ರಾಜ್ಯದ ಚಿತ್ರಮಂದಿರಗಳಲ್ಲಿ ಶೇ. 100 ರಷ್ಟು ಭರ್ತಿಗೆ ಅವಕಾಶ ಮಾಡಿಕೊಡಬೇಕು ಎಂದು ಹಿರಿಯ ನಟ ಶಿವರಾಜ್ ಕುಮಾರ್ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿತ್ರ ಮಂದಿರಕ್ಕೆ ಶೇಕಡ 50 ರಷ್ಟು ಪ್ರೇಕ್ಷಕರ ಮಿತಿ ಕುರಿತಂತೆ ಪ್ರತಿಕ್ರಿಯಿಸಿದ ಅವರು, ವಿವಿಧ ಕ್ಷೇತ್ರಗಲಿಗೆ ಶೇಕಡ 100 ರಷ್ಟು ಅವಕಾಶ ಮಾಡಿಕೊಟ್ಟಿರುವ ಸಂದರ್ಭದಲ್ಲಿ ಚಿತ್ರಮಂದಿರಕ್ಕೆ ಶೇ.
50 ರಷ್ಟು ನಿಯಮ ಯಾಕೆ ಎಂದು ಪ್ರಶ್ನಿಸಿದರು. ಈಗಾಗಲೇ ಚಿತ್ರರಂಗ ಸಂಕಷ್ಟದಲ್ಲಿದೆ. ಇಂತಹ ಸಮಯದಲ್ಲಿ ಚಿತ್ರವನ್ನು ಕಷ್ಟದಿಂದ ಪಾರು ಮಾಡಲು ಶೇ. 100 ರಷ್ಟು ಪ್ರದರ್ಶನಕ್ಕೆ ಅವಕಾಶ ಮಾಡಿಕೊಡಿ ಎಂದು ಸರ್ಕಾರಕ್ಕೆ ಮನವಿ ಮಾಡಿಕೊಂಡರು.
ಪುನೀತ್ ಅವರನ್ನು ನೆನಪಿಸಿಕೊಂಡಾಗಲೆಲ್ಲ ನಮ್ಮ ಧ್ವನಿಯೇ ಬದಲಾಗುತ್ತದೆ. ನೋವು ಹೇಳಿಕೊಳ್ಳುವ ಸ್ಥಿತಿಯಲ್ಲಿ ನಾವಿಲ್ಲ, ನೋವಿನ ಜೊತೆ ಬದುಕುತ್ತಿದ್ದೇವೆ ಎಂದು ಹೇಳಿದರು. ಅಪ್ಪು ಅಗಲಿ ಮೂರು ತಿಂಗಳು ಕಲೆದರೂ ಅಭಿಮಾನಿಗಳು ಈಗಲೂ ಅವರನ್ನು ನೆನಪಿಸಿಕೊಳ್ಳುತ್ತಾ ಪ್ರೀತಿ ವ್ಯಕ್ತಪಡಿಸುತ್ತಿದ್ದಾರೆ. ಮೈಸೂರಿನ ಶಕ್ತಿಧಾಮಕ್ಕೆ ಇತ್ತೀಚಿಗೆ ನಾನು ಹೆಚ್ಚಾಗಿ ಬರುತ್ತಿರುವುದು ಮಕ್ಕಳಿಗೆ ಹೊಸ ಅನುಭವ ಎಂದು ಅವರು ಹೇಳಿದರು.
ಶಕ್ತಿಧಾಮದ ಉಸ್ತುವಾರಿಯನ್ನು ಗೀತಾ ಅವರು ಹೊತ್ತಿದ್ದಾರೆ. ಶಕ್ತಿಧಾಮದ ಮಕ್ಕಳನ್ನು ಕರೆದುಕೊಂಡು ಬಸ್ ನಲ್ಲಿ ನಾನೇ ಒಂದು ಸುತ್ತು ಹಾಕಿದೆ. ಇದು ಅತ್ಯಂತ ಖುಷಿಕೊಟ್ಟ ಸಂಗತಿ ಎಂದು ಅವರು ತಿಳಿಸಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada