‘ದೇಶದ ಚಿತ್ರರಂಗ ಒಕ್ಕೊರಲಿನಿಂದ ಬಾಲಿವುಡ್‌ನ ಪರವಾಗಿ ನಿಲ್ಲುವ ಕಾಲ ಬಂದಿದೆ.

 

ಬಾಲಿವುಡ್‌ನಲ್ಲಿ ಈಗ ಬಾಯ್ಕಾಟ್ ಟ್ರೆಂಡ್ ಜಾಸ್ತಿ ಆಗುತ್ತಿದೆ. ಅದರಲ್ಲೂ ಆಮಿರ್ ಖಾನ್‌ರ ‘ಲಾಲ್ ಸಿಂಗ್ ಚಡ್ಡಾ’ ಸೇರಿದಂತೆ ಸಾಕಷ್ಟು ಹಿಂದಿ ಸಿನಿಮಾಗಳಿಗೆ ಬಾಯ್ಕಾಟ್ ಬಿಸಿ ತಟ್ಟಿತ್ತು. ಸದ್ಯ ತೆರೆಗೆ ಬರಲು ಸಜ್ಜಾಗಿರುವ ಶಾರುಖ್ ಖಾನ್‌ ಅವರ ‘ಪಠಾಣ್‌’ ಸಿನಿಮಾದ ವಿರುದ್ಧವು ಬಾಯ್ಕಾಟ್‌ ಅಭಿಯಾನ ಜೋರಾಗಿದೆ. ಈ ಮಧ್ಯೆ ಬಹುಭಾಷಾ ನಟ ಕಿಶೋರ್‌ ಅವರು ಬಾಲಿವುಡ್‌ಗೆ ಸಪೋರ್ಟ್ ಮಾಡಿ ಒಂದು ಪೋಸ್ಟ್ ಹಾಕಿದ್ದಾರೆ. ‘ಬಾಲಿವುಡ್‌ ವಿರುದ್ಧ ನಡೆಯುತ್ತಿರುವ ಬಾಯ್ಕಾಟ್ ಟ್ರೆಂಡ್ ಅನ್ನು, ಮತಾಂಧ ಗೂಂಡಾಗಿರಿಯನ್ನು, ದ್ವೇಷದ ರಾಜಕೀಯವನ್ನು ಖಂಡಿಸಿ ಬಾಲಿವುಡ್‌ನ ಪರವಾಗಿ ನಿಲ್ಲುವ ಕಾಲ ಬಂದಿದೆ..’ ಎಂದು ಕರೆ ನೀಡಿದ್ದಾರೆ.’ಇಡೀ ದೇಶದ ಚಿತ್ರರಂಗ ಒಕ್ಕೊರಲಿನಿಂದ ಬಾಲಿವುಡ್‌ ವಿರುದ್ಧ ನಡೆಯುತ್ತಿರುವ ಬಾಯ್ಕಾಟ್ ಟ್ರೆಂಡ್ ಅನ್ನು, ಮತಾಂಧ ಗೂಂಡಾಗಿರಿಯನ್ನು, ದ್ವೇಷದ ರಾಜಕೀಯವನ್ನು ಖಂಡಿಸಿ ಬಾಲಿವುಡ್‌ನ ಪರವಾಗಿ ನಿಲ್ಲುವ ಕಾಲ ಬಂದಿದೆ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದಲ್ಲಿ ಒಂದು ವ್ಯಾಪಾರ ಅಥವಾ ಉದ್ಯಮದ ಸುರಕ್ಷತೆಯನ್ನು ಖಚಿತಪಡಿಸಲು ಸಾಧ್ಯವಾಗದಿರುವುದು ಸರ್ಕಾರಗಳ ವೈಫಲ್ಯಕ್ಕೆ ಸಾಕ್ಷಿ..’ ಎಂದು ಅವರು ಬರೆದುಕೊಂಡಿದ್ದಾರೆ.’ಇಷ್ಟಾದರೂ ಚಿತ್ರರಂಗದವರು ಮಾತನಾಡದೇ ಕೂತಿರುವ ಹೆದರಿಕೆಯ ವಾತಾವರಣ ಸೃಷ್ಟಿಯಾಗಿರುವುದು, ಕಾನೂನು ಸುವ್ಯವಸ್ಥೆಯ ಜವಾಬ್ದಾರಿ ಹೊತ್ತ ಸರ್ಕಾರಿ ಅಧಿಕಾರಿಗಳಿಗೆ ನಾಚಿಕೆಗೇಡಿನ ಸಂಗತಿ. ಇದು ಸಮಾಜವನ್ನು ವಿಷಪೂರಿತಗೊಳಿಸುವ ಸ್ಪಷ್ಟ ಕಾನೂನು ಉಲ್ಲಂಘನೆಯಾಗಿದ್ದು, ಇದನ್ನು ತಡೆಯಬೇಕಿದೆ, ಶಿಕ್ಷಿಸಬೇಕಾಗಿದೆ. ದ್ವೇಷದ ಈ ಬೆಂಕಿ ಸ್ಥಳೀಯ ಚಿತ್ರೋದ್ಯಮಗಳಿಗೂ ವ್ಯಾಪಿಸುವ ಮುನ್ನ ಎಂದು ಕಿಶೋರ್ ಬರೆದುಕೊಂಡಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನಿಯಮದ ವಿರುದ್ಧ ಕಿಡಿ ಕಾರಿದ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್

Mon Jan 9 , 2023
ಭಾರತ ಕ್ರಿಕೆಟ್ ಹಿರಿಯ ಪುರುಷರ ತಂಡಕ್ಕೆ ಆಯ್ಕೆಯಾಗಲು ಯೋ-ಯೋ ಮತ್ತು ಡೆಕ್ಸಾ ಫಿಟ್‌ನೆಸ್ ಪರೀಕ್ಷೆಗಳನ್ನು ಕಡ್ಡಾಯಗೊಳಿಸಿರುವ ಬಿಸಿಸಿಐ ಕ್ರಮವನ್ನು ಭಾರತದ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಟೀಕಿಸಿದ್ದಾರೆ. ತಂಡಕ್ಕೆ ಆಯ್ಕೆಯಾಗಲು ಫಿಟ್ನೆಸ್ ಬೇಕು, ಆದರೆ ಈ ರೀತಿಯ ಟೆಸ್ಟ್‌ಗಳು ಅನಗತ್ಯ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಬಿಸಿಸಿಐ ಇತ್ತೀಚೆಗೆ ಭಾರತ ತಂಡಕ್ಕೆ ಆಯ್ಕೆಯಾಗಲು, ಗಾಯಗೊಂಡ ಆಟಗಾರರು ತಂಡಕಕ್ಕೆ ಮರಳಲು ಯೋ-ಯೋ ಮತ್ತು ಡೆಕ್ಸಾ ಪರೀಕ್ಷೆ ಕಡ್ಡಾಯವಾಗಿದೆ. ಒಬ್ಬ ಉದಯೋನ್ಮುಖ ಆಟಗಾರರ ದೇಶೀಯ […]

Advertisement

Wordpress Social Share Plugin powered by Ultimatelysocial