ಕೃಷಿ ಹೊಂಡಕ್ಕೆ ಹಾರಿ ಮೂವರ ಸಾವು


 

ಇಬ್ಬರು ಮಕ್ಕಳೊಂದಿಗೆ ತಾಯಿ ಸಹ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬಾಗಲಕೋಟ ಜಿಲ್ಲೆಯ ಬಾದಾಮಿ ತಾಲೂಕಿನ ಹಲಕುರ್ಕಿ ಗ್ರಾಮದಲ್ಲಿ ನಡೆದಿದೆ. ತಾಯಿ ಫಕೀರವ್ವ ನೀಲನ್ನವರ ಮಕ್ಕಳಾದ ನೀಲಕಂಠ , ಕಲ್ಪನಾ ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿಗಳು.ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಮನನೊಂದು ತಾಯಿ ಫಕೀರವ್ವ, ತನ್ನ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಶವಗಳನ್ನು ಬಾದಾಮಿ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಬಾದಾಮಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ

Please follow and like us:

Leave a Reply

Your email address will not be published. Required fields are marked *

Next Post

ಉದ್ಯಮಿಯ ಪುತ್ರಿ ಡ್ರಗ್ ಕೇಸ್ನಲ್ಲ್ಲಿ ರೆಡ್ ಹ್ಯಾಂಡ್

Tue Mar 23 , 2021
ಸಿಸಿಬಿ ರಹಸ್ಯ ಕಾರ್ಯಾಚರಣೆಯಲ್ಲಿ ಹುಬ್ಬಳ್ಳಿಯ ಗೋಕುಲದ ವಿಮಾನ ನಿಲ್ದಾಣದ ಬಳಿ ಡ್ರಗ್ ಪೆಡ್ಲರ್ ಅಜಯ್ ರಾಮ್ ಮತ್ತು ವೆಂಕಟೇಶ್ ರಾವ್ ಹಾಗು ಉದ್ಯಮಿ ಪುತ್ರಿ ಶಿಮ್ರಾನ್ ಜಿತ್ ಕೌರ್ ರನ್ನು ಬಂಧನ ಮಾಡಲಾಗಿದೆ.   ಹುಬ್ಬಳ್ಳಿಯ ಪ್ರತಿಷ್ಟಿತ ಹೋಟೆಲ್ ಉದ್ಯಮಿಯ ಪುತ್ರಿ ಡ್ರಗ್ ಖರೀದಿಸುವಾಗ ರೆಡ್ ಹ್ಯಾಂಡ್ ಆಗಿ ಹುಬ್ಬಳ್ಳಿ ಮತ್ತು ಧಾರವಾಡದ ಸಿಸಿಬಿ ಪೊಲೀಸರಿಗೆ ಸಿಕ್ಕಿಹಾಕಿಕೊಂಡಿದ್ದಾರೆ. ಸಿಸಿಬಿ ರಹಸ್ಯ ಕಾರ್ಯಾಚರಣೆಯಲ್ಲಿ ಹುಬ್ಬಳ್ಳಿಯ ಗೋಕುಲದ ವಿಮಾನ ನಿಲ್ದಾಣದ ಬಳಿ ಡ್ರಗ್ […]

Advertisement

Wordpress Social Share Plugin powered by Ultimatelysocial