ಕೌಟುಂಬಿಕ ಕಲಹ ತಾಯಿ ಆತ್ಮಹತ್ಯೆ ನೊಂದ ಮಗ ನೇಣಿಗೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಾಯಿ- ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮನಗರದ ಕುಮಾರಸ್ವಾಮಿ ಲೇಔಟ್‌ನಲ್ಲಿ ನಡೆದಿದೆ.ಕುಮಾರಸ್ವಾಮಿ ಲೇಔಟ್‌ನ ವಿಜಯಲಕ್ಷ್ಮಿ (೫೦) ಹಾಗೂ ಅವರ ಪುತ್ರ ಹರ್ಷ (೨೫) ಎಂದು ಗುರುತಿಸಲಾಗಿದೆ. ತಾಯಿ ವಿಜಯಲಕ್ಷ್ಮಿ ಜೊತೆ ಊಟದ ವಿಚಾರಕ್ಕೆ ಮಗ ಹರ್ಷ ರಾತ್ರಿ ಜಗಳವಾಡಿದ್ದ. ಮಗನ ಮಾತಿನಿಂದ ಮನನೊಂದ ವಿಜಯಲಕ್ಷ್ಮಿ ಮನೆಯ ಬಳಿ ಸಂಪಿಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ.
ಬಳಿಕ ವಿಜಯಲಕ್ಷ್ಮಿ ಅವರನ್ನ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ತಾಯಿ ಮೃತಪಟ್ಟ ವಿಚಾರ ತಿಳಿದು ತೀವ್ರವಾಗಿ ಮನನೊಂದ ಹರ್ಷ ನಾನೇ ತಾಯಿಯ ಸಾವಿಗೆ ಕಾರಣನಾದೆ ಎಂದು ಭಾವಿಸಿ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆಗೆ ಸಂಬಂಧಿಸಿ ಐಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪೀಣ್ಯ ಫ್ಲೈಓವರ್‌ನಲ್ಲಿ ಭಾರೀ ವಾಹನಗಳ ಸಂಚಾರ ನಿರ್ಬಂಧ

Sat Jan 14 , 2023
ರಾಷ್ಟ್ರೀಯ ಹೆದ್ದಾರಿ ೪ರ ಪೀಣ್ಯ ಮೇಲು ಸೇತುವೆ (ಫ್ಲೈಓವರ್) ರಸ್ತೆಯ ಮೇಲೆ ಮತ್ತೆ ಭಾರೀ ವಾಹನಗಳ ಓಡಾಟಕ್ಕೆ ನಿರ್ಬಂಧ ಹೇರಲಾಗಿದೆ.ಕಳೆದ ವರ್ಷ ಪೀಣ್ಯ ಫ್ಲೈಓವರ್‌ನ ಎರಡು ಪಿಲ್ಲರ್‌ನ ಕೇಬಲ್‌ಗಳಲ್ಲಿ ತಾಂತ್ರಿಕ ಸಮಸ್ಯೆ ಕಂಡು ಬಂದ ಕಾರಣ ಮೂರ್ನಾಲ್ಕು ತಿಂಗಳುಗಳ ಕಾಲ ಭಾರೀ ವಾಹನಗಳ ಓಡಾಟಕ್ಕೆ ನಿರ್ಬಂಧ ಹೇರಲಾಗಿತ್ತು. ಪಿಲ್ಲರ್‌ಗಳಿಗೆ ಕೇಬಲ್ ಅಳವಡಿಸಿದ ಬಳಿಕ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ ಸಿ) ಭಾರಿ ವಾಹನಗಳ ಓಡಾಡಿಸಿ ತಪಾಸಣೆ ಮಾಡಿ ಸಂಚಾರಕ್ಕೆ ಗ್ರಿನ್ […]

Advertisement

Wordpress Social Share Plugin powered by Ultimatelysocial