ಹಿಜಾಬ್ ವಿವಾದ ರಾಜಕೀಯ ನಾಯಕರ ವಾಕ್ಸಮರಕ್ಕೆ ಕಾರಣವಾಗಿದ್ದು,

ಮೈಸೂರು: ಹಿಜಾಬ್ ವಿವಾದ ರಾಜಕೀಯ ನಾಯಕರ ವಾಕ್ಸಮರಕ್ಕೆ ಕಾರಣವಾಗಿದ್ದು, ಹಿಜಾಬ್ ಧರಿಸಿ ಅಧಿವೇಶನಕ್ಕೆ ಬರುವುದಲ್ಲ, ಮೊದಲು ಧಮ್ ಇದ್ದರೆ ಮುಸ್ಲೀಂ ಮಹಿಳೆಯರಿಗೆ ಮಸೀದಿಗೆ ಪ್ರವೇಶ ಕೊಡಿಸಿ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಸವಾಲು ಹಾಕಿದ್ದಾರೆ.ಮೈಸೂರಿನಲ್ಲಿ ಮಾತನಾಡಿದ ಸಚಿವ ಈಶ್ವರಪ್ಪ, ಕಾಂಗ್ರೆಸ್ ಶಾಸಕಿ ಖನೀಜಾ ಫಾತೀಮಾ ವಿಧಾನಸೌಧ ಅಧಿವೇಶನಕ್ಕೆ ಹಿಜಾಬ್ ಧರಿಸಿ ಬರುತ್ತೇನೆ. ಧೈರ್ಯವಿದ್ದರೆ ತಡೆಯಲಿ ಎಂದು ಹೇಳಿದ್ದಾರೆ. ಇವರು ಹಿಜಾಬ್ ಧರಿಸಿ ಅಧಿವೇಶನಕ್ಕೆ ಬರುವುದಲ್ಲ, ಮೊದಲು ಮಸೀದಿಗೆ ಹೋಗಲಿ. ಮುಸ್ಲೀಂ ಮಹಿಳೆಯರಿಗೆ ಹಲವೆಡೆಗಳಲ್ಲಿ ಮಸೀದಿಗೆ ಪ್ರವೇಶ ನೀಡುವುದಿಲ್ಲ. ಕಾಂಗ್ರೆಸ್ ಶಾಸಕಿಯವರು ಮೊದಲು ಮಸೀದಿಗೆ ಮಹಿಳೆಯರಿಗೆ ಪ್ರವೇಶ ಕೊಡಿಸಲಿ ಎಂದು ತಿರುಗೇಟು ನೀಡಿದರು.ಇದೇ ವೇಳೆ ಎಂಎಲ್ ಸಿ ಸಿ.ಎಂ.ಇಬ್ರಾಹಿಂ ಅವರ ಹೇಳಿಕೆಗೆ ಕಿಡಿಕಾರಿರುವ ಈಶ್ವರಪ್ಪ, ಸಿ.ಎಂ.ಇಬ್ರಾಹಿಂ ಹೇಳಿಕೆಯಿಂದ ಮುಸ್ಲೀಂ ಮಹಿಳೆಯರಿಗೆ ಅವಮಾನ ಮಾಡಿದಂತಾಗಿದೆ. ಇವರ ಮುಖ ನೋಡಲು ಹಿಜಾಬ್ ತೆಗೆಯಬೇಕಾ? ಇಬ್ರಾಹಿಂ ಹೇಳಿಕೆಯನ್ನು ಯಾರೂ ಒಪ್ಪುವಂತದ್ದಲ್ಲ ಎಂದು ಹೇಳಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಚಾಮರಾಜನಗರ: ಕೊರೋನಾ ಕಾರಣದಿಂದಾಗಿ ಮೃತಪಟ್ಟ ಗೆಳೆಯನ ಪತ್ನಿಯಾನೆ ಮದುವೆಯಾದ!

Tue Feb 8 , 2022
ಚಾಮರಾಜನಗರ: ಕೊರೋನಾ ಕಾರಣದಿಂದಾಗಿ ಮೃತಪಟ್ಟ ಗೆಳೆಯನ ಪತ್ನಿಯ ಮದುವೆಯಾಗುವ ಮೂಲಕ ಸ್ನೇಹಿತ ಮಾದರಿ ನಡೆ ಅನುಸರಿಸಿದ್ದು, ಜನರಿಂದ ಮೆಚ್ಚುಗೆ ವ್ಯಕ್ತವಾಗಿದೆ.ಚಾಮರಾಜನಗರ ತಾಲೂಕಿನ ನಂಜದೇವನಪುರ ನಿವಾಸಿ ಲೋಕೇಶ್ ಅವರು ವಿಧವೆಗೆ ಬಾಳು ಕೊಟ್ಟವರು.ಪತಿ ಚೇತನ್ ಕುಮಾರ್ ಅವರನ್ನು ಕಳೆದುಕೊಂಡಿದ್ದ ಅಂಬಿಕಾ ಅವರನ್ನು ಲೋಕೇಶ್ ಮದುವೆಯಾಗಿದ್ದಾರೆ.ಮೃತ ಚೇತನ್ ಕುಮಾರ್ 8 ವರ್ಷದ ಹಿಂದೆ ಅಂಬಿಕಾ ಅವರನ್ನು ಮದುವೆಯಾಗಿದ್ದು, ಕೊರೋನಾ ಕಾರಣದಿಂದಾಗಿ ಮೃತಪಟ್ಟಿದ್ದಾರೆ. ಪತಿ ಕಳೆದುಕೊಂಡ ಅಂಬಿಕಾ ಖಿನ್ನತೆಯಿಂದ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದನ್ನು ಗಮನಿಸಿದ […]

Advertisement

Wordpress Social Share Plugin powered by Ultimatelysocial