ಕಳಪೆ ಬಿತ್ತನೆ ಆಲೂಗಡ್ಡೆ ಹಾಗೂ ಮಾಂಡೋಸ್ ಚಂಡಮಾರುತದಿಂದ ನಷ್ಟವಾಗಿರುವ ರೈತರಿಗೆ ಬೆಳೆ ವಿಮೆ ನೀಡುತ್ತೇವೆಂದು ಪ್ರಧಾನ ಮಂತ್ರಿ ಫಸಲ್ ಭೀಮಾ ವಿಮೆ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ರೈತರಿಂದ ಕಟ್ಟಿಸಿಕೊಂಡಿರುವ ಬೆಳೆ ವಿಮೆ ಕಂಪನಿ ಮಾಲೀಕರು ನಾಪತ್ತೆಯಾಗಿದ್ದು ವಿಮೆ ಕಂಪನಿಗಳ ಮಾಲೀಕರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಬೇಕೆಂದು ಒತ್ತಾಯಿಸಿ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ ತೋಟಗಾರಿಕೆ ಇಲಾಖೆ ಕಚೇರಿಯ ಮುಂದೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪ್ರತಿಭಟನೆ ಮಾಡಿ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದರು ನಂತರ ಮಾತನಾಡಿದಂತಹ ರಾಜ್ಯ ಉಪಾಧ್ಯಕ್ಷ ನಾರಾಯಣಗೌಡ ಊಜಿ ರೋಗ ಅಂಗಮಾರಿ ಅರ್ಧ ಬೆಳೆಯನ್ನು ಕಸಿದುಕೊಂದಿದ್ದು ಮಾಂಡೋಸ್ ಚಂಡಮಾರುತ ರೈತರ ವರ್ಷದ ಗಂಜಿಯಾದ ರಾಗಿ ಬೆಳೆಯನ್ನು ಹಾಗೂ ವಾಣಿಜ್ಯ ಬೆಳೆಗಳನ್ನು ಸಂಪೂರ್ಣವಾಗಿ ನೀರಿನಲ್ಲಿ ಕೊಚ್ಚಿ ಹೋಗುವ ಹಾಗೆ ಕಸಿದುಕೊಂಡಿದೆ ನಷ್ಟವಾಗಿರುವ ಪ್ರತಿ ಎಕರೆಗೆ 2 ಲಕ್ಷ ರೂಪಾಯಿ ಘೋಷಣೆ ಮಾಡಬೇಕೆಂದು ಒತ್ತಾಯಿಸಿ ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕರ ಮೂಲಕ ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳಿಗೆ ಸಲ್ಲಿಸಲು ಮನವಿ ಮಾಡಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/de…