ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಟೀಕಿಸುವ ಭರದಲ್ಲಿ ಮಾಜಿ ಸಚಿವ ಬಿಜೆಪಿ ನಾಯಕ ಕೆ ಎಸ್ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯನವರು ನಿನ್ನೆ ಸತ್ತರೂ ಬಿಜೆಪಿ ಸೇರಲ್ಲ ಎಂದು ಹೇಳಿದ್ದರು. ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಟೀಕಿಸುವ ಭರದಲ್ಲಿ ಮಾಜಿ ಸಚಿವ ಬಿಜೆಪಿ ನಾಯಕ ಕೆ ಎಸ್ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಸಿದ್ದರಾಮಯ್ಯನವರು ನಿನ್ನೆ ಸತ್ತರೂ ಬಿಜೆಪಿ ಸೇರಲ್ಲ ಎಂದು ಹೇಳಿದ್ದರು. ಅದಕ್ಕೆ ಇಂದು ಮಾಧ್ಯಮ ಪ್ರತಿನಿಧಿಗಳ ಮುಂದೆ ಪ್ರತಿಕ್ರಿಯಿಸಿದ ಈಶ್ವರಪ್ಪ, ಅವರು ಬದುಕಿದ್ದಾಗಲೇ ಬಿಜೆಪಿಗೆ ಸೇರಿಸಲ್ಲ, ಇನ್ನು ಸತ್ತ ಮೇಲೆ ಅವರ ಹೆಣ ಇಟ್ಟುಕೊಂಡು ಏನು ಮಾಡಲಿ, ಅವರ ಹೆಣವನ್ನು ನಾಯಿನೂ ಮೂಸಲ್ಲ ಎಂದು ಟೀಕಿಸಿದ್ದಾರೆ. ಸಿದ್ದರಾಮಯ್ಯ ಜೀವಂತವಿರುವಾಗಲೇ ಅವರನ್ನು ನಮ್ಮ ಪಾರ್ಟಿಗೆ ಸೇರಿಸಿಕೊಳ್ಳಲ್ಲ, ಇನ್ನು ಅವರ ಹೆಣ ತಗೊಂಡು ನಾವು ಏನು ಮಾಡೋಣ, ಅವರ ಹೆಣವನ್ನು ನಾಯಿನೂ ಮೂಸಲ್ಲ, ಇನ್ನು ನಾವೇಕೆ ಮುಟ್ಟೋಣ, ಆಡಳಿತ ಪಕ್ಷವಾದ ಬಿಜೆಪಿಯ ರಾಜ್ಯಾಧ್ಯಕ್ಷರ ಬಗ್ಗೆ ಹುಚ್ಚುಹುಚ್ಚಾಗಿ ಮಾತನಾಡುವುದು ಮಾಜಿ ಮುಖ್ಯಮಂತ್ರಿಯಾಗಿ ಸಿದ್ದರಾಮ್ಯಯನವರಿಗೆ ಘನತೆಯಲ್ಲ ಎಂದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada
Please follow and like us: