ರೈತರಿಗೆ ಶುಭ ಸುದ್ದಿ:

ರೈತರಿಗೆ ರಾಜ್ಯ ಸರ್ಕಾರ ಶುಭ ಸುದ್ದಿ ನೀಡಿದೆ. ಎಸ್. ಬಂಗಾರಪ್ಪನವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಜಾರಿಗೊಳಿಸಿರುವ ಕೃಷಿ ಪಂಪ್ ಸೆಟ್ ಗೆ ಉಚಿತ ವಿದ್ಯುತ್ ಯೋಜನೆಯನ್ನು ಮುಂದುವರಿಸಲು ತೀರ್ಮಾನಿಸಲಾಗಿದೆ.

ಇಂಧನ ಸಚಿವ ವಿ. ಸುನಿಲ್ ಕುಮಾರ್, ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ಈ ಕುರಿತಂತೆ ಮಾಹಿತಿ ನೀಡಿದ್ದು, ಬಂಗಾರಪ್ಪನವರು ರೈತರಿಗೆ ಉಚಿತ ವಿದ್ಯುತ್ ನೀಡುವ ಕುರಿತಂತೆ ಮಹತ್ವದ ತೀರ್ಮಾನ ಕೈಗೊಂಡಿದ್ದರು ಎಂದು ಹೇಳಿದರು.

ಆ ಸಂದರ್ಭದಲ್ಲಿ ರೈತರು 3,000 ಕೋಟಿ ರೂಪಾಯಿ ಪ್ರೋತ್ಸಾಹ ಧನ ಪಡೆದಿದ್ದು, ಇಂದು ಸುಮಾರು 16 ಸಾವಿರ ಕೋಟಿ ರೂಪಾಯಿ ಪ್ರೋತ್ಸಾಹ ಧನ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.

ಅಲ್ಲದೆ ಸುಟ್ಟ ಟಿಸಿ ಗಳನ್ನು 24 ಗಂಟೆಗಳಲ್ಲಿ ಸಿದ್ಧಪಡಿಸುವ ಉದ್ದೇಶದಿಂದ ವಿದ್ಯುತ್ ಬ್ಯಾಂಕ್ ಸ್ಥಾಪಿಸಲಾಗಿದೆ ಎಂದು ಮಾಹಿತಿ ನೀಡಿದರು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಈಗ ಮತ್ತೊಬ್ಬರಿಂದ 'ಬಂಪರ್' ಆಫರ್.

Fri Feb 3 , 2023
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೋಲಾರ ಕ್ಷೇತ್ರದಿಂದ ಕಣಕ್ಕಿಳಿಯುವುದಾಗಿ ಬಹಿರಂಗವಾಗಿಯೇ ಘೋಷಿಸಿದ್ದು, ಇಷ್ಟಾದರೂ ಸಹ ರಾಜ್ಯದಾದ್ಯಂತ ಇರುವ ಅವರ ಅಭಿಮಾನಿಗಳು ತಮ್ಮ ಕ್ಷೇತ್ರಕ್ಕೆ ಬಂದು ಸ್ಪರ್ಧಿಸುವಂತೆ ಆಹ್ವಾನ ನೀಡುತ್ತಿರುವುದು ನಿಂತಿಲ್ಲ. ಕೆಲ ದಿನಗಳ ಹಿಂದೆ ಯಾದಗಿರಿಯ ಬಿಜೆಪಿ ಕಾರ್ಯಕರ್ತರೊಬ್ಬರು ಸಿದ್ದರಾಮಯ್ಯನವರು ಈ ಕ್ಷೇತ್ರದಿಂದ ಕಣಕ್ಕಿಳಿದರೆ ಒಂದು ಕೋಟಿ ರೂಪಾಯಿ ನೀಡುವುದಾಗಿ ಘೋಷಿಸಿದ್ದರಲ್ಲದೆ, ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಪಕ್ಷ ಸೇರಿ 50 ರಿಂದ 60 ಸಾವಿರ ಮತಗಳ ಅಂತರದಿಂದ ಅವರನ್ನು ಗೆಲ್ಲಿಸಿಕೊಂಡು ಬರುವುದಾಗಿ […]

Advertisement

Wordpress Social Share Plugin powered by Ultimatelysocial