ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಎಲ್ಲೇ ಇದ್ದರೂ ಬಂಧಿಸಲಾಗುತ್ತದೆ!

ಬೆಂಗಳೂರು : 545 ಪಿಎಸ್ ಐ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಎಲ್ಲೇ ಇದ್ದರೂ ಬಂಧಿಸಲಾಗುತ್ತದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಪ್ರಾಮಾಣಿಕವಾಗಿ ವಿಚಾರಣೆ ಆಗಬೇಕು.

ತನಿಖೆಗೆ ಸಹಕಾರ ನೀಡುತ್ತಿಲ್ಲ. ತನಿಖೆಯ ಹಾದಿ ತಪ್ಪಿಸುತ್ತಿದ್ದಾರೆ. ಕಷ್ಟಪಟ್ಟು ಓದಿದವರಿಗೆ ನ್ಯಾಯಸಿಗಬೇಕು. ದಿವ್ಯಾ ಹಾಗರಗಿ ಎಲ್ಲೇ ಇದ್ದರೂ ಬಂಧಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಇನ್ನು ಈ ಪ್ರಕರಣದಲ್ಲಿ ಪಕ್ಷಗಳ ಬಗ್ಗೆ ಪ್ರಿಯಾಂಕ್ ಖರ್ಗೆ ಮಾತನಾಡುತ್ತಿದ್ದಾರೆ. ಇದರಿಂದ ರಾಜಕೀಯ ಲಾಭ ಪಡೆದುಕೊಳ್ಳಲು ಮುಂದಾಗಿದ್ದಾರೆ. ಇಷ್ಟು ದಿನ ಪ್ರಿಯಾಂಕ್ ಖರ್ಗೆ ಯಾಕೆ ದೂರು ನೀಡಿಲ್ಲ. ತನಿಖಾಧಿಕಾರಿಗಳಿಗೆ ಆಡಿಯೋ ಕೊಡಲಿ ತನಿಖೆ ನಡೆಸುತ್ತೇವೆ ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಕಳೆದ 24 ಗಂಟೆಗಳಲ್ಲಿ 2,593 ಕೋವಿಡ್‌ ಪ್ರಕರಣಗಳು ದೇಶದಲ್ಲಿ ವರದಿಯಾಗಿವೆ.

Sun Apr 24 , 2022
 ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ ಭಾನುವಾರದ ಹೊತ್ತಿಗೆ 15,873ಕ್ಕೆ ಏರಿಕೆಯಾಗಿದೆ. ಇದೇ ವೇಳೆ ದೇಶದಲ್ಲಿ 44 ಸಾವುಗಳು ಸಂಭವಿಸಿದೆ. ಇದರೊಂದಿಗೆ, ಸಾಂಕ್ರಾಮಿಕ ರೋಗಕ್ಕೆ ಈವರೆಗೆ ಒಟ್ಟಾರೆ 5,22,193 ಮಂದಿ ಪ್ರಾಣ ತೆತ್ತಂತಾಗಿದೆ. ಕಳೆದ ಹಲವು ದಿನಗಳಿಂದ ಕೋವಿಡ್‌ ಪ್ರಕರಣಗಳ ಸಂಖ್ಯೆ ದೇಶದಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಶುಕ್ರವಾರ 2,451 ಪ್ರಕರಣಗಳು ವರದಿಯಾಗಿದ್ದವು. ಶನಿವಾರ 2,527 ಪ್ರಕರಣಗಳು ಪತ್ತೆಯಾಗಿದ್ದವು. ಇಂದು 2,593 ಪ್ರಕರಣಗಳು ದಾಖಲಾಗಿವೆ. ಏರುಗತಿಯಲ್ಲಿ ಸಾಗುತ್ತಿರುವ ಸೋಂಕು […]

Advertisement

Wordpress Social Share Plugin powered by Ultimatelysocial