ನವದೆಹಲಿ: ಮೋದಿ ನೇತೃತ್ವದ ಸರ್ಕಾರದ 10 ನೇ ಬಜೆಟ್ ವಿಶೇಷತೆ ಬಗ್ಗೆ ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

ನವದೆಹಲಿ: ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು 2022 -23 ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ.ಬೆಳಗ್ಗೆ 11 ಗಂಟೆಗೆ ಲೋಕಸಭೆಯಲ್ಲಿ ನಿರ್ಮಲಾ ಸೀತಾರಾಮನ್ ಮಂಡಿಸಲಿದ್ದಾರೆ.ನಾಲ್ಕನೇ ಬಾರಿಗೆ ಅವರು ಬಜೆಟ್ ಮಂಡನೆ ಮಾಡುತ್ತಿದ್ದಾರೆ.ಕಾಗದ ರಹಿತ ಬಜೆಟ್ಬಜೆಟ್ ಪ್ರತಿಯ ಸೂಟ್ ಕೇಸ್ ಬದಲು ಈ ಬಾರಿಯೂ ಟ್ಯಾಬ್ಲೆಟ್ ಸಂಪ್ರದಾಯ ಮುಂದುವರೆಸಲಾಗಿದೆ.90 ರಿಂದ 120 ನಿಮಿಷಗಳ ಕಾಲ ಬಜೆಟ್ ಮಂಡಿಸುವ ಸಾಧ್ಯತೆಯಿದೆ.2020ರಲ್ಲಿ ದಾಖಲೆಯ 160 ನಿಮಿಷ ಬಜೆಟ್ ಮಂಡಿಸಿದ್ದರು.2022 -23 ನೇ ಸಾಲಿನ ಕೇಂದ್ರದ ಪೂರ್ಣಪ್ರಮಾಣದ ಬಜೆಟ್ ಇಂದು ಮಂಡನೆಯಾಗಲಿದೆ2019, 2020 ಮತ್ತು 2021 ರಲ್ಲಿ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡಿಸಿದ್ದರು.ಇಂದು ನಾಲ್ಕನೇ ಬಾರಿಗೆ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ.ಇದು ನರೇಂದ್ರ ಮೋದಿ ನೇತೃತ್ವದ ಸರ್ಕಾರದ 10ನೇ ಬಜೆಟ್ ಆಗಿದೆ.ಕೊರೋನಾ ಕಾರಣದಿಂದ ಬಜೆಟ್ ನಲ್ಲಿ ಸಾಕಷ್ಟು ಬದಲಾವಣೆ ಮಾಡಲಾಗಿದೆ.ಕಳೆದ ಎರಡು ವರ್ಷಗಳಿಂದ ಬಜೆಟ್ ಪ್ರತಿ ಮುದ್ರಿಸುತ್ತಿಲ್ಲ.ಡಿಜಿಟಲ್ ರೂಪದಲ್ಲಿ ಇರಲಿದೆ ಈ ಬಾರಿಯ ಕೇಂದ್ರ ಬಜೆಟ್.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಲಾಭಕ್ಕಾಗಿ ಸಿದ್ದರಾಮಯ್ಯ ಅಹಿಂದ ಬಳಸಿಕೊಂಡಿದ್ದಾರೆ: ಎ.ಹೆಚ್.ವಿಶ್ವನಾಥ್

Tue Feb 1 , 2022
 ಮೈಸೂರು: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ನನಗೆ ದ್ರೋಹ ಬಗೆದಿದ್ದಾರೆ ಎಂದು ಕಾಂಗ್ರೆಸ್‌ ಶಾಸಕ ಸಿ.ಎಂ.ಇಬ್ರಾಹಿಂ ಆರೋಪಿಸಿದ ಬೆನ್ನಲ್ಲೇ ಬಿಜೆಪಿ ಶಾಸಕ ಎ.ಎಚ್‌.ವಿಶ್ವನಾಥ್‌ ಅವರು ಕೂಡ ಸಿದ್ದರಾಮಯ್ಯ ವಿರುದ್ಧ ಸೋಮವಾರ ವಾಗ್ದಾಳಿ ನಡೆಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿರುವ ವಿಶ್ವನಾಥ್ ಅವರು, ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಅಸ್ತಿತ್ವಕ್ಕಾಗಿ ಕುರುಬ ಸಮುದಾಯದ ನಾಯಕತ್ವವನ್ನು ಮುಗಿಸಿದ್ದಾರೆಂದು ಕಿಡಿಕಾರಿದ್ದಾರೆ.ಸಿದ್ದರಾಮಯ್ಯ ಅವರು ಅಹಿಂದ(ಅಲ್ಪಸಂಖ್ಯಾತರು, ಹಿಂದುಳಿದವರು ಮತ್ತು ದಲಿತರ ಕನ್ನಡ ಸಂಕ್ಷಿಪ್ತ ರೂಪ)ವನ್ನು ಬಳಕೆ ಮಾಡಿಕೊಂಡಿದ್ದು, ಈ […]

Advertisement

Wordpress Social Share Plugin powered by Ultimatelysocial