ಭಾರತೀಯ ಸಮಾಜದಲ್ಲಿ ಚಾಲ್ತಿಯಲ್ಲಿದ್ದ ಜಾತಿ ತಾರತಮ್ಯದ ವಿರುದ್ಧದ ಹೋರಾಟದಲ್ಲಿ ಕೇರಳದ ಸಂತ–ಸಮಾಜ ಸುಧಾರಕ ಶ್ರೀ ನಾರಾಯಣ ಗುರುಗಳ ಕೊಡುಗೆಯನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಶ್ಲಾಘಿಸಿದರು ಮತ್ತು ಅವರು ಧರ್ಮವನ್ನು ಪರಿಷ್ಕರಿಸಿದರು ಮತ್ತು ಕಾಲಕ್ಕೆ ತಕ್ಕಂತೆ ಬದಲಾಯಿಸಿದರು ಎಂದು ಹೇಳಿದರು.
ಶ್ರೀನಾರಾಯಣ ಗುರುಗಳ ಬೋಧನೆಗಳು ಮತ್ತು ‘ಒಂದೇ ಜಾತಿ, ಒಂದೇ ಧರ್ಮ ಮತ್ತು ಒಂದೇ ದೇವರು’ ಎಂಬ ಸಂದೇಶವನ್ನು ಜನರು ಅನುಸರಿಸಿದರೆ, ಜಗತ್ತಿನ ಯಾವುದೇ ಶಕ್ತಿಯು ದೇಶವನ್ನು ವಿಭಜಿಸಲು ಸಾಧ್ಯವಿಲ್ಲ ಎಂದು ಮೋದಿ ಹೇಳಿದರು.
ಗುರುಗಳ ಸಂದೇಶವು ‘ಆತ್ಮ ನಿರ್ಭರ ಭಾರತ‘ದ ಕಡೆಗೆ ದಾರಿಯನ್ನು ತೋರಿಸಿದೆ ಎಂದು ಪ್ರಧಾನಿ ಗಮನಸೆಳೆದರು.
ಶಿವಗಿರಿ ತೀರ್ಥೋದ್ಭವದ 90ನೇ ವರ್ಷಾಚರಣೆ ಹಾಗೂ ಬ್ರಹ್ಮ ವಿದ್ಯಾಲಯದ ಸುವರ್ಣ ಮಹೋತ್ಸವದ ಅಂಗವಾಗಿ ಶ್ರೀನಾರಾಯಣ ಧರ್ಮ ಸಂಘ ಟ್ರಸ್ಟ್ ದೆಹಲಿಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಅವರು ಮಾತನಾಡಿದರು.
ಗುರುಗಳು ಸಾಮಾಜಿಕ ಅನಿಷ್ಟಗಳ ವಿರುದ್ಧ ಪ್ರಚಾರ ಮಾಡಿದರು ಮತ್ತು ಭಾರತಕ್ಕೆ ಅದರ ನೈಜತೆಯ ಬಗ್ಗೆ ಅರಿವು ಮೂಡಿಸಿದರು ಎಂದು ಮೋದಿ ಸ್ಮರಿಸಿದರು.
ಅವರು ಜಾತೀಯತೆಯ ಹೆಸರಿನಲ್ಲಿ ನಡೆಯುತ್ತಿರುವ ತಾರತಮ್ಯದ ವಿರುದ್ಧ ಹೋರಾಡಿದರು ಎಂದು ಸಮಾರಂಭದಲ್ಲಿ ಪ್ರಧಾನಮಂತ್ರಿ ಹೇಳಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: