‘ಬಾಲಿವುಡ್’ನತ್ತ ಗೂಗ್ಲಿ ಡೈರೆಕ್ಟರ್… ಬಾಲಿವುಡ್ ಸ್ಟಾರ್ ಪರಂಬ್ರತ ಚಟ್ಟೋಪಾಧ್ಯಾಗೆ ಪವನ್ ಒಡೆಯರ್ ಆಕ್ಷನ್ ಕಟ್!

ಕನ್ನಡ ಚಿತ್ರರಂಗದ ಟ್ಯಾಲೆಟೆಂಡ್ ಡೈರೆಕ್ಟರ್, ಲಿರಿಕ್ಸ್ ರೈಟರ್, ಪ್ರೊಡ್ಯೂಸರ್ ಪವನ್ ಒಡೆಯರ್ ಈಗ ಬಾಲಿವುಡ್ ನತ್ತ ಹೆಜ್ಜೆ ಇಟ್ಟಿದ್ದಾರೆ. ಚಂದನವನದ ಚಿತ್ರರಸಿಕರ ಮಡಿಲಿಗೆ ಗೋವಿಂದಾಯ ನಮಃ, ರಣವಿಕ್ರಮ, ಗೂಗ್ಲಿ, ನಟಸಾರ್ವಭೌಮ, ಸೇರಿದಂತೆ ಹಲವು ಸೂಪರ್ ಹಿಟ್ ಗಳನ್ನು ಹಾಕಿರುವ ಪವನ್ ಒಡೆಯರ್ ನಟನೆಯಲ್ಲಿಯೂ ಛಾಪೂ ಮೂಡಿಸಿದ್ದಾರೆ. ಕಳೆದ 10 ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ಗೂಗ್ಲಿ ಡೈರೆಕ್ಟರ್ ಈಗ ಡೈರೆಕ್ಟ್ ಆಗಿ ಬಾಲಿವುಡ್ ಗೆ ಲ್ಯಾಂಡ್ ಆಗಿದ್ದಾರೆ.

’ನೋಟರಿ’ ಚಿತ್ರಕ್ಕೆ ಪವನ್ ಸಾರಥಿ

ಪವನ್ ಒಡೆಯರ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಮೊದಲ ಬಾಲಿವುಡ್ ಸಿನಿಮಾಗೆ ನೋಟರಿ ಎಂದು ಟೈಟಲ್ ಇಡಲಾಗಿದ್ದು, ಇದೊಂದು ಕಾಮಿಡಿ ಡ್ರಾಮಾ ಸಿನಿಮಾವಾಗಿದೆ. ಬೆಂಗಾಳಿಯ ಖ್ಯಾತ ಕಲಾವಿದ, ನಿರ್ದೇಶಕ, ಬಿಟೌನ್ ಬ್ಯೂಟೀಸ್ ಗಳಾದ ವಿದ್ಯಾ ಬಾಲನ್, ಅನುಷ್ಕಾ ಶರ್ಮಾ ಹಾಗೂ ರವೀನಾ ಟಂಡನ್ ಜೊತೆ ನಟಿಸಿರುವ.. ಕಹಾನಿ, ಪರಿ ಹಾಗೂ ನೆಟ್ ಪ್ಲಿಕ್ಸ್ ನಲ್ಲಿ ರಿಲೀಸ್ ಆಗಿರುವ ಸೂಪರ್ ಹಿಟ್ ಶೋ ಅರಣ್ಯಕಾದಲ್ಲಿ ನಟಿಸಿರುವ ಪರಂಬ್ರತ ಚಟ್ಟೋಪಾಧ್ಯಾ ನೋಟರಿ ಸಿನಿಮಾದ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ.

ನೋಟರಿ ಸಿನಿಮಾಗೆ ಪವನ್ ಒಡೆಯರ್ ನಿರ್ದೇಶನದ ಜೊತೆಗೆ ನಿರ್ಮಾಣದ ಹೊಣೆ ಸಹ ಹೊತ್ತಿದ್ದಾರೆ. ಗುಪ್ತ್, ಮೋಹರಾ, ಶೆರ್ ಷಾ ಸೇರಿದಂತೆ ಹಲವು ಬ್ಲಾಕ್ ಬಸ್ಟರ್ ಹಿಟ್ ಸಿನಿಮಾಗಳ ಖ್ಯಾತ ನಿರ್ಮಾಪಕ ಶಬೀರ್ ಬಾಕ್ಸ್ ವಾಲ್ ಅವರ ಕಾಶ್ ಎಂಟರ್ ಟೈನ್ ಮೆಂಟ್ ಜೊತೆಗೂಡಿ ಪವನ್ ಒಡೆಯರ್ ತಮ್ಮದೇ ಒಡೆಯರ್ ಮೂವೀಸ್ ಬ್ಯಾನರ್ ನಡಿ ನೋಟರಿ ಚಿತ್ರಕ್ಕೆ ಹಣ ಹಾಕಿದ್ದಾರೆ. ಸದ್ಯ ಪ್ರೀ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿರುವ ಚಿತ್ರತಂಡ ಆಗಸ್ಟ್ ತಿಂಗಳಲ್ಲಿ ಮಧ್ಯಪ್ರದೇಶ ಅಥವಾ ಛತ್ತೀಸ್ ಗಡಲ್ಲಿ ಶೂಟಿಂಗ್ ಮಾಡಲು ಪ್ಲ್ಯಾನ್ ಹಾಕಿಕೊಂಡಿದ್ದು, ಸದ್ಯದಲ್ಲಿಯೇ ಉಳಿದ ತಾರಾಗಣ ಮತ್ತಿತರ ಅಪ್ ಡೇಟ್ ಗಳನ್ನು ಪ್ರಚಂಚದ ಎದುರು ತೆರೆದಿಡಲಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದ ಸಂತೋಷ್!

Thu Apr 14 , 2022
ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದ ಸಂತೋಷ್ ಪಾಟೀಲ್ ಅಂತ್ಯಕ್ರಿಯೆ ಇಂದು ಬೆಳಗಾವಿ ತಾಲೂಕಿನ ಬಡಸ ಗ್ರಾಮದಲ್ಲಿ ನಡೆಯಿತು. ಸಂತೋಷ್ ಪಾಟೀಲ್ ಅವರ ಜಮೀನಿನಲ್ಲಿ ಕಾಂಗ್ರೆಸ್ ನಾಯಕರ ತೀವ್ರ ವಿರೋಧದ ನಡುವೆಯೂ ಗ್ರಾಮಸ್ಥರು ಹಾಗೂ ಕುಟುಂಬಸ್ಥರು ಸೇರಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಶವಸಂಸ್ಕಾರದ ಹಂತದಲ್ಲಿಯೂ ಹೈಡ್ರಾಮಾ ನಡೆದಿದ್ದು, ಕರ್ನಾಟಕ ಸರ್ಕಾರದ ಪ್ರತಿನಿಧಿಗಳು ಸ್ಥಳಕ್ಕೆ ಬರಬೇಕು. ಸಂತೋಷ್ ಮಾಡಿರುವ ಕೆಲಸಕ್ಕೆ ಹಣ ಬಿಡುಗಡೆ ಮಾಡುವ ಖಾತ್ರಿ […]

Advertisement

Wordpress Social Share Plugin powered by Ultimatelysocial