ಮಾಜಿ ಶಿಕ್ಷಣ ಸಚಿವ, ಬ್ಯಾಡಗಿ ಕ್ಷೇತ್ರದ ಧುರೀಣ ಡಾ.ಹೆಗ್ಗಪ್ಪ ದೇಶಪ್ಪ ಲಮಾಣಿ ವಿಧಿವಶರಾಗಿದ್ದಾರೆ.

ಹಾವೇರಿ: ಮಾಜಿ ಶಿಕ್ಷಣ ಸಚಿವ, ಬ್ಯಾಡಗಿ ಕ್ಷೇತ್ರದ ಧುರೀಣ ಡಾ.ಹೆಗ್ಗಪ್ಪ ದೇಶಪ್ಪ ಲಮಾಣಿ ವಿಧಿವಶರಾಗಿದ್ದಾರೆ. ಅವರಿಗೆ 93 ವರ್ಷ ವಯಸ್ಸಾಗಿತ್ತು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ದೇಶಪ್ಪ ಲಮಾಣಿ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ.

ದೇಶಪ್ಪ ಲಮಾಣಿ ಕರ್ನಾಟಕ ವಿಶ್ವವಿದ್ಯಾಲಯದ ಕಲಾ ಮಹಾವಿದ್ಯಾಲಯದ ಮುಖ್ಯ ಪ್ರಾಧ್ಯಾಪಕರಾಗಿಯೂ ಕಾರ್ಯನಿರ್ವಹಿಸಿದ್ದರು. ಹಿರಿಯ ನಾಯಕನ ಅಗಲಿಕೆಗೆ ರಾಜಕೀಯ ಗಣ್ಯರು ಕಂಬನಿ ಮಿಡಿದಿದ್ದಾರೆ.

ಬ್ಯಾಡಗಿ ಕ್ಷೇತ್ರದಿಂದ 1983 ಹಾಗೂ 1989ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು. ವೀರಪ್ಪ ಮೊಯ್ಲಿ ಮುಖ್ಯಮಂತ್ರಿಯಾಗಿದ್ದಾಗ ಸಚಿವ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದ್ದರು.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಗ್ರಾಮಸ್ಥರಿಗೆ ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದ ಆಯುರ್ವೇದಿಕ್ ವೈದ್ಯಾದಿಕಾರಿ.

Tue Jan 17 , 2023
ಗ್ರಾಮಸ್ಥರಿಗೆ ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದ ಆಯುರ್ವೇದಿಕ್ ವೈದ್ಯಾದಿಕಾರಿ ಯುನಾನಿ ಸರ್ಕಾರಿ ಆಸ್ಪತ್ರೆಯ ಔಷಧಿಗಳನ್ನು ಅಕ್ರಮವಾಗಿ ಸಾಗಾಟ ಮಾಡುವಾಗ ಸಿಕ್ಕಿಬಿದ್ದ ವೈದ್ಯಾಧಿಕಾರಿ ತಹೇರಾ ಎಂಬ ಆಯುರ್ವೇದಿಕ್ ವೈದ್ಯಾಧಿಕಾರಿ‌ ಅಕ್ರಮವಾಗಿ ಔಷಧಿಗಳನ್ನು ಸಾಗಾಟ ಆರೋಪ ಅಕ್ರಮವಾಗಿ ಸಾಗಾಟ ಮಾಡುವಾಗ ಗ್ರಾಮಸ್ಥರ ಎದುರಿಗೆ ಸಿಕ್ಕಿಬಿದ್ದ ವೈದ್ಯಾಧಿಕಾರಿ‌ ಬೀದರ್ ತಾಲೂಕಿನ ಗೋರನಳ್ಳಿ ಗ್ರಾಮದ ಯುನಾನಿ ಆಯುಷ್ಯ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿ‌ ರವಿವಾರ ಸರ್ಕಾರಿ ರಜೆ ಇದ್ದರೂ ಕಾರಿನಲ್ಲಿ ಔಷಧಿಗಳನ್ನು ತೆಗೆದುಕೊಂಡು ಹೋಗುವಾಗ ಅನುಮಾನಗೊಂಡ ಗ್ರಾಮಸ್ಥರು […]

Advertisement

Wordpress Social Share Plugin powered by Ultimatelysocial