ವರ್ಗಾವಣೆಯ ನಿರೀಕ್ಷೆಯಲ್ಲಿದ್ದ ಪೊಲೀಸರಿಗೆ ಗುಡ್ ನ್ಯೂಸ್ :

 

ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ರಾಜ್ಯ ಪೊಲೀಸ್ ಇಲಾಖೆಯ ಎಸ್ ಐ ಗಿಂತ ಕೆಳ ಹಂತದ ಪೊಲೀಸರು ಮತ್ತು ಆಡಳಿತ ಸಿಬ್ಬಂದಿಯ ಅಂತರ್ ಜಿಲ್ಲೆ ಘಟಕ ಹಾಗೂ ವಲಯ ವರ್ಗಾವಣೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.ಪೊಲೀಸರ ಅಂತರ ಜಿಲ್ಲಾ ಘಟಕ ವರ್ಗಾವಣೆಗೆ ಸಚಿವ ಸಂಪುಟದ ಅನುಮೋದನೆ ಬೆನ್ನಲ್ಲೇ ರಾಜ್ಯ ಸರ್ಕಾರವು ವರ್ಗಾವಣೆ ಅಧಿಸೂಚನೆ ಹೊರಡಿಸಿದ್ದು, ಸಬ್ ಇನ್ಸ್ ಪೆಕ್ಟರ್, ಸಹಾಯಕ ಸಬ್ ಇನ್ಸ್ ಪೆಕ್ಟರ್, ಹೆಡ್ ಕಾನ್ ಸ್ಟೇಬಲ್, ಕಾನ್ ಸ್ಟೇಬಲ್, ಪ್ರಥಮ ದರ್ಜೆ ಸಹಾಯಕ ಹಾಗೂ ದಲಾಯತ್ ಗಳ ಅಂತರ್ ಜಿಲ್ಲೆ, ಘಟಕ, ಕಮಿಷನರೇಟ್ ಹಾಗೂ ವಲಯವಾರು ವರ್ಗಾವಣೆಗೆ ಆಯಾ ವಿಭಾಗದ ಮುಖ್ಯಸ್ಥರಿಗೆ ಅಧಿಕಾರ ನೀಡಲಾಗಿದೆ.ಇನ್ನು 1977 ರಿಂದ ಅಂತರ ಜಿಲ್ಲಾ ವರ್ಗಾವಣೆಗೆ ಇದ್ದ ನಿಯಮಗಳನ್ನು 2021 ರಲ್ಲಿ ನಾಗರಿಕ ಸೇವಾ ನಿಯಮಾವಳಿಗೆ ತಿದ್ದುಪಡಿ ತಂದು ರಾಜ್ಯ ಸರ್ಕಾರವು ರದ್ದುಗೊಳಿಸಿತ್ತು. ಇದಕ್ಕೆ ಪೊಲೀಸರಿಂದ ಆಕ್ಷೇಪಗಳು ವ್ಯಕ್ತವಾಗಿದ್ದವು. ಹೀಗಾಗಿ ರಾಜ್ಯ ಸರ್ಕಾರವು ಮತ್ತೆ ಹಳೇ ನಿಯಮ ಜಾರಿ ಮಾಡಿ ಆದೇಶ ಹೊರಡಿಸಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ದೇಶದ 5 ಸಹಕಾರಿ ಬ್ಯಾಂಕ್‌ಗಳಿಗೆ ನಿರ್ಬಂಧ ವಿಧಿಸಿದ RBI;

Sat Feb 25 , 2023
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (RBI) ದೇಶದ ಐದು ಸಹಕಾರಿ ಬ್ಯಾಂಕ್‌ಗಳ ಮೇಲೆ ನಿರ್ಬಂಧ ವಿಧಿಸಿದೆ. ಈ ನಿರ್ಬಂಧಗಳು ಆರು ತಿಂಗಳವರೆಗೆ ಜಾರಿಯಲ್ಲಿರುತ್ತವೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಪ್ರತ್ಯೇಕ ಹೇಳಿಕೆಗಳಲ್ಲಿ ತಿಳಿಸಿದೆ.ನಿರ್ಬಂಧಗಳು ಜಾರಿಯಲ್ಲಿರುವುದರಿಂದ ಆರ್‌ಬಿಐನ ಪೂರ್ವಾನುಮತಿಯಿಲ್ಲದೆ ಸಾಲ ನೀಡುವುದು, ಯಾವುದೇ ಹೂಡಿಕೆ ಮಾಡಲು, ಯಾವುದೇ ಹೊಣೆಗಾರಿಕೆಯನ್ನು ಹೊಂದಲು ಅಥವಾ ಆಸ್ತಿಗಳನ್ನು ವಿಲೇವಾರಿ ಮಾಡಲು ಸಾಧ್ಯವಿಲ್ಲ. ಸಹಕಾರ ಬ್ಯಾಂಕ್, ಲಕ್ನೋ (ಉತ್ತರ ಪ್ರದೇಶ) ಗ್ರಾಹಕರು, ಆದರ್ಶ ಮಹಿಳಾ ನಗರಿ […]

Advertisement

Wordpress Social Share Plugin powered by Ultimatelysocial