Good News : ‘ಕೇಂದ್ರ ಸರ್ಕಾರ’ದಿಂದ 60 ವರ್ಷ ಮೇಲ್ಪಟ್ಟವರಿಗೆ ಸಿಹಿ ಸುದ್ದಿ ; ತಿಂಗಳಿಗೆ ₹3,000 ಪಿಂಚಣಿ ಗ್ಯಾರೆಂಟಿ

ವದೆಹಲಿ : 60 ವರ್ಷ ಮೇಲ್ಪಟ್ಟವರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಅಸಂಘಟಿತ ಕಾರ್ಮಿಕರಿಗೆ ಉತ್ತಮ ಭವಿಷ್ಯವನ್ನ ಒದಗಿಸುವ ಉದ್ದೇಶದಿಂದ ಮೋದಿ ಸರ್ಕಾರವು ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್-ಧನ್ ಯೋಜನೆಯನ್ನ ಜಾರಿಗೆ ತಂದಿದೆ.ಸರ್ಕಾರದ ಈ ಪಿಂಚಣಿ ಯೋಜನೆಯು ಆ ವಲಯದಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಹೆಚ್ಚಿನ ಪ್ರಯೋಜನವನ್ನ ನೀಡುತ್ತದೆ. ಇದು ಅವರ ಭವಿಷ್ಯವನ್ನ ಆರ್ಥಿಕವಾಗಿ, ಬಲವಾಗಿ ಮತ್ತು ಸುಭದ್ರವಾಗಿಸುತ್ತದೆ.ಈ ಯೋಜನೆಯಡಿ, ಕೇಂದ್ರ ಸರ್ಕಾರವು 60 ವರ್ಷ ವಯಸ್ಸಿನ ನಂತ್ರ ಕಾರ್ಮಿಕರು, ರೈತರು ಮತ್ತು ಕೃಷಿ ಕಾರ್ಮಿಕರಿಗೆ ತಿಂಗಳಿಗೆ ಕನಿಷ್ಠ 1,000 ರೂಪಾಯಿಗಳಿಂದ 3,000 ಆರ್ಥಿಕ ನೆರವು ಸಿಗಲಿದೆ. ಅಲ್ಲದೆ, ಪಿಂಚಣಿ ಪಡೆಯುವ ಸಮಯದಲ್ಲಿ ಯಾರಾದರೂ ಮೃತಪಟ್ಟರೆ, ಫಲಾನುಭವಿಯ ಪತ್ನಿ ಅಥವಾ ಪತಿ ಪಿಂಚಣಿಯ ಅಡಿಯಲ್ಲಿ ಪಡೆದ ಮೊತ್ತದ 50% ಅನ್ನು ಕುಟುಂಬ ಪಿಂಚಣಿಯಾಗಿ ಪಡೆಯುತ್ತಾರೆ. ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್ ಧನ್ ಯೋಜನೆಗೆ ಸೇರಲು, ನೀವು ಆಧಾರ್ ಕಾರ್ಡ್ ಮತ್ತು ಬ್ಯಾಂಕ್ ಖಾತೆಯನ್ನು ಹೊಂದಿರುವುದು ಕಡ್ಡಾಯವಾಗಿದೆ. ಯೋಜನೆಗೆ ನೋಂದಾಯಿಸಲು, ನೀವು ನಿಮ್ಮ ಹತ್ತಿರದ ಅಧಿಕೃತ ವೆಬ್ಸೈಟ್ ಅಥವಾ ಕೇಂದ್ರಕ್ಕೆ ಹೋಗಬೇಕು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de…

 

 

 

 

 

Please follow and like us:

Leave a Reply

Your email address will not be published. Required fields are marked *

Next Post

ಇಂದು ಮಹತ್ವದ ಸಚಿವ ಸಂಪುಟ ಸಭೆ : ಪಂಚಮಸಾಲಿಗೆ 2ಎ ಮೀಸಲಾತಿ ಫೈನಲ್!

Thu Dec 29 , 2022
ಬೆಳಗಾವಿ : ಬೆಳಗಾವಿಯ ಸುವರ್ಣಸೌಧದಲ್ಲಿ ಇಂದು ಸಂಜೆ 5 ಗಂಟೆಗೆ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ಸೇರಿದಂತೆ ವಿವಿಧ ಸಮುದಾಯಗಳ ಮೀಸಲಾತಿ ಬೇಡಿಕೆ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ.ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಿಗದಿಯಾಗಿದ್ದು, ಸಭೆಯಲ್ಲಿ ಹಲವು ಮಹತ್ವದ ವಿಚಾರಗಳು ಚರ್ಚೆಯಾಗಲಿದೆ. ಬೆಳಗಾವಿ ಚಳಿಗಾಲದ ಅಧಿವೇಶನ ಇಂದೇ ಮುಕ್ತಾಯಗೊಳ್ಳುವ ಸಾಧ್ಯತೆ ಇದೆ. ನಿಗದಿತ ಅವಧಿಗಿಂತ ಒಂದು ದಿನ […]

Advertisement

Wordpress Social Share Plugin powered by Ultimatelysocial