ಪ್ರತಿ ಬಾರಿಯೂ ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಸಮಸ್ಯೆ ಸಾಮಾನ್ಯವಾಗಿದೆ.

 

ಉತ್ತಮ ಮಳೆಯಾದ ಸಂದರ್ಭದಲ್ಲಿ ಸಕಾಲಕ್ಕೆ ರಸಗೊಬ್ಬರ ನೀಡಿದರೆ ಒಳ್ಳೆಯ ಫಸಲು ಸಿಗಬಹುದು ಎಂಬ ನಿರೀಕ್ಷೆ ರೈತ ಸಮುದಾಯದಲ್ಲಿರುತ್ತದೆ. ಆದರೆ ಸಕಾಲಕ್ಕೆ ರಸಗೊಬ್ಬರ ಸಿಗದಿದ್ದರೆ ಉತ್ತಮ ಬೆಳೆಯ ಕನಸು ಕರಗಿಹೋಗುತ್ತದೆ.

ಈ ಬಾರಿ ಮುಂಗಾರು ಮಳೆ ಉತ್ತಮವಾಗಿರುತ್ತದೆ ಎಂದು ಹವಾಮಾನ ಇಲಾಖೆ ಈಗಾಗಲೇ ಮಾಹಿತಿ ನೀಡಿದ್ದು, ಹೀಗಾಗಿ ರೈತರು ತಮ್ಮ ಹೊಲಗದ್ದೆಗಳನ್ನು ಹಸನುಗೊಳಿಸಿ ಬೆಳೆಯ ತಯಾರಿಯಲ್ಲಿದ್ದಾರೆ. ಆದರೆ ಹೆಚ್ಚುತ್ತಿರುವ ದರ ಮತ್ತು ಪೂರೈಕೆಯಲ್ಲಾಗುತ್ತಿರುವ ವ್ಯತ್ಯಾಸದಿಂದಾಗಿ ಈ ಬಾರಿ ರಸಗೊಬ್ಬರ ಕೊರತೆ ಎದುರಾಗಬಹುದೆಂಬ ಆತಂಕ ರೈತ ಸಮುದಾಯವನ್ನು ಕಾಡುತ್ತಿದೆ.

ಇದಕ್ಕೆ ಪುಷ್ಟಿ ನೀಡುವಂತೆ ರೈತರು, ಅಂಗಡಿಗಳ ಮುಂದೆ ಕಾದು ನಿಲ್ಲಬೇಕಾದ ಪರಿಸ್ಥಿತಿ ಇದ್ದು, ಕೆಲವೆಡೆ ರಸಗೊಬ್ಬರ ಪೂರೈಕೆಯಾದ ತಕ್ಷಣವೇ ಖಾಲಿಯಾಗುತ್ತಿದೆ. ರಸಗೊಬ್ಬರ ದುಬಾರಿಯಾಗಿರುವುದರ ಮಧ್ಯೆ ಅದರ ಕೊರತೆಯೂ ಎದುರಾದರೆ ಹೇಗೆ ಎಂಬ ಚಿಂತೆ ಕೃಷಿಕರನ್ನು ಕಾಡುತ್ತಿದೆ. ಆದರೆ ಕೃಷಿ ಇಲಾಖೆ ಅಧಿಕಾರಿಗಳ ಪ್ರಕಾರ ರಾಜ್ಯದಲ್ಲಿ ರಸಗೊಬ್ಬರ ಅಭಾವ ಎದುರಾಗುವ ಸಾಧ್ಯತೆ ಇಲ್ಲ ಎನ್ನಲಾಗಿದೆ. ಮುಂಗಾರು ಹಂಗಾಮಿನಲ್ಲಿ ರೈತರಿಗೆ ಸಾಕಷ್ಟು ರಸಗೊಬ್ಬರ ಪೂರೈಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಪತ್ನಿಯ ಶೀಲ ಶಂಕಿಸಿದ ಪತಿ ಮುದ್ದೆಕೋಲಿನಿಂದ ಹೊಡೆದು ಕೊಲೆ!

Sun Apr 24 , 2022
  ಬೆಂಗಳೂರು: ಪತ್ನಿಯ ಶೀಲ ಶಂಕಿಸಿದ ಪತಿ ಮುದ್ದೆಕೋಲಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ತಲಘಟ್ಟ ಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದೆ. ನಾಗೇಗೌಡನ ಪಳ್ಯದ ನಿವಾಸಿ ಪದ್ಮಾ (45) ಕೊಲೆ ಯಾದ ಮಹಿಳೆ. ಕೊಲೆ ಪ್ರಕರಣದ ಸಂಬಂಧ ತಲಘಟ್ಟಪುರ ಪೊಲೀಸರು ಆಕೆಯ ಪತಿ ಮಾರಪ್ಪನನ್ನು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ. ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಮಾರಪ್ಪ ವ್ಯವಸಾಯ ಮಾಡಿಕೊಂಡು ಕುಟುಂಬ ನಿರ್ವಹಿಸುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. […]

Advertisement

Wordpress Social Share Plugin powered by Ultimatelysocial