SA vs IND: 4 ವರ್ಷಗಳ ಬಳಿಕ ಭಾರತ ಏಕದಿನ ತಂಡಕ್ಕೆ ಅನುಭವಿ ಬೌಲರ್..?

India vs South Africa: ತಂಡದಲ್ಲಿ ಆಲ್​ರೌಂಡರ್ ಸ್ಪಿನ್ನರ್​ಗಳಾಗಿ ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ ಮತ್ತು ಯುಜ್ವೇಂದ್ರ ಚಹಲ್ ಅವರನ್ನು ಎದುರಿಸಲಿದ್ದಾರೆ.ಭಾರತ-ದಕ್ಷಿಣ ಆಫ್ರಿಕಾ ನಡುವಣ ಟೆಸ್ಟ್ ಸರಣಿ ಶುರುವಾಗಿದೆ. ಮೂರು ಪಂದ್ಯಗಳ ಟೆಸ್ಟ್ ಸರಣಿ ಬಳಿಕ ಟೀಮ್ ಇಂಡಿಯಾ ಏಕದಿನ ಸರಣಿಯನ್ನೂ ಸಹ ಆಡಲಿದೆ.

ಆದರೆ ಈ ಸರಣಿಗಾಗಿ ಭಾರತ ಏಕದಿನ ತಂಡ ಇನ್ನೂ ಕೂಡ ಘೋಷಣೆಯಾಗಿಲ್ಲ ಎಂಬುದು ವಿಶೇಷ. ಇದೇ ಕಾರಣದಿಂದ ಸೌತ್ ಆಫ್ರಿಕಾ ವಿರುದ್ದದ ಏಕದಿನ ತಂಡದಲ್ಲಿ ಯಾರಿಗೆಲ್ಲಾ ಅವಕಾಶ ಸಿಗಲಿದೆ ಎಂಬ ಕುತೂಹಲ ಎಲ್ಲರಲ್ಲಿದೆ. ಮತ್ತೊಂದೆಡೆ ಈ ಸರಣಿಯೊಂದಿಗೆ ಟೀಮ್ ಇಂಡಿಯಾದ ಹಿರಿಯ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಕಂಬ್ಯಾಕ್ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.

2021 ರ ಟಿ20 ವಿಶ್ವಕಪ್​ಗೆ ನಾಲ್ಕು ವರ್ಷಗಳ ಬಳಿಕ ಅಶ್ವಿನ್ ಮರಳಿದ್ದರು. ಇದೀಗ ಏಕದಿನ ತಂಡಕ್ಕೂ ಮರಳುವ ವಿಶ್ವಾಸದಲ್ಲಿದ್ದಾರೆ. ಅಶ್ವಿನ್ 2017 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಕೊನೆಯ ಏಕದಿನ ಪಂದ್ಯವನ್ನೂ ಆಡಿದ್ದರು. ಇದೀಗ ಮತ್ತೆ ತಂಡದಲ್ಲಿ ಹಿರಿಯ ಆಟಗಾರನಿಗೆ ಅವಕಾಶ ನೀಡುವ ಬಗ್ಗೆ ಚೇತನ್ ಶರ್ಮಾ ಅವರ ಆಯ್ಕೆ ಸಮಿತಿ ಚರ್ಚೆ ನಡೆಸಿದೆ ಎಂದು ತಿಳಿದು ಬಂದಿದೆ. ಅಷ್ಟೇ ಅಲ್ಲದೆ ಮುಂದಿನ ಎರಡು ದಿನಗಳಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ತಂಡವನ್ನು ಆಯ್ಕೆ ಮಾಡಲಾಗುತ್ತಿದ್ದು, ಈ ತಂಡದಲ್ಲಿ ಅಶ್ವಿನ್ ಸ್ಥಾನ ಪಡೆಯಲಿದ್ದಾರೆ ಎಂದು ಹೇಳಲಾಗಿದೆ.

ಆದರೆ ಮತ್ತೊಂದೆಡೆ ತಂಡದಲ್ಲಿ ಆಲ್​ರೌಂಡರ್ ಸ್ಪಿನ್ನರ್​ಗಳಾಗಿ ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ ಮತ್ತು ಯುಜ್ವೇಂದ್ರ ಚಹಲ್ ಅವರನ್ನು ಎದುರಿಸಲಿದ್ದಾರೆ. ಆದರೆ ಈ ಇಬ್ಬರು ಆಟಗಾರರು ಗಾಯಗೊಂಡಿರುವ ಕಾರಣ ಏಕದಿನ ಸರಣಿಗೆ ಲಭ್ಯರಿದ್ದಾರಾ ಎಂಬುದರ ಬಗ್ಗೆ ಖಚಿತತೆ ಇಲ್ಲ. ಹೀಗಾಗಿ ಅಶ್ವಿನ್​ಗೆ ಅವಕಾಶ ನೀಡುವ ಸಾಧ್ಯತೆಯಿದೆ.

ಈ ಬಗ್ಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಆಯ್ಕೆ ಸಮಿತಿ ಸದಸ್ಯ ಚೇತನ್ ಶರ್ಮಾ, ಅಶ್ವಿನ್ ಅವರನ್ನು ಪವರ್‌ಪ್ಲೇ ಅಥವಾ ಮಧ್ಯಮ ಓವರ್‌ಗಳಲ್ಲಿ ಬಳಸಬಹುದು ಎಂದಿದ್ದಾರೆ. ಅಷ್ಟೇ ಅಲ್ಲದೆ ಯಾವುದೇ ಸಮಯದಲ್ಲಿ, ಯಾವುದೇ ಪರಿಸ್ಥಿತಿಯಲ್ಲಿ ಬೌಲ್ ಮಾಡುವ ಆಲ್ ರೌಂಡರ್ ಅನುಭವ ಹೊಂದಿರುವ ಬೌಲರ್ ಅನ್ನು ಆಯ್ಕೆ ಮಾಡುವುದು ಮುಖ್ಯ ಎಂದು ತಿಳಿಸಿದ್ದರು. ಇಲ್ಲಿ ಅಶ್ವಿನ್ ಅವರ ಹೆಸರನ್ನು ಉಲ್ಲೇಖಿಸಿರುವುದರಿಂದ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ರವಿಚಂದ್ರನ್ ಅಶ್ವಿನ್ ಆಯ್ಕೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಒಂದೇ ಜಾಗದಲ್ಲಿ ಸಮಂತಾ-ನಾಗಚೈತನ್ಯ : ಎದುರುಬದುರಾಗದಂತೆ ಸಿಬ್ಬಂದಿಗಳಿಂದ ಮುಂಜಾಗ್ರತೆ..!

Sun Dec 26 , 2021
ಸಿನಿಮಾ ಇಂಡಸ್ಟ್ರಿಯೇ ಹಾಗೇ. ಎಷ್ಟೆರ ಬೇಡ ಎಂದರೂ ಎದುರು ಬದುರು ಆಗಲೇಬೇಕಾದ ಕೆಲವೊಂದು ಪರಿಸ್ಥಿತಿಗಳು ಎದುರಾಗುತ್ತವೆ. ಅಂಥದ್ದೇ ಪರಿಸ್ಥಿತಿ ಸಮಂತಾ ಹಾಗೂ ನಾಗಚೈತನ್ಯಗೂ ಎದುರಾಗಿತ್ತು. ಇಂದು ಕಾಲದಲ್ಲಿ ಟಾಲಿವುಡ್ ನ ಮೋಸ್ಟ್ ಪಾಪುಲರ್ ಜೋಡಿಗಳಲ್ಲಿ ಸಮಂತಾ ನಾಗಚೈತನ್ಯ ಜೋಡಿ ಕೂಡ ಒಂದಾಗಿತ್ತು. ಅವರಿಬ್ಬರ ಪ್ರೀತಿ ಕಂಡು ಫ್ಯಾನ್ಸ್ ಖುಷಿಯಾಗಿದ್ರು. ಅವರಿಬ್ಬರು ದಾಂಪತ್ಯ ಜೀವನಕ್ಕೆ ಕಾಲಿಟ್ಟಾಗ ಹಾರೈಸಿದ್ದರು. ಆದ್ರೆ ಅವರಿಬ್ಬರು ದೂರಾದ ಮೇಲೆ ಅಷ್ಟೇ ಬೇಸರ ಕೂಡ ಅಭಿಮಾನಿಗಳನ್ನ ಕಾಡಿತ್ತು. ಅವರಿಬ್ಬರ […]

Advertisement

Wordpress Social Share Plugin powered by Ultimatelysocial