ಗಂಟಲು ನೋವಿಗೆ ಇಲ್ಲಿದೆ ಮನೆಮದ್ದು

ಗಂಟಲು ನೋವಿಗೆ ಇಲ್ಲಿದೆ ಮನೆಮದ್ದು

ಚಳಿಗಾಲದಲ್ಲಿ ಕಾಡುವ ಗಂಟಲು ನೋವಿನ ಸಮಸ್ಯೆಗೆ ಮನೆಯಲ್ಲೇ ಇರುವ ಕೆಲವು ವಸ್ತುಗಳಿಂದ ಔಷಧ ತಯಾರಿಸಬಹುದು. ಅವುಗಳು ಯಾವುವು ಎಂಬುದನ್ನು ತಿಳಿಯೋಣ ಬನ್ನಿ.

ಅರಶಿನ ಸೋಂಕುಗಳ ವಿರುದ್ಧ ಅತ್ಯುತ್ತಮವಾಗಿ ಕೆಲಸ ನಿರ್ವಹಿಸುತ್ತದೆ.

ಗಂಟಲು ನೋವಿನ ಸಮಸ್ಯೆ ಇದ್ದರೆ ಒಂದು ಕಪ್ ಬೆಚ್ಚಗಿನ ನೀರಿಗೆ ಅರ್ಧ ಚಮಚ ಅರಶಿನ ಪುಡಿ ಹಾಗು ಚಿಟಿಕೆ ಉಪ್ಪು ಸೇರಿಸಿ.

ಇದನ್ನು ಬೆಚ್ಚಗಿರುವಾಗಲೇ ಕುಡಿಯುವ ಮೂಲಕ ಗಂಟಲು ನೋವನ್ನು ನಿವಾರಣೆ ಮಾಡಬಹುದು.

ಉಗುರು ಬೆಚ್ಚಗಿನ ನೀರಿಗೆ ಜೇನುತುಪ್ಪ ಹಾಗೂ ನಿಂಬೆರಸವನ್ನು ಬೆರೆಸಿ. ಜೇನುತುಪ್ಪ ಬ್ಯಾಕ್ಟೀರಿಯಾ ವಿರೋಧಿ ಗುಣ ಹೊಂದಿರುವುದರಿಂದ ಇದು ಬಹುಬೇಗ ಗಂಟಲು ನೋವಿನ ಸಮಸ್ಯೆಯನ್ನು ನಿವಾರಿಸುತ್ತದೆ.

ಉಪ್ಪು ಬೆರೆಸಿದ ಬೆಚ್ಚಗಿನ ನೀರಿನಿಂದ ಬಾಯಿ ಮುಕ್ಕಳಿಸಿ. ನಿಂಬೆರಸ ಕೂಡಾ ಸೇರಿಸಬಹುದು. ಇದು ಕೂಡ ಗಂಟಲು ನೋವಿನ ನಿವಾರಕವಾಗಿ ಕೆಲಸ ನಿರ್ವಹಿಸುತ್ತದೆ.

ಬೆಳ್ಳುಳ್ಳಿಯನ್ನು ಜಜ್ಜಿ ಅದರ ರಸವನ್ನು ಸೇವಿಸುವ ಮೂಲಕವೂ ನೀವು ಈ ಸಮಸ್ಯೆಯನ್ನು ಪರಿಹರಿಸಿಕೊಳ್ಳಬಹುದು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಬಿಗ್ ಶಾಕ್ : ತರಕಾರಿ ಬೆಲೆಯಲ್ಲಿ ಮತ್ತೆ ಏರಿಕೆ

Wed Dec 22 , 2021
ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಟೊಮೆಟೋ (Tomato), ಈರುಳ್ಳಿ (onion), ಬೀನ್ಸ್ (beans) ಸೇರಿದಂತೆ ತರಕಾರಿ ಬೆಲೆಯಲ್ಲಿ (Vegetable prices rise) ಹೆಚ್ಚಳವಾಗಿದೆ. ಮಳೆಯಿಂದಾಗಿ ತರಕಾರಿ ಬೆಲೆ ನಾಶವಾಗಿರುವುದರಿಂದ ತರಕಾರಿ ಬೆಲೆ ಏರಿಕೆಗೆ ಕಾರಣವಾಗಿದ್ದು, ಮಳೆಯಿಂದಾಗಿ ತರಕಾರಿ ಬೆಳೆಗಳು ನಾಶವಾಗಿರುವುದರಿಂದ ತರಕಾರಿ ಬೇಡಿಕೆಯಷ್ಟು ಪೂರೈಕೆಯಾಗುತ್ತಿಲ್ಲ. ಅಗತ್ಯದಷ್ಟು ತರಕಾರಿ ಪೂರೈಕೆಗೆ ಇನ್ನು ಕೆಲವು ದಿನ ಕಾಯಬೇಕಾಗಿದೆ. ಹೀಗಾಗಿ ತರಕಾರಿ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. ಬದನೆಕಾಯಿ 80 ರೂ.ಗೆ ಏರಿಕೆಯಾಗಿದೆ. ಟೊಮೆಟೋ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಕೆಜಿ ಟೊಮೆಟೋ ಬೆಲೆ 120 ರೂ.ಗೆ ಏರಿಕೆಯಾಗಿದೆ. ಒಂದು […]

Advertisement

Wordpress Social Share Plugin powered by Ultimatelysocial