ಕೋರ್ಟ್ ಏನು ಮಾಡಬೇಕು.? ನಾವೇನು ರಷ್ಯಾ ದಾಳಿಯನ್ನು ನಿಲ್ಲಿಸುವಂತೆ ರಷ್ಯಾ ಅಧ್ಯಕ್ಷ ಪುಟೀನ್ ಅವರಿಗೆ ನಿರ್ದೇಶನ ನೀಡಬೇಕೇ ಎಂದು ಅರ್ಜಿದಾರರಿಗೆ ಪ್ರಶ್ನಿಸಿತು.
ಸಾಮಾಜಿಕ ಮಾಧ್ಯಮದಲ್ಲಿ ಸರ್ಕಾರ ಏನು ಮಾಡುತ್ತಿದ್ದಾರೆ ಎಂದು ಹೇಳುವ ಕೆಲವು ವೀಡಿಯೊಗಳನ್ನು ನಾನು ನೋಡಿದೆ. ನಾವು ಅವರ ಬಗ್ಗೆ ಸಹಾನುಭೂತಿ ಹೊಂದಿದ್ದೇವೆ ಎಂದು ಸಿಜೆಐ ಹೇಳಿದರು.
ಈ ವೇಳೆ ಅರ್ಜಿದಾರರ ಪರ ವಕೀಲರು ಉಕ್ರೇನ್ ನಲ್ಲಿರುವಂತ ಭಾರತೀಯರಲ್ಲಿ, ಅವರ ಪೋಷಕರಲ್ಲಿ ಭಯ ಹೆಚ್ಚಾಗುತ್ತಿದೆ. ಆತಂಕ ಮನೆ ಮಾಡಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿದಾಗ, ಸಿಐಜೆಯವರು ಸರ್ಕಾರ ಈಗಾಗಲೇ ಸ್ಥಳಾಂತರ ಕಾರ್ಯಾಚರಣೆ ಮಾಡುತ್ತಿದೆ. ಆ ಬಗ್ಗೆ ಮತ್ತಷ್ಟು ಮಾಹಿತಿಯನ್ನು ನಾವು ಎಜೆಯನ್ನು ಕೇಳುತ್ತೇವೆ ಎಂದರು.
ನಂತರ ಸುಪ್ರೀಂ ಕೋರ್ಟ್ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ ಅವರನ್ನು ಸರ್ಕಾರೊಂದಿಗೆ ಮಾತನಾಡಿ, ಉಕ್ರೇನ್ ನಲ್ಲಿ ಸಿಲುಕಿಕೊಂಡಿರುವ ವಿದ್ಯಾರ್ಥಿಗಳಿಗೆ ಸಹಾಯ ಮಾಡುವಂತೆ ಸೂಚಿಸಿತು. ದಯವಿಟ್ಟು ನಿಮಗೆ ಸಾಧ್ಯವಾದಷ್ಟು ಸಹಾಯ ಮಾ ಎಂದು ಸಿಜೆಐ ಎಜೆಗೆ ತಿಳಿಸಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada