ಕಲಬುರಗಿ: ನೀವು ನೆಟ್ಟಗೆ ಇಟ್ಟುಕೊಂಡು ಕಂಟ್ರೋಲ್ ಮಾಡದೆ ಹೋದ್ರೆ ನಿನ್ ಹೆಂಡ್ತೀನೂ ಓಡಿ ಹೋಗ್ತಾಳೆ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಲೇವಡಿ ಮಾಡಿದ್ದಾರೆ. ಠಾಕ್ರೆ ವಿರುದ್ಧ ಕೆಂಡಕಾರುವ ಭರದಲ್ಲಿ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಯಾವ ಪಕ್ಷದಲ್ಲಿ ಶಿಸ್ತು, ನಾಯಕತ್ವ ಇರುವುದಿಲ್ಲವೋ ಆ ಪಕ್ಷ ಪ್ರಜಾಪ್ರಭುತ್ವದಲ್ಲಿ ಉಳಿಯುವುದಿಲ್ಲ ಎಂದು ಮಹಾರಾಷ್ಟ್ರದಲ್ಲಿನ ರಾಜಕೀಯ ವಿದ್ಯಮಾನಗಳ ಕುರಿತು ವಿಶ್ಲೇಷಿಸಿದರು. ಸಿಎಂ ಸ್ಥಾನಕ್ಕಾಗಿ ಬಾಳಾಸಾಹೇಬ್ ಠಾಕ್ರೆ ಮಗ ಉದ್ಧವ್ ಹಿಂದುತ್ವವನ್ನೇ ಮಾರಾಟ ಮಾಡಿದರು. ಈಗ ನೋಡಿದರೆ ಶಿವಸೇನೆ ಶಾಸಕರನ್ನು ಹೈಜಾಕ್ ಮಾಡಲಾಗಿದೆ ಎಂದು ಹೇಳುತ್ತಿದ್ದಾರೆ. ಕೇವಲ ಶಾಸಕರಷ್ಟೇ ಅಲ್ಲ, ನಿನ್ನ ಹೆಂಡತಿಯನ್ನೂ ಕಂಟ್ರೋಲ್ ಮಾಡೋಕೆ ಆಗದಿದ್ದರೆ ಓಡಿಹೋಗ್ತಾಳೆ ಎಂದು ಠಾಕ್ರೆಗೆ ಲೇವಡಿ ಮಾಡಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada