ರೈತರು ಬೆಳೆದ ಲಕ್ಷಾಂತರ ಮೌಲ್ಯದ ಬೆಳೆಗಳು ಕಾಡಾನಡಗಳ ದಾಳಿಯಿಂದ ಹಾನಿಯಾಗಿರುವ ಘಟನೆ ಕೋಲಾರದ ಗಡಿ ಭಾಗದಲ್ಲಿ ಜರುಗಿದೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಭೀಮಗಾನಹಳ್ಳಿ ಗ್ರಾಮದಲ್ಲಿ ಈ ಘಟನೆ ಜರುಗಿದ್ದು,ರೈತನ ಒಂದು ಎಕರೆ ಟೊಮ್ಯಾಟೊ ತೋಟ ಸಂಪೂರ್ಣ ನಾಶವಾಗಿದೆ. ಇತ್ತೀಚೆಗಷ್ಟೇ ರೈತನು ಸಾಲಮಾಡಿ ಟೊಮ್ಯಾಟೊ ಬೆಳೆದಿದ್ದ, ಇನ್ನೇನು ಫಸಲು ಬಿಡುವಷ್ಟರಲ್ಲಿ ಕಾಡಾನೆಗಳ ದಾಳಿಯಿಂದ ಇಡೀ ತೋಟ ಹಾನಿಯಾಗಿದೆ. ಇದಲ್ಲದೆ ಭೀಮಗಾನಹಳ್ಳಿ ಸುತ್ತಮುತ್ತಲಿನಲ್ಲಿ ಹಲವಾರು ರೈತರು ಬಾಳೆ, ಕ್ಯಾಪ್ಸಿಕಂ ಸೇರಿದಂತೆ ವಿವಿಧ ಬೆಳೆಗಳನ್ನ ಬೆಳೆದಿದ್ದು, ಅವುಗಳೆಲ್ಲಾ ಕಾಡಾನೆಗಳ ಪಾಲಾಗಿದೆ. ಇನ್ನು ಈ ಹಿಂದೆಯೂ ಸಹ ಕಾಡಾನೆಗಳ ದಾಳಿಗೆ ಲಕ್ಷಾಂತರ ಮೌಲ್ಯದ ಬೆಳೆಗಳು ಹಾನಿಯಾಗಿದ್ದು, ಇದುವರೆಗೂ ಅರಣ್ಯ ಇಲಾಖೆ ಕಡೆಯಿಂದ ನಯಾ ಪೈಸೆಯೂ ಬಂದಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ. ಅಲ್ಲದೆ ಸಮಸ್ಯೆ ಹೇಳಿಕೊಳ್ಳುವುದಕ್ಕೆ ಹೋದರೆ ಅಧಿಕಾರಿಗಳು ಬೇಜವಾಬ್ದಾರಿ ತನದಿಂದ ವರ್ತಿಸುತ್ತಿದ್ದಾರೆಂದು ಅರೋಪಿಸಿದ್ದಾರೆ. ಜೊತೆಗೆ ಕಾಡಾನೆಗಳಿಂದ ವಿಮುಕ್ತಿಗೊಳಿಸಿ , ರೈತರಿಗೆ ಬೆಳೆ ನಷ್ಟ ಪರಿಹಾರ ಒದಗಿಸಬೇಕೆಂದು ಮನವಿ ಮಾಡಿದ್ರು.
ಇದನ್ನೂ ಓದಿ:ಮಣ್ಣು ಕುಸಿದು ಬಿದ್ದು ಕೂಲಿ ಕಾರ್ಮಿಕ ಮೃತ