ಬೆಂಗಳೂರು, ಡಿ.20- ಅತ್ತ ಬೆಳಗಾವಿ ಯಲ್ಲಿ ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದರೆ ಇತ್ತ ರಾಜಧಾನಿ ಬೆಂಗಳೂರಿನಲ್ಲಿ ಶಿವರಾಮೇಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಮಹಾರಾಷ್ಟ್ರ ಸರ್ಕಾರದ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿವೆ.
ಎಂಇಎಸ್ನವರು ನಮ್ಮ ನಾಡಧ್ವಜಕ್ಕೆ ಅವಮಾನ ಮಾಡಿದ್ದಾರೆ. ಸರ್ಕಾರದ ವಾಹನಗಳಿಗೆ ಬೆಂಕಿ ಇಟ್ಟು ಸರ್ಕಾರದ ಮೇಲೆ ದಾಳಿ ಮಾಡಿದ್ದಾರೆ. ಆದರೆ ಸರ್ಕಾರ ಕ್ರಮ ಕೈಗೊಳ್ಳಲು ಹಿಂದೆ ಮುಂದೆ ನೋಡುತ್ತಿದೆ ಎಂದು ಕರವೇ ಅಧ್ಯಕ್ಷ ಶಿವರಾಮೇಗೌಡ ಆರೋಪ ಮಾಡಿದರು.
ಮೈಸೂರು ಬ್ಯಾಂಕ್ ವೃತ್ತದ ಬಳಿ ಪ್ರತಿಭಟನೆ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಈಗ ಬೂದಿ ಮುಚ್ಚಿದ ಕೆಂಡದಂತಿದೆ. ಅಲ್ಲಿ ಎಂಇಎಸ್ ಹಿಟ್ಲರ್ ರೀತಿ ವರ್ತಿಸುತ್ತಿದೆ. ಎಂಇಎಸ್ ಬಾಯಿ ಮುಚ್ಚಿಸುವ ಕೆಲಸವನ್ನು ಮಾಡಬೇಕಿದೆ.
ಸರ್ಕಾರದ ಆಸ್ತಿಪಾಸ್ತಿಯನ್ನು ಹಾಳು ಮಾಡುವ ಸ್ವಾತಂತ್ರ್ಯ ಸೇನಾನಿ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಭಗ್ನ ಮಾಡುವಂತಹ ದುಷ್ಕøತ್ಯ ಎಸಗಿರುವುದಲ್ಲದೆ ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜವನ್ನು ಸುಟ್ಟು ಅವಮಾನ ಮಾಡಿದ್ದಾರೆ.
ಇದನ್ನು ಸಹಿಸಲು ಸಾಧ್ಯವಿಲ್ಲ. ಒಕ್ಕೂಟ ವ್ಯವಸ್ಥೆಯಲ್ಲಿ ಶಾಂತಿ-ಸುವ್ಯವಸ್ಥೆಗೆ ಧಕ್ಕೆ ತರುತ್ತಿರುವ ಇಂತಹ ಸಂಘಟನೆಯನ್ನು ಸಂಪೂರ್ಣವಾಗಿ ನಿಷೇಧ ಮಾಡಬೇಕು. ನಮ್ಮ ಸ್ವಾಭಿಮಾನ ಅಡವಿಟ್ಟು ಅವರನ್ನು ಓಲೈಸುವ ಕೆಲಸವನ್ನು ಯಾರೂ ಮಾಡಬಾರದು. ಮುಂದಿನ ಹೋರಾಟ ದಲ್ಲಿ ನಾವು ತಕ್ಕ ಪ್ರತ್ಯುತ್ತರ ಕೊಡುವ ಕೆಲಸ ಮಾಡುತ್ತೇವೆ ಎಂದು ಕಿಡಿಕಾರಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada