ಕಿರಣ್ ರಾಜ್ – ಪ್ರಸಿದ್ದ್ ಕಾಂಬಿನೇಶನಲ್ಲಿ ಬರಲಿದೆ ಭರ್ಜರಿ ಆಕ್ಷನ್ ಚಿತ್ರ!

“ಭರ್ಜರಿ ಗಂಡು” ಚಿತ್ರತಂಡದಿಂದ ಮತ್ತೊಂದು ಹೊಸ ಚಿತ್ರ

ತಮ್ಮ ಅಮೋಘ ಅಭಿನಯದ ಮೂಲಕ ಜನಮನಸೂರೆಗೊಳ್ಳುತ್ತಿರುವ ನಟ ಕಿರಣ್ ರಾಜ್ ನಾಯಕನಾಗಿ ನಟಿಸುತ್ತಿರುವ ಹಾಗೂ ಪ್ರಸಿದ್ದ್ ನಿರ್ದೇಶಿಸುತ್ತಿರುವ “ಭರ್ಜರಿ ಗಂಡು” ಚಿತ್ರದ ಚಿತ್ರೀಕರಣ ಪೂರ್ಣವಾಗಿ, ಡಬ್ಬಿಂಗ್ ನಡೆಯುತ್ತಿದೆ. ಬಿಡುಗಡೆಗೂ ಮುನ್ನವೇ ಈ ಚಿತ್ರದ ಬಗ್ಗೆ ಹಾಗೂ ಕಿರಣ್ ರಾಜ್ – ಪ್ರಸಿದ್ದ್ ಕಾಂಬಿನೇಶನ್ ಬಗ್ಗೆ ಉತ್ತಮ ಮಾತುಗಳು ಕೇಳಿ ಬರುತ್ತಿದೆ.

ಇದೇ ಸಂದರ್ಭದಲ್ಲಿ ಇವರಿಬ್ಬರ ಜೋಡಿಯ ಮತ್ತೊಂದು ಭರ್ಜರಿ ಆಕ್ಷನ್ ಓರಿಯೆಂಟೆಡ್ ಚಿತ್ರ ಆರಂಭವಾಗುತ್ತಿದೆ. ಈ ನೂತನ ಚಿತ್ರದ ಸ್ಕ್ರಿಪ್ಟ್ ಪೂಜೆ ಇತ್ತೀಚೆಗೆ ಬಂಡಿಮಹಾಕಾಳಿ ದೇವಸ್ಥಾನದಲ್ಲಿ ನಡೆಯಿತು.
ಚಿತ್ರತಂಡದ ಸದಸ್ಯರು ಪೂಜಾ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಪ್ರಸಿದ್ದ್ ಫಿಲಂ ಲಾಂಛನದಲ್ಲಿ “ಭರ್ಜರಿ ಗಂಡು” ಚಿತ್ರ ನಿರ್ಮಾಣವಾಗುತ್ತಿದ್ದು, ಅದೇ ಬ್ಯಾನರ್ ನಲ್ಲಿ ಈ ಚಿತ್ರ ಕೂಡ ನಿರ್ಮಾಣವಾಗಲಿದೆ.

ಜುಲೈ ಅಂತ್ಯದಲ್ಲಿ ಅಥವಾ ಆಗಸ್ಟ್ ಮೊದಲ ವಾರದಲ್ಲಿ ಚಿತ್ರೀಕರಣ ಶುರುವಾಗಲಿದೆ.

ಈ ಚಿತ್ರದಲ್ಲಿ ಕಿರಣ್ ರಾಜ್ ಪಕ್ಕಾ ಲೋಕಲ್ ಹುಡುಗನ ಪಾತ್ರದಲ್ಲಿ‌ ಕಾಣಿಸಿಕೊಳ್ಳಲಿದ್ದಾರಂತೆ. ಕಿರಣ್ ರಾಜ್ ಅವರಿಗೆ ನಾಯಕಿಯಾಗಿ ಸುರೇಖ ಅಭಿನಯಿಸಲಿದ್ದಾರೆ.
ಉಳಿದ ತಾರಾಬಳಗದ ಆಯ್ಕೆ ನಡೆಯುತ್ತಿದೆ. ಸದ್ಯದಲ್ಲೇ ಶೀರ್ಷಿಕೆ ಸಹ ಅನಾವರಣಗೊಳ್ಳಲಿದೆ.

ಸುದರ್ಶನ್ ಸುಂದರರಾಜ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ಗುಮ್ಮಿನೇನಿ ವಿಜಯ್ ಸಂಗೀತ ನಿರ್ದೇಶನ, ಕಿಟ್ಟಿ ಕೌಶಿಕ್ ಛಾಯಾಗ್ರಹಣ, ವಿನೋದ್ ಸಾಹಸ ನಿರ್ದೇಶನ ಹಾಗೂ ವೆಂಕಿ ಯುಡಿವಿ ಅವರ ಸಂಕಲನ ಈ ಚಿತ್ರಕ್ಕಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮತ್ತೆ ಬಂದರು ರೂರಲ್ ಸ್ಟಾರ್ ಅಂಜನ್.. ‘ಚೋಳ’ ಸಿನಿಮಾದ ಫಸ್ಟ್ ಲುಕ್ ರಿಲೀಸ್.. ರಣಹೇಡಿ, ಪ್ರಯಾಣಿಕರ ಗಮನಕ್ಕೆ ನಿರ್ಮಾಪಕ ಈಗ ನಿರ್ದೇಶಕ!

Sun Apr 17 , 2022
ಕನ್ನಡ ಸಿನಿಮಾ ಇಂಡಸ್ಟ್ರೀಯಲ್ಲಿ ನಿರ್ಮಾಪಕರು, ನಿರ್ದೇಶಕರಾಗೋದು, ನಿರ್ದೇಶಕರು ನಿರ್ಮಾಪಕರಾಗುವುದು ಕಾಮನ್. ಈ ಹಿಂದೆ ಪ್ರಯಾಣಿಕರ ಗಮನಕ್ಕೆ, ರಣಹೇಡಿ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದ ಡಿಎಂ ಸುರೇಶ್ ಈಗ ನಿರ್ದೇಶಕರಾಗಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಚೋಳ ಎಂಬ ಸಿನಿಮಾ ಮೂಲಕ ಸುರೇಶ್ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ಇವತ್ತು ಈ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಲಾಯಿತು. ನಿರ್ಮಾಣದ ನಂತರ ಹೆಚ್ಚಿನ ಜವಾಬ್ದಾರಿ ಹೊತ್ತು ನಿರ್ದೇಶನ ಹೊಣೆ ಹೊತ್ತಿದ್ದು, ಜೊತೆಗೆ ನಿರ್ಮಾಣ ಮಾಡುತ್ತಿದ್ದೇನೆ. ಉತ್ತರ ಕರ್ನಾಟಕ […]

Advertisement

Wordpress Social Share Plugin powered by Ultimatelysocial