ಫೆ.7ರಿಂದ ರಾಜ್ಯ ಬಜೆಟ್ ಪೂರ್ವಭಾವಿ ಸಿದ್ಧತೆ

ಬೆಂಗಳೂರು,ಫೆ.2- ಇದೇ 7ರಿಂದ ಬಜೆಟ್ ಪೂರ್ವಭಾವಿ ಸಿದ್ಧತೆ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಿಧ ಇಲಾಖೆಗಳೊಂದಿಗೆ ಆಯವ್ಯಯ ಪೂರ್ವಭಾವಿ ಸಭೆಗಳನ್ನು ಮುಂದಿನ ವಾರದಿಂದ ನಡೆಸಲಾಗುವುದು ಎಂದು ಹೇಳಿದರುಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ದೊರೆಯಲಿರುವ ಸಾಲ ಹಾಗೂ ಅನುದಾನಗಳ ಆಧಾರದ ಮೇಲೆ ರಾಜ್ಯ ಸರ್ಕಾರದ ಆಯವ್ಯಯದ ನಿರ್ಣಯಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ನಾಳೆ ದೆಹಲಿ ಪ್ರವಾಸ:ಆಯವ್ಯಯಕ್ಕೂ ಮುನ್ನ ರಾಜ್ಯದ ಎಲ್ಲಾ ಸಂಸದರೊಂದಿಗೆ ಸಭೆ ಸೇರುವ ವಾಡಿಕೆಯಿದೆ. ಈ ಸಭೆಗೆ ಸಮಯ ನಿಗದಿಯಾಗುತ್ತಿದೆ. ಅಂತಾರಾಜ್ಯ ಜಲವಿವಾದಗಳಲ್ಲಿ ರಾಜ್ಯವನ್ನು ಪ್ರತಿನಿಸುವ ವಕೀಲರನ್ನೂ ಭೇಟಿಯಾಗಲಿದ್ದು, ಬಹುತೇಕವಾಗಿ ನಾಳೆ ದೆಹಲಿಗೆ ಪ್ರಯಾಣ ಬೆಳೆಸುವ ಸಾಧ್ಯತೆಗಳಿವೆ ಎಂದು ಅವರು ತಿಳಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ತೃಣಮೂಲ ಕಾಂಗ್ರೆಸ್​ ಪಕ್ಷದ ಅಧ್ಯಕ್ಷೆಯಾಗಿ ಮಮತಾ ಮರು ಆಯ್ಕೆ

Wed Feb 2 , 2022
ಕೋಲ್ಕತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತೃಣಮೂಲ ಕಾಂಗ್ರೆಸ್​ ಪಕ್ಷದ ಅಧ್ಯಕ್ಷೆಯಾಗಿ ಮರು ಆಯ್ಕೆಯಾಗಿದ್ದಾರೆ.ಕೋಲ್ಕತಾದ ನೇತಾಜಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪಕ್ಷದ ಚುನಾವಣೆಗಳಲ್ಲಿ ಟಿಎಂಸಿ ಅಧ್ಯಕ್ಷರು ಮತ್ತು ಕಾರ್ಯಕಾರಿ ಸಮಿತಿಯನ್ನು ರಚನೆ ಮಾಡಲಾಯಿತು.ಈ ಸಂದರ್ಭದಲ್ಲಿ ನಡೆದ ಪಕ್ಷದ ಸಾಂಸ್ಥಿಕ ಚುನಾವಣೆಯಲ್ಲಿ ಮಮತಾ ಅವರನ್ನು ಮತ್ತೊಂದು ಅವಧಿಗೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.ಮರು ಆಯ್ಕೆ ಬಳಿಕ ಮಾತನಾಡಿದ ಮಮತಾ, 2024ರ ಲೋಕಸಭೆ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್​​ ಉತ್ತರ ಪ್ರದೇಶದಿಂದ ಸ್ಪರ್ಧೆ […]

Advertisement

Wordpress Social Share Plugin powered by Ultimatelysocial