ಬೆಂಗಳೂರು: ನನ್ನನ್ನು ಕಂಡರೆ ಕುಮಾರಸ್ವಾಮಿಗೆ ಭಯ! ಅಂತಾರೆ. ಇದು ಭ್ರಮೆಯ ಪರಮಾವಧಿ. ಮತ್ತೆ ಸಿಎಂ ಆಗಲ್ಲ ಎಂದು ಖಚಿತವಾದ ಮೇಲೆ ಹತಾಶೆ, ಅಸಹನೆಯ ಬೆಂಕಿಯಲ್ಲಿ ಬೇಯುತ್ತಿದ್ದಾರೆ, ಪಾಪ. ಇದು ವಿಪರೀತಕ್ಕೆ ಹೋಗಿದೆ ಎನ್ನುವುದಕ್ಕೆ ಕಾಂಗ್ರೆಸ್ ಕಚೇರಿಯಲ್ಲಿ ಅವರು ಕೊಟ್ಟ ಹೇಳಿಕೆಗಳೇ ಸಾಕ್ಷಿ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಸಿದ್ಧರಾಮಯ್ಯ ವಿರುದ್ಧ ಕಿಡಿ ಕಾರಿದ್ದಾರೆ.
ಈ ಬಗ್ಗೆ ಸರಣಿ ಟ್ವಿಟ್ ಮಾಡಿರುವಂತ ಅವರು, ‘ಸ್ವಯಂ ಘೋಷಿತ ಸಂವಿಧಾನ ಪಂಡಿತ ‘ ಸಿದ್ದರಾಮಯ್ಯ ನಮ್ಮ ಪಕ್ಷ & ನಮ್ಮ ಬಗ್ಗೆ ಲಘುವಾಗಿ ಮಾತನಾಡಿದ್ದಕ್ಕೆ ನಾನು ಉತ್ತರ ಕೊಟ್ಟಿದ್ದೇನೆ. ಮಾತು ಆಡಿದ ಮೇಲೆ ಅದನ್ನು ದಕ್ಕಿಸಿಕೊಳ್ಳುವ ಯೋಗ್ಯತೆಯೂ ಇರಬೇಕಲ್ಲವೇ? ಆ ಯೋಗ್ಯತೆ ಅವರಿಗಿಲ್ಲ ಎಂದಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada