ಚಾಮರಾಜನಗರ: ತಡರಾತ್ರಿ ಸುರಿದ ಭಾರಿ ಮಳೆಗೆ ಮನೆಗೋಡೆ ಕುಸಿದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಕುಳ್ಳೂರು ಗ್ರಾಮದಲ್ಲಿ ನಡೆದಿದೆ.
ಕುಳ್ಳೂರು ಗ್ರಾಮದ ಮಹಾದೇವ(53) ಮೃತ ದುರ್ದೈವಿ. ಗ್ರಾಮದ ಹಳೇ ಕಟ್ಟಡಕ್ಕೆ ಹೊಂದಿಕೊಂಡಂತೆ ಮಣ್ಣಿನ ಗೋಡೆ ಹಾಕಿಕೊಂಡು ಜೀವನ ಸಾಗಿಸುತ್ತಿದ್ದರು. ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಇಂದು ಮುಂಜಾನೆ ಕಟ್ಟಡದ ಗೋಡೆ, ಈತನ ಮಣ್ಣಿನ ಗೋಡೆ ಎರಡೂ ಬಿದ್ದು ಮಲಗಿದ್ದಲ್ಲೇ ಅಸುನೀಗಿದ್ದಾರೆ.
ಸದ್ಯ, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದ್ದು ಸ್ಥಳಕ್ಕೆ ಗ್ರಾಪಂ ಅಧಿಕಾರಿಗಳು ಭೇಟಿ ಕೊಟ್ಟಿದ್ದಾರೆ, ಚಾಮರಾಜನಗರ ಪೂರ್ವ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada