ರೈತ ನಾಯಕ ರಾಕೇಶ್ ಟಿಕಾಯತ್ ಮುಖಕ್ಕೆ ಮಸಿ

ಬೆಂಗಳೂರು,ಮೇ 30- ರೈತರ ಸಭೆಯಲ್ಲಿ ಭಿನ್ನಾಭಿಪ್ರಾಯ ಮೂಡಿ ಪಾಲ್ಗೊಂಡಿದ್ದವರು ಪರಸ್ಪರ ಕೈ ಕೈ ಮಿಲಾಯಿಸಿದ ಘಟನೆ ಇಂದು ಗಾಂಭವನದಲ್ಲಿ ನಡೆದಿದೆ. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಹಮ್ಮಿಕೊಂಡಿದ್ದ ರೈತ ಚಳುವಳಿ ಆತ್ಮಾವಲೋಕನ ಸ್ಪಷ್ಟೀಕರಣ ಸಭೆಯಲ್ಲಿ ಪಾಲ್ಗೊಂಡಿದ್ದ ರೈತ ನಾಯಕ ರಾಕೇಶ್ ಟಿಕಾಯತ್ ಸೇರಿದಂತೆ ಹಲವರಿಗೆ ಮಸಿ ಬಳಿದ ಘಟನೆಯು ನಡೆದು ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಯಿತು.

ಆಂಗ್ಲ ಭಾಷೆಯಲ್ಲಿ ಮಾತನಾಡುವ ಸಂದರ್ಭದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಟೀಕೆಗಳನ್ನು ಮಾಡಿದ ಸಂದರ್ಭದಲ್ಲಿ ಕೆಲವರು ಆಕ್ಷೇಪ ವ್ಯಕ್ತಪಡಿಸಿದರು. ಈ ವೇಳೆ ಕೆಲವರು ಅವರನ್ನು ತಡೆದು ಏರು ಧ್ವನಿಯಲ್ಲಿ ಪ್ರಶ್ನಿಸಿದರು.

ಪರಿಸ್ಥಿತಿ ವಿಕೋಪಕ್ಕೆ ತೆರಳಿ ಸಭಿಕರ ಕುರ್ಚಿಗಳನ್ನೇ ಮೇಲೆತ್ತೆಸೆದು ಪರಸ್ಪರ ಹೊಡೆದಾಡಿಕೊಂಡರು. ಈ ವೇಳೆ ಮಧ್ಯಪ್ರವೇಶಿಸಿದ ಪೊಲೀಸರು ಎಲ್ಲರನ್ನು ಸಮಾಧಾನಪಡಿಸಿ ಹೊರಗೆ ಕಳುಹಿಸಿದರು.

ಸಭೆಯನ್ನು ಹಾಳು ಮಾಡಲು ಕೆಲವರು ಷಡ್ಯಂತರ ನಡೆಸಿದ್ದಾರೆ ಎಂದು ಆಯೋಜಕರು ಆರೋಪಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಸಭೆಯನ್ನೇ ನಡೆಸುವವರು ಶಿಸ್ತಿನಿಂದ ವರ್ತಿಸಿಲ್ಲ. ರೈತರ ನಡುವೆ ಒಡಕು ಮೂಡಿಸಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಒಟ್ಟಾರೆ ರೈತರ ಆತ್ಮಾವಲೋಕನ ಸಭೆ ರಣರಂಗವಾಗಿ ಮಾರ್ಪಟ್ಟಿದ್ದು ವಿಪರ್ಯಾಸ ಎಂದು ಕೆಲವರು ಗೊಣಗುತ್ತಲೇ ಹೊರ ನಡೆದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಾಂಸ್ಕøತಿಕ ನಗರಿ ಮೈಸೂರಿನಲ್ಲಿ ಜೂನ್ 21ರಂದು ನಡೆಯಲಿರುವ ವಿಶ್ವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Mon May 30 , 2022
  ಬೆಂಗಳೂರು,ಮೇ 30- ಸಾಂಸ್ಕøತಿಕ ನಗರಿ ಮೈಸೂರಿನಲ್ಲಿ ಜೂನ್ 21ರಂದು ನಡೆಯಲಿರುವ ವಿಶ್ವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವ ಹಿಸುತ್ತಿರುವ ಕಾರಣ ಅಗತ್ಯ ಪೂರ್ವ ಸಿದ್ದತೆಗಳನ್ನು ಕೈಗೊಳ್ಳು ವಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಸೂಚನೆ ನೀಡಿದರು. ಗೃಹ ಕಚೇರಿ ಕೃಷ್ಣಾದಲ್ಲಿ ವಿಡಿಯೋ ಕಾನರೆನ್ಸ್ ಮೂಲಕ ಕೇಂದ್ರ ಆಯುಷ್ ಸಚಿವರಿಗೆ ಕೈಗೊಂಡಿರುವ ಪೂರ್ವ ಸಿದ್ದತೆಗಳ ಬಗ್ಗೆ ಮಾಹಿತಿ ನೀಡಿದರು. ಜೂ.21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ […]

Advertisement

Wordpress Social Share Plugin powered by Ultimatelysocial