ಬೆಂಗಳೂರು : 545 ಪಿಎಸ್ ಐ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಎಲ್ಲೇ ಇದ್ದರೂ ಬಂಧಿಸಲಾಗುತ್ತದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಪ್ರಾಮಾಣಿಕವಾಗಿ ವಿಚಾರಣೆ ಆಗಬೇಕು.
ತನಿಖೆಗೆ ಸಹಕಾರ ನೀಡುತ್ತಿಲ್ಲ. ತನಿಖೆಯ ಹಾದಿ ತಪ್ಪಿಸುತ್ತಿದ್ದಾರೆ. ಕಷ್ಟಪಟ್ಟು ಓದಿದವರಿಗೆ ನ್ಯಾಯಸಿಗಬೇಕು. ದಿವ್ಯಾ ಹಾಗರಗಿ ಎಲ್ಲೇ ಇದ್ದರೂ ಬಂಧಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಇನ್ನು ಈ ಪ್ರಕರಣದಲ್ಲಿ ಪಕ್ಷಗಳ ಬಗ್ಗೆ ಪ್ರಿಯಾಂಕ್ ಖರ್ಗೆ ಮಾತನಾಡುತ್ತಿದ್ದಾರೆ. ಇದರಿಂದ ರಾಜಕೀಯ ಲಾಭ ಪಡೆದುಕೊಳ್ಳಲು ಮುಂದಾಗಿದ್ದಾರೆ. ಇಷ್ಟು ದಿನ ಪ್ರಿಯಾಂಕ್ ಖರ್ಗೆ ಯಾಕೆ ದೂರು ನೀಡಿಲ್ಲ. ತನಿಖಾಧಿಕಾರಿಗಳಿಗೆ ಆಡಿಯೋ ಕೊಡಲಿ ತನಿಖೆ ನಡೆಸುತ್ತೇವೆ ಎಂದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: