ಉತ್ತಮ ಪ್ರಜಾಕೀಯ ಪಕ್ಷಕ್ಕೆ ಸಿಕ್ತು ‘ಆಟೋ ರಿಕ್ಷಾ’ ಬಲ; ಟ್ವೀಟ್‌ನಲ್ಲಿ ಸಂತಸ ಹಂಚಿಕೊಂಡ ಉಪೇಂದ್ರ.

ಕರ್ನಾಟಕ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಎಲ್ಲ ಪಕ್ಷಗಳು ಪ್ರಚಾರ ಕಾರ್ಯವನ್ನು ಜೋರಾಗಿ ನಡೆಸುತ್ತಿವೆ. ಇದರ ನಡುವೆಯೇ ನಟ ಕಮ್‌ ರಾಜಕಾರಣಿ ಉಪೇಂದ್ರ  ಅವರ ಉತ್ತಮ ಪ್ರಜಾಕೀಯ ಪಕ್ಷಕ್ಕೆ  ಆಟೋ ರಿಕ್ಷಾ  ಚಿಹ್ನೆ ಲಭಿಸಿದೆ. ಚುನಾವಣಾ ಆಯೋಗ ಈ ಬಗ್ಗೆ ಆದೇಶ ಹೊರಡಿಸಿದ್ದು, ಚುನಾವಣಾ ಆಯೋಗದ ಆದೇಶವನ್ನು ಉಪೇಂದ್ರ ಅವರು ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.ಈ ಬಗ್ಗೆ ಟ್ವೀಟ್‌ ಮಾಡಿರುವ ಉಪೇಂದ್ರ, ಉತ್ತಮ ಪ್ರಜಾಕೀಯ ಪಕ್ಷಕ್ಕೆ ಈ ಬಾರಿಯ 2023 ವಿಧಾನಸಭಾ ಚುನಾವಣೆಗೆ ಕಾಮನ್ ಸಿಂಬಲ್ “ಆಟೋ ರಿಕ್ಷಾ “ ಚಿಹ್ನೆ ಲಭಿಸಿದೆ. ಎಲ್ಲರಿಗೂ ಶುಭಾಶಯಗಳು ಎಂದು ಹೇಳಿದ್ದಾರೆ. ಉತ್ತಮ ಪ್ರಜಾಕೀಯ ಪಕ್ಷದಿಂದ ಕರ್ನಾಟಕ ವಿಧಾನಸಭಾ ಚುನಾವಣೆ 2023ರಲ್ಲಿ ಸ್ಪರ್ಧಿಸುವ ಎಲ್ಲ ಅಭ್ಯರ್ಥಿಗಳಿಗೆ ಆಟೋ ರಿಕ್ಷಾವನ್ನು ಸಾಮಾನ್ಯ ಚಿಹ್ನೆ ಎಂದು ಚುನಾವಣಾ ಆಯೋಗ ನಿಗದಿಪಡಿಸಿದೆ. ಉತ್ತಮ ಪ್ರಜಾಕೀಯ ಪಕ್ಷ ನೋಂದಾಯಿತ ಮಾನ್ಯತೆ ಇಲ್ಲದ ಪಕ್ಷವಾಗಿರುವುದರಿಂದ ಚುನಾವಣೆ ವೇಳೆ ಚುನಾವಣಾ ಆಯೋಗದಿಂದ ಚಿಹ್ನೆ ಪಡೆಯಬೇಕಾಗಿದೆ.ಉಪೇಂದ್ರ ಅವರು ಉತ್ತಮ ಪ್ರಜಾಕೀಯ ಪಕ್ಷವನ್ನು 2018ರ ಸೆಪ್ಟೆಂಬರ್‌ 18ರಂದು ಪ್ರಾರಂಭಿಸಿದ್ದರು. ಇದಕ್ಕೂ ಮುನ್ನ 2013ರ ವಿಧಾನಸಭಾ ಚುನಾವಣೆಯಲ್ಲಿಯೇ ಉಪೇಂದ್ರ ಅವರು ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿ (ಕೆಪಿಜೆಪಿ) ಮೂಲಕ ರಾಜಕೀಯ ಪ್ರವೇಶಿಸಿದ್ದರು. ಆದರೆ, ಕೆಪಿಜೆಪಿ ಸಂಸ್ಥಾಪಕ ಮಹೇಶ್ ಗೌಡ ಅವರ ನಡೆಯಿಂದ ಬೇಸತ್ತು ಕೆಪಿಜೆಪಿಯಿಂದ ಹೊರಬಂದಿದ್ದರು. ಅದಾದ ಬಳಿಕ 2018ರಲ್ಲಿ ತಮ್ಮ ಜನ್ಮದಿನ ಅಂದರೆ ಸೆಪ್ಟೆಂಬರ್‌ 18ರಂದು ಉಪೇಂದ್ರ ಅವರು ಉತ್ತಮ ಪ್ರಜಾಕೀಯ ಪಕ್ಷ ಎಂಬ ಹೊಸ ಪಕ್ಷವನ್ನು ಅಧಿಕೃತವಾಗಿ ಘೋಷಿಸಿದ್ದರು.
ಹೊಸ ಪಕ್ಷ ಸ್ಥಾಪನೆಯ ವೇಳೆಯೇ ವಿನೂತನ ಕಲ್ಪನೆ ಮೂಲಕ ಉಪೇಂದ್ರ ಅವರು ಗಮನ ಸೆಳೆದಿದ್ದರು. ಅಭ್ಯರ್ಥಿಗಳ ಆಯ್ಕೆಗೆ ಸಂದರ್ಶನ ಮತ್ತು ಅವರ ಕ್ಷೇತ್ರದ ಸಮಸ್ಯೆಗಳೇನು, ಅದಕ್ಕೆ ಪರಿಹಾರ ಎನ್ನುವ ಸಂಕ್ಷಿಪ್ತ ವರದಿಯನ್ನು ಆಧರಿಸಿ ಪಕ್ಷವನ್ನು ಸಂಘಟಿಸುತ್ತಿದ್ದಾರೆ. 2023ರ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಉಪೇಂದ್ರ ಅವರು ತಮ್ಮ ಪಕ್ಷದ ಉದ್ದೇಶಗಳನ್ನು, ಚುನಾವಣೆಯ ಸಿದ್ಧತೆಯನ್ನು ಈ ಕೆಳಗಿನಂತೆ ಜನರ ಮುಂದೆ ಇಟ್ಟಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

 

Please follow and like us:

Leave a Reply

Your email address will not be published. Required fields are marked *

Next Post

ಸಿದ್ದರಾಮಯ್ಯ ಕಾರ್ ಎದುರು ಮೋದಿ..ಮೋದಿ, ಜೈ ಶ್ರೀರಾಮ್ ಘೋಷಣೆ ಕೂಗಿದ ಯುವಕರು!

Fri Feb 24 , 2023
ವಿಜಯಪುರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಜಯಪುರ ನಿನ್ನೆ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಸಮಾವೇಶ ಮುಗಿಸಿಕೊಂಡು ವಾಪಸ್ ತೆರಳುವಾಗ ರಸ್ತೆ ಬದಿ ನಿಂತಿದ್ದ ಯುವಕರು ಕಾರ್ ಎದುರು ಮೋದಿ ಮೋದಿ, ಜೈ ಶ್ರೀರಾಮ್ ಘೋಷಣೆ ಕೂಗಿರುವ ಘಟನೆ ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ಪಟ್ಟಣದಲ್ಲಿ ನಡೆದಿದೆ.ರಸ್ತೆ ಬದಿ ನಿಂತಿದ್ದ ಯುವಕರು ಸಿದ್ದರಾಮಯ್ಯ ಕಾರ್ ಬರುತ್ತಿದ್ದಂತೆ ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ. ಆದರೆ ವಾಹನ ದಟ್ಟಣೆ ಇರುವುದರಿಂದ ಸಿದ್ದರಾಮಯ್ಯ ಅವರು […]

Advertisement

Wordpress Social Share Plugin powered by Ultimatelysocial