ನವಂಬರ್ ೧೦ ರಂದು ಗದಗ ದಿಂದ ಲಕ್ಷ್ಮೇಶ್ವರ ಮೂಲಕವಾಗಿ ಹೋಗುವ ಪಾಲಾ ಬಾದಾಮಿ ರಾಜ್ಯ ಹೆದ್ದಾರಿಯನ್ನು ೧೦ ದಿನಗಳ ಒಳಗಾಗಿ ದುರಸ್ತಿ ಕಾರ್ಯ ಪ್ರಾರಂಭಿಸುವುದಾಗಿ ಲಕ್ಷ್ಮೇಶ್ವರ ಪೋಲಿಸ್ ಠಾಣೆಯಲ್ಲಿ ನಡೆದ ಎಲ್ಲ ಹಿರಿಯ ಅಧಿಕಾರಿಗಳು ಸಭೆಯಲ್ಲಿ ತಿಳಿಸಿದ್ದರು.ಅವರು ಅವರು ರಸ್ತೆ ಕಾಮಗಾರಿ ಆರಂಭವಾಗದೆ ಇರುವುದನ್ನು ಖಂಡಿಸಿ ಶಿಗ್ಲಿ ಕರ್ನಾಟಕ ರಕ್ಷಣಾ ವೇದಿಕೆ, ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ, ಜಯ ಕರ್ನಾಟಕ ಹಾಗೂ ತಾಲೂಕಿನ ವಿವಿಧ ಸಂಘಟನೆಯ ಬೆಂಬಲದೊಂದಿಗೆ ಲಕ್ಷ್ಮೇಶ್ವರ ಪಟ್ಟಣದ ಶಿಗ್ಲಿ ಕ್ಲಾಸ್ ನಲ್ಲಿ ನಿರಂತರ ಧರಣಿ ಸತ್ಯಾಗ್ರಹವನ್ನು ಸದರಿ ಸಂಘಟನೆಯ ತಾಲೂಕ ಘಟಕದಿಂದ ಹಮ್ಮಿಕೊಳ್ಳಲಾಯಿತು.ಧರಣಿ ನಿರತ ಸತ್ಯಾಗ್ರಹ ಎರಡನೇ ದಿನವಾದ ಇಂದು ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಒಂದು ವಾರದಲ್ಲಿ ರಸ್ತೆ ಕಾಮಗಾರಿ ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ನವಂಬರ್ ೧೦ ರಂದು ಗದಗ ದಿಂದ ಲಕ್ಷ್ಮೇಶ್ವರ
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
Please follow and like us: