ಕಲ್ಬುರ್ಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಗಡಿಲಿಂಗದಳ್ಳಿ ಗ್ರಾಮದ ಅಂಗನವಾಡಿ ಕೇಂದ್ರ 1ರಲ್ಲಿ ಇಂದು ಚಿಂಚೋಳಿ ತಾಲ್ಲೂಕಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಂಗನವಾಡಿ ಸೂಪರ್ವೆಜರ್ ಆದ ಸರೋಜ ಅವರ ನೇತ್ರತ್ವದಲ್ಲಿ ಪೌಷ್ಟಿಕ ಆಹಾರ ಕಾರ್ಯಕ್ರಮ ಮತ್ತು ಗಡಿಲಿಂಗದಳ್ಳಿ ಗ್ರಾಮ ಪಂಚಾಯತ್ ಅದ್ಯಕ್ಷರಿಗೆ ಎಲ್ಲಾ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿದ್ದರು.
ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಗೌರಿಶಂಕರ ಉಪ್ಪಿನ ಸದಸ್ಯರಾ ಶಿವಕುಮಾರ್ ಬಸಪ್ಪ ನಾಗಪ್ಪ ಜಗನ್ನಾಥ ಮತ್ತು ಅಂಗನವಾಡಿ ಎಲ್ಲಾ ಕಾರ್ಯಕರ್ತರು ಸಹಾಯಕಿಯರು ಮತ್ತು ಊರಿನ ಗ್ರಾಮಸ್ಥರೆಲ್ಲರೂ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು…
ವರದಿ… ಸಂಗಪ್ಪ ದಂಡಿನ