ಶಾರ್ಟ್‌ ಸರ್ಕಿಟ್‌ನಿಂದ ಸುಟ್ಟು ಕರಕಲಾದ ಮನೆ.

ದಗ: ವಿದ್ಯುತ್ ಶಾರ್ಟ್ ಸರ್ಕಿಟ್‌ನಿಂದ ಮನೆಯೊಂದು ಸುಟ್ಟು ಭಸ್ಮವಾಗಿದೆ. ಈ ಬೆಂಕಿಯಲ್ಲಿ ೩ ಮೇಕೆ ಮರಿಗಳು ಸಜೀವ ದಹನವಾಗಿವೆ. ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಹರದಗಟ್ಟಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಇಬ್ರಾಹಿಂ ಸಾಬ್ ತಾಡಪತ್ರಿ ಎಂಬುವರಿಗೆ ಸೇರಿದ ಮನೆ ಬೆಂಕಿಗಾಹುತಿಯಾಗಿದೆ.

ಕುಟುಂಬಸ್ಥರು ಭಾನುವಾರ ಸಂಕ್ರಮಣಕ್ಕೆಂದು ಬೇರೆ ಊರಿಗೆ ಹೋಗಿದ್ದರು. ಸೋಮವಾರ ನಸುಕಿನ ಜಾವ ೫ ಗಂಟೆ ಸುಮಾರಿಗೆ ಮನೆಗೆ ಬೆಂಕಿ ಕಾಣಿಸಿಕೊಂಡಿದೆ. ಮನೆಯಲ್ಲಿದ್ದ ೩ ಮೇಕೆ ಮರಿ ಸಜೀವ ದಹನವಾಗಿದೆ. ಇನ್ನು ಲಕ್ಷಾಂತರ ರೂಪಾಯಿ ಮೌಲ್ಯದ ಅನೇಕ ಗೃಹೋಪಯೋಗಿ ವಸ್ತುಗಳು ಸುಟ್ಟು ಭಸ್ಮವಾಗಿವೆ.

ನಂತರ ಅಗ್ನಿಶಾಮಕ ದಳ ಸಿಬ್ಬಂದಿಗಳು ಹಾಗೂ ಸ್ಥಳಿಯರಿಂದ ಬೆಂಕಿ‌ ನಂದಿಸಲು ಮುಂದಾದರು. ನಂತರ ಸ್ಥಳಿಯರು‌ ಕುಟುಂಬಸ್ಥರಿಗೆ ಮಾಹಿತಿ‌ ನೀಡಿದ್ದಾರೆ. ಬೆಳಿಗ್ಗೆ ಬಂದು ನೋಡಿದಾಗ ಕುಟುಂಬಸ್ಥರಿಗೆ ಶಾಕ್ ಆದಂತಾಗಿದೆ. ಈ ಕುರಿತು ಗದಗ ಜಿಲ್ಲೆ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪ್ರಿಯಾಂಕ ಗಾಂಧಿಯನ್ನು ಸ್ವಾಗತಿಸಲು ಆಗಮಿಸಿದ ಕಾಂಗ್ರೆಸ್ ನಾಯಕರು.

Mon Jan 16 , 2023
ದೇವನಹಳ್ಳಿ ಏರ್ಪೋರ್ಟ್ ಪ್ರಿಯಾಂಕ ಗಾಂಧಿಯನ್ನು ಸ್ವಾಗತಿಸಲು ಆಗಮಿಸಿದ ಕಾಂಗ್ರೆಸ್ ನಾಯಕರು. ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ. ೧೧.೫೫ ಕ್ಕೆ ಆಗಮಿಸುವ ಪ್ರಿಯಾಂಕ ಗಾಂಧಿ.   ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow and like us:

Advertisement

Wordpress Social Share Plugin powered by Ultimatelysocial