ಕುಟುಂಬ ರಾಜಕಾರಣ ಎಂದರೇ ಭ್ರಷ್ಟಾಚಾರ

ಕುಟುಂಬ ರಾಜಕಾರಣ ಎಂದರೇ ಭ್ರಷ್ಟಾಚಾರ. ಈ ಭ್ರಷ್ಟಾಚಾರದಿಂದಲೇ ದೇಶದ ಅವನತಿಗಳಾಗಿವೆ. ಬಿಜೆಪಿಯಲ್ಲಿ ಕುಟುಂಬ ರಾಜಕಾರಣಕ್ಕೆ ಅವಕಾಶವಿಲ್ಲ. ಇದನ್ನು ಪ್ರಧಾನಿ ನರೇಂದ್ರ ಮೋದಿ ಅವರು ಖಂಡಿಸುತ್ತಲೇ ಬಂದಿದ್ದಾರೆ. ಮುಂದಿನ ದಿನಗಳಲ್ಲಿ ಇದು ಕರ್ನಾಟಕ ಸೇರಿದಂತೆ ಇಡೀ ದೇಶದಲ್ಲಿ ಜಾರಿಗೆ ಬರುತ್ತದೆ.ಚುನಾವಣೆ  ವೇಳೆ ಇದನ್ನು ಎಲ್ಲರೂ ಗಮನದಲ್ಲಿಟ್ಟುಕೊಳ್ಳಬೇಕು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.ಅರಮನೆ ಮೈದಾನದಲ್ಲಿ ಬಿಜೆಪಿಯ ಬೂತ್‌ ವಿಜಯ ಸಂಕಲ್ಪ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಿಜೆಪಿಯು ಕುಟುಂಬ ರಾಜಕಾರಣವನ್ನು ಗಮನದಲ್ಲಿಟ್ಟುಕೊಂಡು ನಾವು, ನಮ್ಮ ಕಾರ್ಯಕರ್ತರು ಕೆಲಸ ಮಾಡಬೇಕಿದೆ ಎಂದು ಹೇಳಿದರು.ಇಂದು ನಾವು ಚುನಾವಣೆಯನ್ನು ಸರಿಯಾದ ರೀತಿಯಲ್ಲಿ ಎದುರಿಸಿದರೆ ಗೆಲುವು ಸಾಧಿಸಬಹುದು ಎಂಬುದಕ್ಕೆ ಇಂದು ಹಲವಾರು ಉದಾಹರಣೆಗಳು ನಮ್ಮ ಮುಂದಿವೆ. ಉತ್ತರ ಪ್ರದೇಶ, ಉತ್ತರಾಖಂಡ, ರಾಜ್ಯದ ಚುನಾವಣೆ ಇರಬಹುದು. ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಅಮಿತ್‌ ಶಾ ಇರಬಹುದು ಪಕ್ಷವನ್ನು ಅತ್ಯುತ್ತಮವಾಗಿ ಮುನ್ನಡೆಸುತ್ತಿದ್ದಾರೆ ಎಂದು ತಿಳಿಸಿದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಗೆಲುವಿನಂಚಿನಲ್ಲಿ ಎಡವಿದ ರಾಕೇಶ್ ಅಡಿಗಗೆ ಸಿಕ್ಕ ಬಹುಮಾನವೆಷ್ಟು..!!??

Sun Jan 1 , 2023
ಬಿಗ್‌ಬಾಸ್ ಕನ್ನಡ ಸೀಸನ್‌ 09 ಹೊಸವರ್ಷದ ರಾತ್ರಿ ಅದ್ಧೂರಿಯಾಗಿ ಮುಗಿದಿದೆ. ಒಟಿಟಿಯಲ್ಲಿ ಅದ್ಭುತವಾಗಿ ಆಡಿ ಚಾಂಪಿಯನ್ ಎನಿಸಿಕೊಂಡಿದ್ದ ರೂಪೇಶ್ ಶೆಟ್ಟಿಯವರೇ ಬಿಗ್‌ಬಾಸ್ ಸೀನಸ್ 09ರ ವಿನ್ನರ್ ಆಗಿದ್ದಾರೆ.ಒಟಿಟಿಯಲ್ಲಿಯೂ ಅದ್ಭುತವಾಗಿ ಆಡಿದ್ದ ರಾಕೇಶ್ ಅಡಿಗ ಬಿಗ್‌ಬಾಸ್ ಕನ್ನಡ ಸೀಸನ್ 09 ರಲ್ಲಿ ಚೆನ್ನಾಗಿ ಆಡಿ ರನ್ನರ್ ಅಪ್ ಆಗಿದ್ದಾರೆ.ಹಲವು ಮಂದಿ ಸ್ವತಃ ರಾಕೇಶ್ ಅಡಿಗ ಅವರೇ ಗೆಲ್ಲುತ್ತಾರೆ ಎಂದುಕೊಂಡಿದ್ದರು ಆದರೆ ಅದು ಸುಳ್ಳಾಗಿದೆ.ನೂರು ದಿನದಲ್ಲಿ ಕೇವಲ ಒಂದು ಬಾರಿಯಷ್ಟೆ ಮನೆಯವರಿಂದ ನಾಮಿನೇಟ್ […]

Advertisement

Wordpress Social Share Plugin powered by Ultimatelysocial