ಬಿಡುಗಡೆಯಾಯಿತು “ಗಾಳಿಪಟ 2” ಚಿತ್ರದ ಮತ್ತೊಂದು ಸುಂದರ ಹಾಡು.

ರಮೇಶ್‌ ರೆಡ್ಡಿ ಅವರ ನಿರ್ಮಾಣದ, ಯೋಗರಾಜ್ ಭಟ್ ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಗಾಳಿಪಟ 2” ಚಿತ್ರ ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ಕುತೂಹಲ ಹುಟ್ಟಿಸಿದೆ. ಚಿತ್ರ ಬಿಡುಗಡೆಗೆ ಅಭಿಮಾನಿ ಸಮೂಹ ಕಾತುರದಿಂದ ಕಾಯುತ್ತಿದೆ.

ಈ ಚಿತ್ರಕ್ಕಾಗಿ ಜಯಂತ ಕಾಯ್ಕಿಣಿ ಅವರು ಬರೆದಿರುವ “ನೀನು ಬಗೆಹರಿಯದ ಹಾಡು” ಎಂಬ ಗೀತೆ ಇತ್ತೀಚೆಗೆ ಬಿಡುಗಡೆಯಾಗಿದೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಹಾಡನ್ನು ಖ್ಯಾತ ಗಾಯಕ ನಿಹಾಲ್ ತಾವ್ರೋ ಹಾಡಿದ್ದಾರೆ.
ಪವನ್ ಕುಮಾರ್ ಹಾಗೂ ಶರ್ಮಿಳಾ ಮಾಂಡ್ರೆ ಈ ಹಾಡಿನಲ್ಲಿ ಅಭಿನಯಿಸಿದ್ದಾರೆ. ಕುದುರೆಮುಖದ ಸುಂದರ ಪರಿಸರದಲ್ಲಿ ಈ ಹಾಡಿನ‌ ಚಿತ್ರೀಕರಣ ನಡೆದಿದೆ. ಧನು ನೃತ್ಯ ನಿರ್ದೇಶನ ಮಾಡಿದ್ದಾರೆ.

ಸದ್ಯದಲ್ಲೇ ಟೀಸರ್, ಟ್ರೇಲರ್ ಹಾಗೂ ಇನ್ನೂ ಎರಡು ಹಾಡುಗಳ ಬಿಡುಗಡೆಯಾಗಲಿದೆ. ಆಗಸ್ಟ್ 12 ಕ್ಕೆ ಚಿತ್ರ ತೆರೆಗೆ ಬರಲಿದೆ.

ಗೋಲ್ಡನ್ ಸ್ಟಾರ್ ಗಣೇಶ್, ದಿಗಂತ್, ಪವನ್ ಕುಮಾರ್, ವೈಭವಿ ಶಾಂಡಿಲ್ಯ, ಶರ್ಮಿಳಾ ಮಾಂಡ್ರೆ, ಅನಂತನಾಗ್, ಸುಧಾ ಬೆಳವಾಡಿ, ಬುಲೆಟ್ ಪ್ರಕಾಶ್, ಪದ್ಮಜಾರಾವ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಸಂತೋಷ್ ರೈ ಪಾತಾಜೆ ಈ ಚಿತ್ರದ ಛಾಯಾಗ್ರಹಕರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಮೈಸೂರು : ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರಗೆ ಟಿಕೆಟ್ ಕೇಳಿರುವುದನ್ನು ಸಮರ್ಥಿಸಿಕೊಂಡ ಎಚ್ ವಿಶ್ವನಾಥ್

Mon Jul 25 , 2022
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಮನೆ ಮಂದಿಯೆಲ್ಲಾ ರಾಜಕಾರಣದಲ್ಲಿದ್ದಾರೆ. ಅದನ್ನೇಕೆ ಯಾರು ಪ್ರಶ್ನಿಸುವುದಿಲ್ಲ. ಸತತ ಎಂಟು ಬಾರಿ ಪ್ರತಿ‌ನಿಧಿಸಿರುವ ಶಿಕಾರಿಪುರ ಕ್ಷೇತ್ರದಲ್ಲಿ ಪುತ್ರ ವಿಜಯೇಂದ್ರಗೆ ಯಡಿಯೂರಪ್ಪ ಟಿಕೆಟ್ ಕೇಳಿರುವುದರಲ್ಲಿ ತಪ್ಪೇನಿಲ್ಲ. ಯಡಿಯೂರಪ್ಪ ಇಲ್ಲದ ಬಿಜೆಪಿಯನ್ನು ಊಯಿಸಿಕೊಳ್ಳಲು ಸಾಧ್ಯವಿಲ್ಲ. ಕರ್ನಾಟಕದಲ್ಲಿ ಬಿಜೆಪಿ ನೆಲೆಯೂರಲು ಯಡಿಯೂರಪ್ಪ ಕೊಡುಗೆ ಅಪಾರವಾಗಿದೆ. ಯಡಿಯೂರಪ್ಪ ಚುನಾವಣೆಯಲ್ಲಿ ಸ್ಪರ್ಧಿಸದಿದ್ದರೂ ಕೂಡ ಪಕ್ಷಕ್ಕೆ ಅವರಯ ಮಾರ್ಗದರ್ಶನ ನೀಡುವ ಅವಶ್ಯಕತೆ ಇದೆ. ಹೀಗಾಗಿ ಯಡಿಯೂರಪ್ಪ ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯಬೇಕು. ವಿಧಾನ ಪರಿಷತ್ […]

Advertisement

Wordpress Social Share Plugin powered by Ultimatelysocial