ಹಲಾಲ್ ಕಟ್ V/s ಜಟ್ಕಾ ಕಟ್ ವಿವಾದದ ಬಗ್ಗೆ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದೇನು?

ಉಡುಪಿ : ರಾಜ್ಯದಲ್ಲಿ ಹಲಾಲ್ ಕಟ್ V/s ಜಟ್ಕಾ ಕಟ್ ವಿವಾದದ ಕುರಿತಂತೆ ಸಚಿವ ಕೆ.ಎಸ್. ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದು, ಹಲಾಲ್- ಜಟ್ಕಾ ಕಟ್ ವಿವಾದವನ್ನು ಕೆಲವು ವ್ಯಕ್ತಿಗಳು ಸೃಷ್ಠಿ ಮಾಡಿ ಸಮಾಜವನ್ನು ಒಡೆಯುವ ಕುತಂತ್ರ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರು ಯಾವ ರೀತಿ ಪೂಜೆ ಮಾಡುತ್ತಾರೆಯೋ ಮಾಡಿಕೊಳ್ಳಲಿ. ಯಾವ ಪದ್ಧತಿ ಇದೆಯೋ ಮಾಡಿಕೊಂಡು ಹೋಗಲಿ. ಮುಸ್ಲಿಮರು ಹಲಾಲ್ ಮೂಲಕ ಮಾಡುವುದಾದರೆ ಮಾಡಲಿ. ಹಿಂದೂಗಳು ಜಟ್ಕಾ ಬೇಕಾದರೆ ಮಾಡಿಕೊಂಡು ಹೋಗಲಿ. ಇದರಲ್ಲಿ ಗೊಂದಲ ಯಾಕೆ ಸೃಷ್ಠಿಸಿದ್ದಾರೆ? ಎಂದು ಪ್ರಶ್ನೆಸಿದ್ದಾರೆ.

ಹಲಾಲ್- ಜಟ್ಕಾ ಕಟ್ ವಿವಾದವನ್ನು ಕೆಲವು ವ್ಯಕ್ತಿಗಳು ಹಾಗೂ ಪಕ್ಷದವರು ಸೃಷ್ಠಿ ಮಾಡಿದ್ದಾರೆ. ಈ ಮೂಲಕ ಸಮಾಜವನ್ನು ಒಡೆಯುವ ಕುತಂತ್ರ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಬಗ್ಗೆ ಬಿಜೆಪಿ ಮೌನ: ಹೆಚ್‌ಡಿಕೆ ಆಕ್ರೋಶ!

Sun Apr 3 , 2022
ಬೆಂಗಳೂರು, ಏ.3- ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಬಗ್ಗೆ ಮೌನವಾಗಿರುವ ಬಿಜೆಪಿ, ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಬೆಳಗ್ಗೆ ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮೌನಕ್ಕೆ ಶರಣಾಗಿರುವ ಬಿಜೆಪಿಯನ್ನು ಮೌನಿ ಪಕ್ಷ, ಸರ್ಕಾರವನ್ನು ಮೌನಿ ಸರ್ಕಾರ ಹಾಗೂ ಮುಖ್ಯಮಂತ್ರಿಯನ್ನು ಮೌನಿ ಮುಖ್ಯಮಂತ್ರಿ ಎಂದು ಛೇಡಿಸಿದ್ದಾರೆ. ಹಲಾಲ್ ಹಾಲಾಹಲದ ನಡುವೆಯೇ ಇಂದು ಬೆಳಗ್ಗೆ […]

Advertisement

Wordpress Social Share Plugin powered by Ultimatelysocial