‘ಭೀಮ್’ ಪಾತ್ರವನ್ನು ನಿರ್ವಹಿಸಿ ಮನೆಮಾತಾಗಿದ್ದ ಸೋಬ್ತಿ ಸೋಮವಾರ ಸಂಜೆ ಅಶೋಕ್ ವಿಹಾರ್ ನಿವಾಸದಲ್ಲಿ ಕೊನೆಯುಸಿರೆಳೆದರು. ಪ್ರವೀಣ್ ಕುಮಾರ್ ನಿಧನ: ಮಾಜಿ ಏಷ್ಯನ್ ಗೇಮ್ಸ್ ಪದಕ ವಿಜೇತ […]

Advertisement

Wordpress Social Share Plugin powered by Ultimatelysocial