ಮೂಡುಬಿದಿರೆ ತಾಲೂಕಿನಲ್ಲಿ ನೂತನವಾಗಿ ನಿರ್ಮಾಣಗೊಂಡ ತಾಲ್ಲೂಕು ಆಡಳಿತ ಸೌಧ ಉದ್ಘಾಟನೆ
ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿ ಸಿಎಂ ಬಸವರಾಜ ಬೊಮ್ಮಾಯಿಯವರಿಂದ ಹೇಳಿಕೆ
ರಾಜ್ಯದಲ್ಲಿ 6.50 ಲಕ್ಷ ಎಕರೆ ಭೂಮಿಯನ್ನು ಡೀಮ್ಡ್ ಫಾರೆಸ್ಟ್ ನಿಂದ ಹೊರಗಿಡಲು ಸರಕಾರದ ಮಹತ್ವದ ನಿರ್ಧಾರ
ಡೀಮ್ಡ್ ಫಾರೆಸ್ಟ್ ಹಿನ್ನೆಲೆ ತೀವ್ರ ಸಂಕಷ್ಟಕ್ಕೊಳಗಾಗಿದ್ದ ಜನರು ಆದರೆ ಯಾವುದೇ ರೀತಿಯಲ್ಲಿ ಸಮಸ್ಯೆ ಬಗೆಹರಿದಿರಲಿಲ್ಲ
ಇದೀಗ 6.50 ಲಕ್ಷ ಎಕರೆ ಭೂಮಿಯನ್ನು ಡೀಮ್ಡ್ ಅರಣ್ಯದಿಂದ ಹೊರಗಿಡಲು ಸುಪ್ರೀಂ ಕೋರ್ಟ್ ಗೆ ಅಫಿದವಿತ್ ಸಲ್ಲಿಸಲಾಗಿದೆ.ರಾಜ್ಯ ಸಚಿವ ಸಂಪುಟದಲ್ಲಿ ಈ ಬಗ್ಗೆ ತೀರ್ಮಾನ ಕೈಗೊಂಡು ಸಹಿ ಹಾಕಿದ್ದೇನೆ.
ಡೀಮ್ಡ್ ಅರಣ್ಯ ಸಮಸ್ಯೆಯಂತೆಯೇ ಕುಮ್ಕಿ, ಕಾನ ಬಾಣೆ, ಸೊಪ್ಪಿನ ಬೆಟ್ಟ ಸಮಸ್ಯೆಗಳನ್ನೂ ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರದಿಂದ ಸೂಕ್ತ ಕ್ರಮ
ವಿರೋಧ ಪಕ್ಷದವರು ಬೇರೆ ಬೇರೆ ವಿಚಾರಗಳನ್ನು ಹೇಳುತ್ತಿರುತ್ತಾರೆ. ಆದರೆ ನಾನು ಅದು ಯಾವುದಕ್ಕೂ ಪ್ರತಿಕ್ರಿಯೆ ನೀಡೋಲ್ಲ.
ನಾನಾಯಿತು ನನ್ನ ರಾಜ್ಯದ ಅಭಿವೃದ್ಧಿ ಕಾರ್ಯಗಳು ಆಯ್ತು ಎಂದು ಇರಲಿದ್ದೇನೆ.ನನಗೆ ಅಭಿವೃದ್ಧಿ ಕೆಲಸ ಮಾಡಲು ದಿನದ 24 ಗಂಟೆಯೂ ಸಾಲುವುದಿಲ್ಲ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: