ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ನನ್ನ ತಪ್ಪು ಏನೂ ಇಲ್ಲ, ಒಂದು ಪರ್ಸೆಂಟ್ ನನ್ನ ತಪ್ಪಿದ್ದರೂ ಶಿಕ್ಷೆಯಾಗಲಿ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಪ್ರಕರಣದಲ್ಲಿ ನನ್ನ ತಪ್ಪಿಲ್ಲ.
ನಾನು ಆರೋಪ ಮುಕ್ತನಾಗುತ್ತೇನೆ. ಸಂತೋಷ್ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಯುತ್ತಿದೆ. ಅಧಿಕಾರಿಗಳು ಎಲ್ಲಾ ರೀತಿಯಲ್ಲಿಯೂ ತನಿಖೆ ನಡೆಸಲಿದ್ದಾರೆ ಎಂದರು.
ಪ್ರಕರಣದಲ್ಲಿ ನಾನು ನಿರ್ದೋಷಿಯಾಗಿ ಹೊರಬರುತ್ತೇನೆ. ನನ್ನ ವಿರುದ್ಧದ ಆರೋಪ ಸುಳ್ಳು. ತನಿಖೆ ಬಳಿಕ ಸತ್ಯಾಸತ್ಯತೆ ಗೊತ್ತಾಗಲಿದೆ ಎಂದು ಹೇಳಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada